ಮೋದಿ ಬಳಿ ಐದು ಅಂಶಗಳ ಬಗ್ಗೆ ಮನವಿ ಮಾಡಿದ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.17) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರಗಳನ್ನು ಸಲ್ಲಿಸಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರಗಳಲ್ಲಿ ಒತ್ತಾಯಿಸಿದ್ದಾರೆ.

ಪ್ರಮುಖ ನೀರಾವರಿ ಯೋಜನೆಗಳ ಈಡೇರಿಕೆಗೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರದಿಂದ ಬಾಕಿ ರುವ ತೀರುವಳಿಗಳನ್ನು ದೊರಕಿಸಲು ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು. ಸಮತೋಲನ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ತೀರುವಳಿಗಳನ್ನು ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶಿಸಬೇಕು. ಕಳೆದ ಒಂದು ದಶಕದಿಂದ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ -2 ರಲ್ಲಿ ಬಾಕಿ ಇರುವ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲು ಹಾಗೂ ಕೇಂದ್ರ 2023-24 ರ ಬಜೆಟ್ನಲ್ಲಿ ಘೋಷಿಸಿರುವಂತೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಹುಬ್ಬಳಿ- ಧಾರವಾಡ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ಅರಣ್ಯ ಮತ್ತು ವನ್ಯಜೀವಿ ಪರಿಸರ ಇಲಾಖೆ ವತಿಯಿಂದ ನೀಡಬೇಕಾದ ಒಪ್ಪಿಗೆ ನೀಡಬೇಕು” ಎಂದು ಕೋರಿದ್ದಾರೆ.

ಪ್ರವಾಹ: 2,136 ಕೋಟಿ ರೂ.ಗಳ ಪರಿಹಾರಕ್ಕೆ ಮನವಿ

ಭಾರಿ ಮಳೆಯಿಂದಾಗಿ ರಾಜ್ಯದ 14.5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 19 ಲಕ್ಷ ರೈತರಿಗೆ ನಷ್ಟ ಉಂಟಾಗಿದೆ. ಇದಲ್ಲದೇ ಸಾವಿರಾರ ಮನೆಗಳು, ರಸ್ತೆ ಹಾಗೂ ಶಾಲೆ ಗಳು ಹಾನಿಗೀಡಾಗಿದ್ದು ಎನ್.ಡಿ.ಆರ್ ಎಫ್ ವತಿಯಿಂದ ಪರಿಹಾರವನ್ನು ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಇನ್ಪುಟ್ ಸಬ್ಸಿಡಿಯಲ್ಲಿನ ಕೊರತೆಗಳನ್ನು ನೀಗಿಸಲು ‘ರಕ್ಷಣೆ ಮತ್ತು ಪರಿಹಾರ’ ದಡಿ 614.9 ಕೋಟಿಗಳು ಹಾಗೂ ದಡಿ ಹಾನಿಗೊಳಗಾದ ಸಾರ್ವಜನಿಕ ಮೂಲಸೌಕರ್ಯಗಳ ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ 1521.67 ಕೋಟಿಗಳ ಪರಿಹಾರ ನೀಡಲು ಮನವಿ ಪತ್ರದಲ್ಲಿ ಕೋರಲಾಗಿದೆ.

ಜಲ ಜೀವನ ಮಿಷನ್

ಕರ್ನಾಟಕ ರಾಜ್ಯದಲ್ಲಿ ಜಲ ಜೀವನ ಮಿಷನ್ (JJM) ಯೋಜನೆಯಡಿ 2025-26ರ ಅಂತ್ಯದವರೆಗೆ ಕರ್ನಾಟಕಕ್ಕೆ ಕೊಡಬೇಕಾದ ಪಾಲಿನಲ್ಲಿ 13,004.63 ಕೋಟಿ ರೂ. ಹಣ ಇನ್ನೂ ಬಿಡುಗಡೆ ಮಾಡಿಲ್ಲ. 2024-25ರ ಹಣಕಾಸು ವರ್ಷದಲ್ಲಿ ಹಂಚಿಕೆಯಾಗಬೇಕಿದ್ದ 3,804.41 ಕೋಟಿ ರೂ. ಪೈಕಿ ಕೇವಲ 570.66 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರವು ಸ್ವೀಕರಿಸಲಾಗಿದ್ದರೂ ರಾಜ್ಯ ಸರ್ಕಾರ ತಾನೇ ಮುಂಗಡವಾಗಿ 7,045.64 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ, ಯೋಜನೆಯ ಯಶಸ್ಸಿಗೆ ಅಗತ್ಯ 7,602.99 ಕೋಟಿ ರೂ. ಮೊತ್ತವನ್ನು ಒದಗಿಸಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

2025-26ನೇ ಸಾಲಿನಲ್ಲಿ ಕೇಂದ್ರದಿಂದ ಯೋಜನೆಯಡಿ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯಮುಂಗಡವಾಗಿ 1,500 ಕೋಟಿ ರೂ. ಬಿಡುಗಡೆ ಮಾಡಿದೆ. ಪ್ರಸ್ತುತ 1,700 ಕೋಟಿ ರೂ. ಮೊತ್ತದ ಬಿಲ್‌ಗಳು ಪಾವತಿಗೆ ಬಾಕಿ ಇವೆ ಮತ್ತು 2,600 ಕೋಟಿ ರೂ. ಮೊತ್ತದ ಬಿಲ್ಲುಗಳು ಸಲ್ಲಿಕೆಯಾಗಬೇಕಿದೆ. ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅತ್ಯಂತ ಮುಖ್ಯವಾದ ಕೇಂದ್ರದ ಯೋಜನೆಯಾಗಿದೆ. ಇದನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರದ ಸಹಾಯ ಅನಿವಾರ್ಯ. ಆದ್ದರಿಂದ, ಜಲ ಜೀವನ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಬಾಕಿ ಇರುವ ಕೇಂದ್ರದ ಪಾಲಿನ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕಂದು ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ.

ಕಬ್ಬು ಬೆಳೆ ದರ ನಿಗದಿಗೆ ಸುಸ್ಥಿರ ಪರಿಹಾರ

ಕಬ್ಬು ಬೆಳೆಗಾರರಿಗೆ ತುರ್ತು ಆರ್ಥಿಕ ನೆರವು ನೀಡಲು ಮತ್ತು ಹೆಚ್ಚಿನ ನಿವ್ವಳ ದರವನ್ನು ಖಚಿತಪಡಿಸಲು ಸರ್ಕಾರ ಆದೇಶವನ್ನು ಹೊರಡಿಸಿದ್ದು, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ (MSP) ಪ್ರತಿ ಕೆಜಿಗೆ ₹31 ರಲ್ಲಿ ಸ್ಥಗಿತಗೊಂಡಿರುವುದೇ ಸಕ್ಕರೆ ಕಾರ್ಖಾನೆಗಳು ಈ ನಿಗದಿತ ಬೆಲೆಯನ್ನು ರೈತರಿಗೆ ನೀಡಲು ಸಾಧ್ಯವಾಗದಿರುವ ಕಾರಣವನ್ನು ಪತ್ರದಲ್ಲಿ ವಿವರಿಸಿ, ಈ ಸಂಕಷ್ಟಕ್ಕೆ ಶಾಶ್ವತ ಮತ್ತು ಸಮರ್ಥ ಪರಿಹಾರ ಒದಗಿಸುವ ದಿಸೆಯಲ್ಲಿ, ಸಕ್ಕರೆಯ ಎಂಎಸ್‌ಪಿಯ ತಕ್ಷಣದ ಪರಿಷ್ಕರಣೆ(ಪ್ರಸ್ತುತ ಪ್ರತಿ ಕೆ.ಜಿ.ಗೆ 31 ರೂ.ಗಳು), ಕರ್ನಾಟಕದ ಸಕ್ಕರೆ ಆಧಾರಿತ ಡಿಸ್ಟಿಲರಿಗಳಿಂದ ಎಥನಾಲ್ ಖರೀದಿ ಮಂಜೂರಾತಿಯ ಹೆಚ್ಚಳ, ರಾಜ್ಯಗಳಿಗೆ ಕಬ್ಬಿನ ಬೆಲೆಯನ್ನು ನಿಗದಿಪಡಿಸಲು ಅಥವಾ ಅನುಮೋದಿಸಲು ಅಧಿಕಾರ ನೀಡುವಂತಹ ಕೇಂದ್ರ ಅಧಿಸೂಚನೆಯ ಹೊರಡಿಸುವುದೂ ಸೇರಿದಂತೆ ಮನವಿ ಪತ್ರದಲ್ಲಿ ಮೂರು ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ

ಕಲ್ಯಾಣ ಕರ್ನಾಟಕದ ಭಾಗವಾದ ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆಫರೆಲ್ ವೈದ್ಯಕೀಯ ಕೇಂದ್ರದ ಅಗತ್ಯತೆಯನ್ನು ಪೂರೈಸಲು ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆಯನ್ನು ನೀಡುವಂತೆ ಮನವಿಪತ್ರದಲ್ಲಿ ಕೋರಲಾಗಿದೆ.

ಕರ್ನಾಟಕ ಸರ್ಕಾರವು ರಾಯಚೂರಿನಲ್ಲಿ AIIMS ಸ್ಥಾಪನೆಗೆ ಅನುಮೋದನೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವಿವರವಾದ ಯೋಜನಾ ವರದಿಯನ್ನು ಈಗಾಗಲೇ ಸಲ್ಲಿಸಿದೆ. ಯೋಜನೆಗೆ ಅವಶ್ಯವಾದ ಭೂಮಿಯ ಲಭ್ಯತೆ, ಸಂಪರ್ಕ ವ್ಯವಸ್ಥೆ ಮತ್ತು ಸ್ಥಳೀಯ ಆಡಳಿತದ ಬೆಂಬಲ ಸೇರಿದಂತೆ AIIMS ನಂತಹ ರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...