ಸಿದ್ದರಾಮಯ್ಯ ಅವರಿಗೆ ಹಿಂದಿನಷ್ಟು ಸ್ವಾತಂತ್ರ್ಯ ಈಗ ಇಲ್ಲ- ಎಚ್‌ ಆಂಜನೇಯ

Date:

  • ಬ್ರಾಹ್ಮಣರು ಯಾವುದೇ ಹೋರಾಟ ಮಾಡದೇ 10 % ಮೀಸಲಾತಿ ಪಡೆದಿದ್ದಾರೆ
  • ಯಾವುದೇ ಅಡೆತಡೆಗಳು ಬಂದರೂ ಸಿದ್ದರಾಮಯ್ಯ ಅವರು ಕಾಂತರಾಜ ವರದಿ ಜಾರಿಗೆ ತರಲೇಬೇಕು

“2013ರಿಂದ 2018ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿ ಬಡವರ, ಶೋಷಿತರ ಪಾಲಿಗೆ ಸುವರ್ಣ ಯುಗ, ಆ ಯುಗ ಇನ್ನು ಬರಲಾರದು ಎಂದು ಅನ್ನಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಆಗ ಇದ್ದ ಸ್ವಾತಂತ್ರ್ಯ ಈಗ ಇಲ್ಲ” ಎಂದು ಮಾಜಿ ಸಚಿವ ಎಚ್‌ ಆಂಜನೇಯ ಹೇಳಿದರು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿ ಪಿ ಸಿಂಗ್‌  ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“ಎಚ್‌.ಎಂ. ರೇವಣ್ಣ ಅಥವಾ ನಾನು ಇಂತಹವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದರೆ ಸಾಕು ಮರುದಿನ ಬೆಳಿಗ್ಗೆ ಆದೇಶ ಬರುತ್ತಿತ್ತು. ಬಹಳಷ್ಟು ಕ್ರಾಂತಿಕಾರಕ ಬದಲಾವಣೆಗಳು ಆಗ ಆಗಿತ್ತು. ಈಗ 136 ಶಾಸಕರು ಗೆದ್ದು ಬಂದಿದ್ದಾರೆ. ಬೇರೆ ಬೇರೆ ಒತ್ತಡಗಳಿವೆ. ಈಗ ನಾವು ಹೇಳಿದ ಕೆಲಸಗಳು ಆಗುವ ಬಗ್ಗೆ ಸಂಶಯವಿದೆ. ಸರ್ಕಾರ ಬಂದು ಆರು ತಿಂಗಳಾಯಿತು. ಚುನಾವಣೆಗೆ ಮೊದಲು ಕಾಂತರಾಜ ಆಯೋಗದ ವರದಿ ಪಡೆಯುವುದಾಗಿ ಹೇಳಿದ್ದರು. ಈಗ ಅದಕ್ಕೆ ಹಲವು ಅಡೆತಡೆಗಳು ಬಂದಿವೆ. ಆದರೂ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರವೇ ಇದ್ದಾರೆ. ಅವರು ಬಡವರ ಶೋಷಿತರ ಕೈ ಹಿಡಿಯುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀಸಲಾತಿ ಪಡೆಯದ ಜಾತಿ ಯಾವುದಿದೆ? ಎಲ್ಲಾ ಜಾತಿಗಳಿಗೂ ಮೀಸಲಾತಿ ಇದೆ. ಬ್ರಾಹ್ಮಣರಿಗೂ ಮೀಸಲಾತಿ ಇದೆ. ಅವರು ಹೋರಾಟ ಮಾಡದೇ 10 % ಮೀಸಲಾತಿ ಪಡೆದಿದ್ದಾರೆ. 80ರ ದಶಕದಲ್ಲಿ ದೇವರಾಜ ಅರಸು ಅವಧಿಯಲ್ಲಿ ಹಾವನೂರು ಆಯೋಗದ ವರದಿಯನ್ನು ಜಾರಿ ಮಾಡಲೂ ಬಿಡಲಿಲ್ಲ. ಆದರೂ ಅವರು ವರದಿಯನ್ನು ಬಿಡುಗಡೆ ಮಾಡಿದರು.

ಈಗ ಕಾಂತರಾಜ ಸಮಿತಿ ವರದಿಯ ಬಗ್ಗೆಯೂ ಅಪಸ್ವರ ಎತ್ತುತ್ತಿದ್ದಾರೆ. ನಾನು ಮಾದಿಗ, ಕಾಂತರಾಜ ಅವರು ಕುರುಬ. ತಮ್ಮ ತಮ್ಮ ಜಾತಿಯ ಸಂಖ್ಯೆಯನ್ನು ಹೆಚ್ಚು ಬರೆದಿದ್ದಾರೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ. ಒಂದೂವರೆ ಲಕ್ಷ ಗಣತಿದಾರರು ಮಾಹಿತಿ ಸಂಗ್ರಹಿಸಿದ್ದಾರೆ. ಮನೆ ಮನೆಗೆ ಹೋಗಿ ವಾಸ್ತವಾಂಶ ಮಾಹಿತಿ ಪಡೆದಿದ್ದಾರೆ. ಎಲ್ಲ ಮಾಹಿತಿ ಕಂಪ್ಯೂಟರ್‌ನಲ್ಲಿ ಭದ್ರವಾಗಿದೆ. ಬಹಳ ವೈಜ್ಞಾನಿಕ ವರದಿ, ಪಾರದರ್ಶಕವಾಗಿದೆ. ಪ್ರೊಸೀಡಿಂಗ್ಸ್‌ ಆಗಿದೆ. ಜಾರಿ ಮಾಡಲು ಉಪಸಮಿತಿ ಮಾಡಿ ಅದರಲ್ಲಿ ಏನು ಕೊರತೆ ಇದೆ. ಯಾವುದು ಸೇರಬೇಕು ಎಂಬ ನಿರ್ಧಾರ ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ ಇದೆ. ಅಧಿವೇಶನದಲ್ಲಿ ಚರ್ಚೆಗೆ ಇಡಲಿ” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...