ಕೆಸಿಆರ್ ಅವರೇ ಗ್ಯಾರಂಟಿ ಯೋಜನೆ ನೋಡಲು ಕರ್ನಾಟಕಕ್ಕೆ ಬನ್ನಿ: ಸಿದ್ದರಾಮಯ್ಯ ಪಂಥಾಹ್ವಾನ

Date:

  • ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ
  • ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಸರಣಿ ಸುಳ್ಳುಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಕೆ.ಸಿ.ಆರ್ ಅವರೇ ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಬನ್ನಿ” ಎಂದು ಪಂಥಾಹ್ವಾನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ, ಬಿಆರ್‌ಎಸ್‌ ಎರಡೂ ಒಂದೇ. ಬಿಆರ್‌ಎಸ್‌ ತೆಲಂಗಾಣದಲ್ಲಿ ಬಿಜೆಪಿಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ” ಎಂದರು.

“ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ದಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ದಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಮೇಲ್ವರ್ಗದ ಮೋದಿ

“ಮೋದಿಯವರು ದೇಶದ ಶೇ. 4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರ ಈ ಶೇ. 4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ” ಎಂದು ವ್ಯಂಗ್ಯವಾಡಿದರು.

“ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು. ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

“ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ ಬಿಆರ್‌ಎಸ್‌ ಅನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ” ಎಂದರು.

“ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ. ಕಾರಣ ನರೇಂದ್ರ ಮೋದಿ ಅಷ್ಟು ಸುಳ್ಳು ಹೇಳುತ್ತಾರೆ. ಈ ತರ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ಕಂಡಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...