ರೈತರಿಗೆ ದ್ರೋಹ ಎಸಗಿದ ಸಿದ್ದರಾಮಯ್ಯ, ಜು.15ರ ಸಮಯ ಕೇಳಿದ್ದೇ ನಾಟಕ: ನಟ ಪ್ರಕಾಶ ರಾಜ್ ಕಿಡಿ

Date:

ದೇವನಹಳ್ಳಿ ರೈತ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಸಮಯ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಅವಧಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ರೈತರಿಗೆ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ನಟ ಪ್ರಕಾಶ ರಾಜ್ ಕಿಡಿಕಾರಿದ್ದಾರೆ.

‘ದೇವನಹಳ್ಳಿ ಚಲೋ’ ಬೆಂಬಲಿಸಿ ನಟ ಪ್ರಕಾಶ ರಾಜ್ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದವರಲ್ಲಿ ಪ್ರಮಖರು. ದೇವನಹಳ್ಳಿ ಚಲೋ ವೇಳೆ ಪೊಲೀಸರಿಂದಲೂ ಬಂಧನಕ್ಕೊಳಗಾಗಿದ್ದರು. ಸಿಎಂ ಜೊತೆಗೆ ನಡೆದ ರೈತರ ಸಭೆಯಲ್ಲಿ ಪ್ರಮುಖರಾಗಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಶುಕ್ರವಾರ ಈ ವಿಚಾರವಾಗಿ ಮಾತನಾಡಿ, “‘ಸರ್ಕಾರ ಯಾರೋ ಕೆಲವು ರೈತರನ್ನು ಮಧ್ಯ ಕರೆ ತಂದು ಚಳವಳಿ ಒಡೆಯುವ ಪ್ರಯತ್ನ ಮಾಡುತ್ತಿದೆ. ಹಳ್ಳಿಗಳಿಗೆ ಪುಡಾರಿಗಳನ್ನು ಕಳುಹಿಸಿ ಹೆದರಿಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿ ಕೊಡಲು ಸಿದ್ಧ ಎಂದು ಕೆಲವು ರೈತರು ಸುದ್ದಿಗೋಷ್ಠಿ ಮಾಡಿರುವ ವಿಚಾರವಾಗಿ ಮಾತನಾಡಿ, “ಹಸಿರು ವಲಯ ಮಾಡುತ್ತೇವೆ ಎಂಬ ತಮ್ಮ ಪುಢಾರಿಗಳ ಮೂಲಕ ನಾಟಕ ಆಡಿ ಜನರನ್ನು ಹೆದರಿಸುತ್ತಿದೆ. ನಿಮ್ಮ ನಾಟಕ ನಮ್ಮೆಲ್ಲರ ಕಣ್ಣಿಗೆ ಕಾಣಿಸುತ್ತಿದೆ. 15 ರಂದು ರೈತ ಪರ ನಿರ್ಧಾರ ಪ್ರಕಟಿಸದೇ ಇದ್ದರೆ ಹೋರಾಟ ಕ್ರಾಂತಿಯಿಂದ ಕೂಡಿರಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

“ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ರಾಜ್ಯ ಸರ್ಕಾರ ಈಗ ಕೇಂದ್ರದ ಅನುಮತಿ ಕೇಳಿದೆ. ಕಾರಿಡಾರ್‌ಗೆ ಏಕೆ ಇಷ್ಟು ಜಾಗ ಬೇಕು ಎಂಬುದನ್ನು ಅವರು ನಕ್ಷೆ ಸಮೇತ ವಿವರಿಸಲಿ” ಎಂದು ಆಗ್ರಹಿಸಿದರು.

“ಕೇವಲ 100 ಎಕರೆ ಬಳಸಿ ಕಾರಿಡಾರ್‌ ನಿರ್ಮಿಸುತ್ತಾರೆ. ಉಳಿದ ಜಮೀನಿನಲ್ಲಿ ಐಷಾರಾಮಿ ಹೋಟೆಲ್ ಕಟ್ಟುತ್ತಾರೆ. ಆಗ ಅಲ್ಲಿ ನಮ್ಮ ರೈತರು ಕೂಲಿಯಾಳು ಗಳಾಗಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಹೋರಾಟಗಾರರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರುಪ್ರಸಾದ್ ಕೆರಗೋಡು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...