ಇತರ ಧರ್ಮಗಳನ್ನು ಧರ್ಮ ಅನ್ನಬೇಕೋ, ಮತ ಅನ್ನಬೇಕೋ: ಪೇಜಾವರ ಶ್ರೀ

Date:

”ಇತರ ಧರ್ಮಗಳನ್ನು ಧರ್ಮ ಅನ್ನಬೇಕೋ, ಮತ ಅನ್ನಬೇಕೋ ಎಂದು ಗೊತ್ತಾಗುತ್ತಿಲ್ಲ” ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ವಿಶ್ವ ಹಿಂದೂ ಪರಿಷತ್ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಸಂತರ ಸಮಾವೇಶ’ದಲ್ಲಿ ಸ್ವಾಮೀಜಿಯವರು ಸಂವಿಧಾನದ ಕುರಿತು ನೀಡಿದ್ದ ಹೇಳಿಕೆ ಭಾರೀ ಆಕ್ರೋಶಕ್ಕೆ ಗುರಿಯಾಗಿತ್ತು. ಅದೇ ಸಮಾವೇಶದಲ್ಲಿ ಇತರ ಧರ್ಮಗಳ ಕುರಿತು ಅವರು ಕುಹಕವಾಡಿರುವ ಮಾತುಗಳ ವಿಡಿಯೊ ತುಣುಕು ಈಗ ಲಭ್ಯವಾಗಿದೆ.

”ಅವುಗಳೆಲ್ಲ ಧರ್ಮದ ಹೆಸರಲ್ಲಿ ವಿಜೃಂಭಿಸುತ್ತಿವೆ. ಆದರೆ ಇದು ನಮ್ಮದೇ ರಾಷ್ಟ್ರ, ನಾವು ಸುರಕ್ಷಿತವಾಗಿದ್ದೇವೆ ಎಂದು ಭಾವಿಸಿಕೊಂಡಿದ್ದೇವೆ. ಎಚ್ಚರ ತಪ್ಪಿದ್ದರಿಂದ ನಮ್ಮವರನ್ನು ಕಳೆದುಕೊಳ್ಳುತ್ತಿದ್ದೇವೆ. ಇತರ ಮತೀಯರು ಈ ದೇಶವನ್ನು ಕಬಳಿಸಬೇಕೆಂದು ವ್ಯವಸ್ಥಿತವಾಗಿ ಯೋಜಿತ ಕಾರ್ಯತಂತ್ರ  ರೂಪಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ಇತರ ಧರ್ಮೀಯರು ನಮ್ಮ ಮಂದಿಯನ್ನೆಲ್ಲ ಆಕ್ರಮಿಸಿಕೊಳ್ಳುತ್ತಾ ಬಲಿಷ್ಠರಾಗುತ್ತಿದ್ದಾರೆ. ನಾವಿನ್ನೂ ಜಾಗೃತರಾಗಿಲ್ಲ, ಜಾಗೃತರಾಗಬೇಕಿದೆ. ನಮ್ಮ ಧರ್ಮವನ್ನು ಗೌರವಿಸುವಂತಹ ಸಂವಿಧಾನವನ್ನು ನಾವು ರೂಪಿಸಬೇಕು” ಎಂದು ಹೇಳಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಇದನ್ನೂ ಓದಿರಿ: ವಕ್ಫ್ ಆಸ್ತಿಯೂ, ಬಿಜೆಪಿಯವರ ರೈತಪರ ಕಾಳಜಿಯೂ…

ಸ್ವಾತಂತ್ರ್ಯ ಬಂದ ಮೇಲೆ ಹಿಂದೂರಾಷ್ಟ್ರ ಜಾತ್ಯತೀತ ರಾಷ್ಟ್ರವಾಯಿತು. ನಾವು ಹಿಂದೂಸ್ತಾನದಲ್ಲಿ ಇದ್ದೇವೆ ಎಂಬುದು ನಮ್ಮ ಭ್ರಮೆ. ಇದು ನಮ್ಮದೇ ದೇಶ; ನಾವು ಸುರಕ್ಷಿತವಾಗಿ, ಸುಭದ್ರವಾಗಿ ಇದ್ದೇವೆ ಎಂದುಕೊಂಡಿದ್ದೇವೆ. ಆದರೆ ಇತರೆ ಧರ್ಮಗಳು (ಅವುಗಳನ್ನು ಧರ್ಮ ಎನ್ನಬೇಕೋ, ಮತ ಎನ್ನಬೇಕೋ ಗೊತ್ತಿಲ್ಲ) ವಿಜೃಂಭಿಸುತ್ತಿವೆ ಎಂದು ಸ್ವಾಮೀಜಿ ವ್ಯಂಗ್ಯವಾಡಿದ್ದಾರೆ.

ಇತರ ಮತೀಯರು ತಮ್ಮ ಮಕ್ಕಳಿಗೆ ತಮ್ಮ ಮತದ ಬಗ್ಗೆ ವಿಶೇಷ ಶಿಕ್ಷಣ ಕೊಡುತ್ತಾರೆ. ನಮ್ಮಲ್ಲಿ ಅಂತಹ ವ್ಯವಸ್ಥೆ ಇಲ್ಲವಾಗಿದೆ. ನಮ್ಮ ಒಗ್ಗಟ್ಟಿನ ಕೊರತೆಯಿಂದ ಹಿಂದೂ ವಿರೋಧಿ ಸರ್ಕಾರಗಳು ಅಧಿಕಾರಕ್ಕೆ ಬರುತ್ತಿವೆ. ಚುನಾವಣೆಯಲ್ಲಿ ನಾವು ಒಂದಾಗಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.

ಸ್ವಾಮೀಜಿಯವರ ಹೇಳಿಕೆಗೆ ಟೀಕೆ

ಹಿಂದೂ ಧರ್ಮವನ್ನು ಮಾತ್ರ ಧರ್ಮ ಎಂದು, ಇತರ ಧರ್ಮಗಳನ್ನು ‘ಮತ’ ಎಂದಿರುವುದು ಟೀಕೆಗೆ ಗುರಿಯಾಗಿದೆ. ಧರ್ಮಗಳ ನಡುವೆ ಬಾಂಧವ್ಯ ಬೆಸೆಯಬೇಕಾದ ಗುರುಪೀಠಗಳು, ರಾಜಕಾರಣಿಗಳಂತೆ ಮಾತನಾಡುತ್ತಾ, ಧರ್ಮಧರ್ಮಗಳ ನಡುವೆ ಅಸಹನೆಯನ್ನು ಬಿತ್ತುವ ಕೆಲಸಕ್ಕೆ ಕೈ ಹಾಕಿದ್ದಾರೆಂಬ ಟೀಕೆ ವ್ಯಕ್ತವಾಗುತ್ತಿದೆ.

ಹಿಂದೂ ಧರ್ಮ ತೊರೆದು, ಮತ್ತೊಂದು ಧರ್ಮಕ್ಕೆ ಹೋದರೆ ಅದನ್ನು ಮತಾಂತರ ಎಂದು ಸ್ವಾಮೀಜಿಗಳು ಹೇಳುತ್ತಾರೆ. ‘ಮತದಿಂದ ಮತಕ್ಕೆ ಹೋದರೆ ಮತಾಂತರ’ ಎಂದರ್ಥ. ಸ್ವಾಮೀಜಿಗಳು ಹಿಂದೂ ಧರ್ಮವನ್ನು ‘ಮತ’ ಎನ್ನುತ್ತಿದ್ದಾರಾ ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಲಾಗುತ್ತಿದೆ.

ಸ್ವಾಮೀಜಿಗಳು ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸಕ್ಕೆ ಕೈ ಹಾಕಬಾರದು. ಧರ್ಮಗಳ ನಡುವೆ ಸೇತುವೆಯಾಗಿ ವರ್ತಿಸಬೇಕು ಎಂಬ ಆಗ್ರಹಗಳು ಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...