ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

Date:

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ (ಶೇ 75.96) ಪೂರ್ಣಗೊಂಡಿದ್ದು, 34.55 ಲಕ್ಷ ಮನೆಗಳ ಸಮೀಕ್ಷೆ ಬಾಕಿಯಿದೆ.

ಸಮೀಕ್ಷೆಗೆ ನಿಗದಿತ ಗುರಿ ಸಾಧನೆಯಲ್ಲಿ ಕೊಪ್ಪಳ ಜಿಲ್ಲೆ (ಶೇ 96.42) ಪ್ರಥಮ ಸ್ಥಾನದಲ್ಲಿದ್ದು, ಹಾವೇರಿ ಜಿಲ್ಲೆ (ಶೇ 95.88) 2ನೇ ಹಾಗೂ ರಾಯಚೂರು ಜಿಲ್ಲೆ (92.71) 3ನೇ ಸ್ಥಾನದಲ್ಲಿದೆ. ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ 32.64ರಷ್ಟು ಮಾತ್ರ ಗುರಿ ಸಾಧನೆಯಾಗಿದ್ದು, ಕಡೇ ಸ್ಥಾನದಲ್ಲಿದೆ.

ಭಾನುವಾರ ಸಂಜೆ 6 ಗಂಟೆವರೆಗಿನ ಅಂಕಿ–ಅಂಶದ ಮಾಹಿತಿ ಪ್ರಕಾರ, ಕೊಪ್ಪಳ ಜಿಲ್ಲೆಯ 3.19 ಲಕ್ಷ ಮನೆಗಳ ಪೈಕಿ, 3.07 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾವೇರಿ ಜಿಲ್ಲೆಯ ಜಿಲ್ಲೆಯ 4.12 ಲಕ್ಷಗಳ ಮನೆಗಳ ಪೈಕಿ 3.95 ಲಕ್ಷ ಮನೆಗಳ ಸಮೀಕ್ಷೆ ಮುಕ್ತಾಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ. 22ರಿಂದ ಅಕ್ಟೋಬರ್ 4ರವರೆಗೂ ಸಮೀಕ್ಷೆ ಗುರಿ ಸಾಧನೆಯಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿತ್ತು. ಭಾನುವಾರ ಅತ್ಯಧಿಕ ಮನೆಗಳ ಸಮೀಕ್ಷೆ ಮಾಡುವ ಮೂಲಕ ಕೊಪ್ಪಳ ಜಿಲ್ಲೆ ಮೊದಲ ಸ್ಥಾನಕ್ಕೆ ಜಿಗಿದಿದೆ. ಅ.7ರವರೆಗೂ ಸಮೀಕ್ಷೆ ನಡೆಸಲು ಅವಕಾಶವಿದ್ದು, ಎರಡೂ ಜಿಲ್ಲೆಗಳಲ್ಲಿ ಸೋಮವಾರವೇ ಸಮೀಕ್ಷೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಸಮೀಕ್ಷೆ ಮುಗಿಸಿದ ಸಾವಿರ ಶಿಕ್ಷಕರು

ಹಾವೇರಿ ಜಿಲ್ಲೆಯಲ್ಲಿ ನಿಯೋಜಿಸಿದ್ದ ಪ್ರಾಥಮಿಕ ಶಾಲೆಗಳ 3,777 ಶಿಕ್ಷಕರ ಪೈಕಿ, ಸಾವಿರ ಶಿಕ್ಷಕರು ತಮಗೆ ನಿಗದಿಪಡಿಸಿದ್ದ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ.

‘ಶಿಕ್ಷಕ್ಷರಿಗೆ ತಲಾ 100ರಿಂದ 150 ಮನೆಗಳ ಮಾಹಿತಿ ಸಂಗ್ರಹಿಸುವ ಜವಾಬ್ದಾರಿ ವಹಿಸಲಾಗಿತ್ತು. ಸೆ. 22ರಿಂದ ಅ. 5ರ ಸಂಜೆ ವೇಳೆಗೆ ಶೇ 95.88ರಷ್ಟು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ‘ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ವಿದ್ಯುತ್ ಮೀಟರ್‌ಗಳಿಗೆ ಅಂಟಿಸಿದ್ದ ಸ್ಟಿಕ್ಕರ್‌ನ ಕ್ಯೂಆರ್‌ ಕೋಡ್ ಬಳಸಿ ಮನೆಗಳನ್ನು ಗುರುತಿಸಿದ್ದ ಶಿಕ್ಷಕರು, ನಿಗದಿತ 60 ಪ್ರಶ್ನೆಗಳಿಗೂ ಜನರಿಂದ ಉತ್ತರ ಪಡೆದು ಆ್ಯಪ್‌ನಲ್ಲಿ ನಿಖರವಾಗಿ ದಾಖಲಿಸಿದ್ದಾರೆ. ಆಗಾಗ ತಾಂತ್ರಿಕ ಸಮಸ್ಯೆ ಎದುರಾದರೂ, ತ್ವರಿತವಾಗಿ ಬಗೆಹರಿಸಲಾಗಿದೆ’ ಎಂದು ಹೇಳಿದರು.

‘ನಿತ್ಯ 33,275 ಮನೆಗಳ ಸಮೀಕ್ಷೆ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಅಕ್ಟೋಬರ್ 5ರಂದು ಒಂದೇ ದಿನದಲ್ಲಿ 12,306 ಮನೆಗಳ ಸಮೀಕ್ಷೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...