ನೂತನ ನಿಯಮ | ಈ ಅಂಗಡಿ ಮುಂಗಟ್ಟುಗಳು ದಿನದ 24 ಗಂಟೆ ತೆರೆದಿರಬಹುದು

Date:

ಅಂಗಡಿ ಮುಂಗಟ್ಟು ದಿನದ 24 ಗಂಟೆಗಳು ತೆರೆದಿರುವುದಕ್ಕೆ ಸಂಬಂಧಿಸಿ ರಾಜ್ಯ ಕಾರ್ಮಿಕ ಇಲಾಖೆಯು ನೂತನ ನಿಯಮಗಳು ಮತ್ತು ಷರತ್ತುಗಳನ್ನು ಘೋಷಿಸಿದೆ. ಹತ್ತು ಅಥವಾ ಅದಕ್ಕಿಂತ ಹೆಚ್ಚು ಜನರು ಕೆಲಸ ಮಾಡುವ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ವರ್ಷದ ಎಲ್ಲಾ ದಿನಗಳಲ್ಲಿ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕಾರ್ಮಿಕ ಇಲಾಖೆಯು ಶುಕ್ರವಾರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ 1961ರ ಅಡಿಯಲ್ಲಿ ಈ ಅಧಿಸೂಚನೆಯನ್ನು ಹೊರಡಿಸಿದೆ. ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇನ್ನು 2021ರ ಜನವರಿ 2ರಂದು ಸರ್ಕಾರ ಇದೇ ಆದೇಶ ಹೊರಡಿಸಿತ್ತು.

ನಿಯಮ ಪ್ರಕಾರ ಗರಿಷ್ಠ ಕೆಲಸದ ಅವಧಿಯು ದಿನಕ್ಕೆ ಎಂಟು ಗಂಟೆಗಳು ಮತ್ತು ವಾರಕ್ಕೆ 48 ಗಂಟೆಗಳು ಆಗಿದೆ. ಹೆಚ್ಚಿನ ಅವಧಿಯ ಕೆಲಸಕ್ಕೆ (ಓವರ್‌ ಟೈಮ್) ಅವಕಾಶ ನೀಡಲಾಗಿದೆ. ಆದರೆ ಅದಕ್ಕೂ ಮಿತಿಯನ್ನು ವಿಧಿಸಲಾಗಿದೆ. ದಿನಕ್ಕೆ 10 ಗಂಟೆಗಳು ಮತ್ತು ವಾರಕ್ಕೆ 50 ಗಂಟೆಗಳವರೆಗೆ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ

ಇನ್ನು ಎಲ್ಲಾ ಉದ್ಯೋಗಿಗಳಿಗೆ ವೇತನವು ಕರ್ನಾಟಕ ವೇತನ ಪಾವತಿ ನಿಯಮಗಳು 1963ಕ್ಕೆ ಅನುಗುಣವಾಗಿರಬೇಕು. ಯಾವುದೇ ಉದ್ಯೋಗದಾತರು ರಜಾದಿನಗಳಲ್ಲಿ ಅಥವಾ ಸಾಮಾನ್ಯ ಸಮಯವನ್ನು ಮೀರಿ ಹೆಚ್ಚಿನ ಕೆಲಸವನ್ನು ನೌಕರರಿಗೆ ನೀಡಿದರೆ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಪ್ರತಿ ಉದ್ಯೋಗಿಗೆ ವಾರಕ್ಕೆ ಒಂದು ದಿನ ರಜೆ ನೀಡಬೇಕು. ಅದಕ್ಕೆ ಅನುಗುಣವಾಗಿ ಉದ್ಯೋಗಿಗಳನ್ನು ನೇಮಿಸಿಕೊಂಡಿರಬೇಕು. ಪಾರದರ್ಶಕತೆಯನ್ನು ಹೆಚ್ಚಿಸಲು, ಪ್ರತಿ ಉದ್ಯೋಗಿಯ ವಿವರಗಳನ್ನು ಹೊಂದಿರಬೇಕು, ಜೊತೆಗೆ ಅವರು ತೆಗೆದುಕೊಂಡ ರಜೆಯ ದಾಖಲೆ ಹೊಂದಿರಬೇಕು. ಯಾವುದೇ ನಿಯಮ ಉಲ್ಲಂಘನೆಯಾಗಿದ್ದರೆ ಉದ್ಯೋಗದಾತ/ ಮ್ಯಾನೇಜರ್ ಮೇಲೆ ದಂಡವನ್ನು ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇನ್ನು ಪಬ್‌ಗಳು, ಕ್ಲಬ್‌ಗಳು ಮತ್ತು ಬಾರ್‌ಗಳಿಗೆ ಈ ನಿಯಮವು ಅನ್ವಯಿಸುವುದಿಲ್ಲ. ಅವುಗಳಿಗೆ ಪ್ರತ್ಯೇಕ ನಿಯಮಗಳಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | 625 ಅಂಗಡಿಗಳಲ್ಲಿ ಇನ್ನು ಕನ್ನಡ ನಾಮಫಲಕ ಅಳವಡಿಕೆ ಬಾಕಿ

ಮಹಿಳೆಯರ ಸುರಕ್ಷತೆಗಾಗಿ ನಿಯಮಗಳು

ಯಾವುದೇ ದಿನವಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ರಾತ್ರಿ 8 ಗಂಟೆಯ ನಂತರ ಯಾವುದೇ ಮಹಿಳೆಯರನ್ನು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡಿಸಬಾರದು ಎಂದು ಸರ್ಕಾರ ಶುಕ್ರವಾರ ಘೋಷಿಸಿದೆ. ಹಾಗೆಯೇ ಮಹಿಳಾ ಉದ್ಯೋಗಿ ತಾವಾಗಿಯೇ ರಾತ್ರಿ 8ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಕೆಲಸ ಮಾಡಲು ಬಯಸಿದರೆ ಲಿಖಿತ ಒಪ್ಪಿಗೆಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಶಿಫ್ಟ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಸಾರಿಗೆ ಸೌಲಭ್ಯಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಮಹಿಳೆಯನ್ನು ನೇಮಿಸುವ ಪ್ರತಿಯೊಂದು ಅಂಗಡಿ ಮುಗ್ಗಟ್ಟುಗಳಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ಆಂತರಿಕ ದೂರುಗಳ ಸಮಿತಿಯನ್ನು ರಚಿಸಬೇಕು ಎಂದು ಸರ್ಕಾರ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...