ಕಬ್ಬು ಬೆಳೆಗಾರರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಲೇ ಬಂದ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ ಕರೆಯಬೇಕಿತ್ತು. ತಡ ಆಗಿದೆ. ಆದರೂ ಪರವಾಗಿಲ್ಲ; ರೈತರ ತಾಳ್ಮೆ ಪರೀಕ್ಷಿಸದಿರಿ. ಪ್ರಧಾನಿಯವರಿಗೆ ಪತ್ರ ಬರೆಯವುದಾಗಿ ಕೈಕಟ್ಟಿ ಸುಮ್ಮನೆ ಕುಳಿತುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿ ಕುರ್ಚಿಗೆ ಎಷ್ಟು ತಲೆ ಕೆಡಿಸಿಕೊಂಡಿದ್ದೀರೋ ಅದರ ಶೇ. 10ರಷ್ಟನ್ನು ಕಬ್ಬು ಬೆಳೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಆಗ ರೈತರು ನಿಮ್ಮನ್ನು ಪೂಜೆ ಮಾಡುತ್ತಾರೆ. ನನಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಬದ್ಧತೆ” ಎಂದರು.

“ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಬಾರದಿತ್ತು. ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳು ಅಸಡ್ಡೆ ತೋರಿದ್ದಾರೆ. ಈಗ ಹೋರಾಟ ತೀವ್ರಗೊಂಡಿದೆ. ಬೀದಿಗಿಳಿದು ಪ್ರತಿಭಟನೆ ನಡೆಯುತ್ತಿದೆ. ಈಗ ನೀವು ಪ್ರಧಾನಿಯವರಿಗೆ ಪತ್ರ ಬರೆದು ಕೇಂದ್ರ ಸರಕಾರದ ಮೇಲೆ ದೂರುವ ಪ್ರಯತ್ನ ಮಾಡುತ್ತೀರಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಫ್‍ಆರ್‌ಪಿಯನ್ನು ಪ್ರಧಾನಿಯವರೊಬ್ಬರೇ ತೀರ್ಮಾನ ಮಾಡುವುದಿಲ್ಲ. ಎಲ್ಲ ರಾಜ್ಯಗಳ ಅಧಿಕಾರಿಗಳು, ತಜ್ಞರ ಅಭಿಪ್ರಾಯ ಪಡೆದು ಇದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಎಷ್ಟೇ ಎಫ್‍ಆರ್‌ಪಿ ನಿಗದಿ ಮಾಡಿದರೂ ರಾಜ್ಯ ಸಲಹಾ ಬೆಲೆ (ಎಸ್‍ಎಪಿ) ಹೆಚ್ಚು ದರ ಕೊಡಲು ಅವಕಾಶವಿದೆ. ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕು” ಎಂದು ಒತ್ತಾಯಿಸಿದರು.

“ಹಿಂದೆ ವಿಠಲ ಅರಭಾವಿಯವರ ಆತ್ಮಹತ್ಯೆ ಮಾಡಿಕೊಂಡದ್ದು ನಿಮಗೆ ನೆನಪಿದೆಯೇ ಸಿದ್ದರಾಮಯ್ಯನವರೇ? ಆಗ ಕೂಡ ನೀವು ತಾತ್ಸಾರ ಮಾಡಿದ್ದಿರಿ. ಕಬ್ಬು ಅರೆದಾಗ ಮಾತ್ರ ಅಬಕಾರಿ ಇಲಾಖೆಗೆ ಕಂದಾಯ ಹೆಚ್ಚಾಗಲು ಸಾಧ್ಯ. ಆದಾಯ ಬರುವುದರ ಬಗ್ಗೆ ಚಿಂತಿಸುವ ನೀವು ಕಬ್ಬಿಗೆ ವೈಜ್ಞಾನಿಕ ದರ ನಿಗದಿಯ ಜವಾಬ್ದಾರಿ ನಿಭಾಯಿಸುತ್ತಿಲ್ಲ” ಎಂದು ಆಕ್ಷೇಪಿಸಿದರು.

“ಶಾಸಕ ಯಶವಂತರಾಯಗೌಡ ಪಾಟೀಲರು ಕಬ್ಬು ಬೆಳೆಗಾರರ ಹೋರಾಟಗಾರರನ್ನು ಕಬ್ಬು ಬೆಳೆಗಾರರೇ ಅಲ್ಲ ಎಂದಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅವಮಾನ. ತಕ್ಷಣ ಅವರು ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...