‘ಸ್ಪೂರ್ತಿಧಾಮ’ ನೀಡುವ ‘ಬೋಧಿವೃಕ್ಷ’ ಪ್ರಶಸ್ತಿಗೆ ಎಸ್‌.ಆರ್ ಹಿರೇಮಠ್‌ ಆಯ್ಕೆ

Date:

ಬೆಂಗಳೂರಿನ ‘ಸ್ಪೂರ್ತಿಧಾಮ’ ಕೊಡಮಾಡುವ ‘ಬೋಧಿವೃಕ್ಷ’ ಹಾಗೂ ‘ಬೋಧಿವರ್ಧನ’ ಪ್ರಶಸ್ತಿಗಳಿಗೆ ಈ ಬಾರಿ ಹಿರಿಯ ಹೋರಾಟಗಾರ ಎಸ್‌.ಆರ್‌ ಹಿರೇಮಠ್‌ ಹಾಗೂ ನಾಲ್ವರಿಗೆ ಆಯ್ಕೆಯಾಗಿದ್ದಾರೆ. ‘ಬೋಧಿವೃಕ್ಷ’ ಪ್ರಶಸ್ತಿಗೆ ಎಸ್‌.ಆರ್‌ ಹಿರೇಮಠ್ ಹಾಗೂ ‘ಬೋಧಿವರ್ಧನ’ ಪ್ರಶಸ್ತಿಗೆ ರಾಮ್‌ದೇವ್ ರಾಖೆ, ಸುಶೀಲ ನಾಡ, ಹಸನಬ್ಬ ಮತ್ತು ಜಿ.ಕೆ.ಪ್ರೇಮ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ‘ಸ್ಪೂರ್ತಿಧಾಮ’ದ ಅಧ್ಯಕ್ಷ ಎಸ್ ಮರಿಸ್ವಾಮಿ, “ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಏಪ್ರಿಲ್ 14ರ ಸಂಜೆ 5 ಗಂಟೆಗೆ ‘ಸ್ಪೂರ್ತಿಧಾಮ’ದ ಆಡಿಟೋರಿಯಂನಲ್ಲಿ ನಡೆಯಲಿದೆ. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಶ್ರಾಂತ ಉಪಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಟಿ.ಆರ್.ಚಂದ್ರಶೇಖರ ಕಾರ್ಯಕ್ರಮದಲ್ಲಿ ಇರಲಿದ್ದಾರೆ” ಎಂದು ತಿಳಿಸಿದ್ದಾರೆ.

“ಕಳೆದ 16 ವರ್ಷಗಳಿಂದ ಅಂಬೇಡ್ಕರ್ ಜಯಂತಿಯನ್ನು ‘ಅಂಬೇಡ್ಕರ್ ಹಬ್ಬ’ವಾಗಿ ‘ಸ್ಪೂರ್ತಿಧಾಮ’ ಆಚರಿಸುತ್ತಿದೆ. ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ ‘ಬೋಧಿವೃಕ್ಷ’ ಮತ್ತು ‘ಭೋಧಿವರ್ಧನ’ ಹೆಸರಿನ ರಾಷ್ಟ್ರ ಪ್ರಶಸ್ತಿಗಳನ್ನು ನೀಡುತ್ತಿದೆ. ‘ಬೋಧಿವೃಕ್ಷ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು 1 ಲಕ್ಷ ರೂ. ನಗದು ಹಾಗೂ ಐದು ‘ಭೋಧಿವರ್ಧನ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು ತಲಾ 25,000 ರೂ. ನಗದು ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೋಧಿವೃಕ್ಷ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಆರ್.ಹಿರೇಮಠ್ ಅವರು ಭಾರತೀಯ ಪರಿಸರವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾಗಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷರಾಗಿದ್ದು, ಅಕ್ರಮ ಗಣಿಗಾರಿಕೆ ವಿರುದ್ಧದ ನಿರಂತರ ಹೋರಾಟ ನಡೆಸಿದ್ದಾರೆ. ಅವರ ಹೋರಾಟದಿಂದಾಗಿ ಬಳ್ಳಾರಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸಹಾಯವಾಯಿತು. ಪ್ರಬಲ ಗಣಿ ನಿರ್ವಾಹಕರು, ರಾಜಕೀಯ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ನಿರ್ಭಯವಾಗಿ ಎದುರಿಸಿದ್ದಾರೆ. ಅವರಿಗೆ, ಭಾರತದ ಅತ್ಯುನ್ನತ ಪರಿಸರ ಗೌರವ ‘ಇಂದಿರಾ ಗಾಂಧಿ ಪರ್ಯಾವರಣ ಪುರಸ್ಕಾರ’ ಸಹ ದೊರೆತಿದೆ.

ಬೋಧಿವರ್ಧನ ಪ್ರಶಸ್ತಿ
ರಾಮ್‌ದೇವ್ ರಾಖೆ – ಅವರು ಅಂಬೇಡ್ಕರ್ ಚಿಂತನೆಗಳ ಹಾದಿಯಲ್ಲಿ ನಡೆಯುತ್ತಿದ್ದಾರೆ. ಧ್ವನಿ ಇಲ್ಲದವರ ಪರವಾಗಿ ‘ಶೋಷಿತ’ ಪತ್ರಿಕೆಯನ್ನು ಅವರು ಆರಂಭಿಸಿದ್ದರು. ಈಗ ಆ ಪತ್ರಿಕೆಯನ್ನು ‘ಪಂಚಮ’ ಎಂದು ಬದಲಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಹುಟ್ಟಿನಿಂದಲೂ ಅದರೊಂದಿಗಿದ್ದಾರೆ. ದಲಿತ ಚಳುವಳಿಯ ಮೊದಲ ಪೂರ್ಣಪ್ರಮಾಣದ ಕಾರ್ಯಕರ್ತ ರಾಮದೇವ್ ರಾಖೆ ಎಂದು ಕೊಟಿಗಾನಹಳ್ಳಿ ರಾಮಯ್ಯ ಬಣ್ಣಿಸಿದ್ದಾರೆ.

ಸುಶೀಲ ನಾಡ – ಮೈಸೂರು ಹಾಗೂ ಕೊಡಗು ಜಿಲ್ಲೆಯ ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಹಸಲರು ಹಾಗೂ ಗೊಂಡರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಹಾಗೂ ಮಲೆಕುಡಿಯರು ಮುಂತಾದ ಕರ್ನಾಟಕದ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದಲ್ಲಿ ಇವರು ಸಕ್ರಿಯರಾಗಿದ್ದಾರೆ ಮತ್ತು ಈ ಸಮುದಾಯಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಒಕ್ಕೂಟದ ಪ್ರಯತ್ನದಿಂದಾಗಿ ೧೨ ಅರಣ್ಯ ಮೂಲಬುಡಕಟ್ಟು ಸಮುದಾಯಗಳಿಗೆ ಅರಣ್ಯ ಹಕ್ಕು, ಪೌಷ್ಟಿಕ ಆಹಾರ, ಆಶ್ರಮ ಶಾಲೆಗಳ ಉನ್ನತೀಕರಣ ಸಾಧ್ಯವಾಗಿದೆ.

ಹಸನಬ್ಬ – ಕಳೆದ ಮೂರು ದಶಕಗಳಿಂದ ಬೆಳ್ತಂಗಡಿಯ ಚಾರ್ಮಡಿ ಘಾಟ್‌ನಲ್ಲಿ ಉಂಟಾಗುವ ಅಪಘಾತಗಳಲ್ಲಿ ಸಿಕ್ಕಿ ಗಾಯಗೊಂಡವರನ್ನು ಆಸ್ಪತ್ರಗೆ ಸಾಗಿಸಿ ಅವರಿಗೆ ಚಿಕಿತ್ಸೆ ಕೊಡಿಸಿ ಅವರ ಪ್ರಾಣ ಉಳಿಸುವ ಕಾರ್ಯಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಹೀಗೆ ನೂರಾರು ಜೀವ ಉಳಿಸಿದ್ದಾರೆ. ಸರ್ಕಾರಿ ಆಂಬುಲೆನ್ಸ್ಗಳು ತಡಮಾಡಿದಾಗ ಅವರು ತಮ್ಮ ಸ್ವಂತ ಗಾಡಿಯಲ್ಲಿ ಗಾಯಾಳುಗಳನ್ನು ಸಾಗಿಸಿ ಬದುಕಿಸಿದ್ದಾರೆ. ಹಸನಬ್ಬ ಅವರ ಈ ಕೆಲಸವನ್ನು ಮೆಚ್ಚಿ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಜಿ.ಕೆ.ಪ್ರೇಮ – ಕರ್ನಾಟಕದ ಕೆಲ ಭಾಗಗಳಲ್ಲಿ ಋತುಮತಿ ಆದ ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗೆ ಒಂದು ಸಣ್ಣ ಗುಡಿಸಿಲಿನಲ್ಲಿ ಅಥವಾ ಮರದ ಕೆಳಗೆ ಬಿಟ್ಟುಬರುವುದು ಒಂದು ವಾಡಿಕೆ. ನಂತರ ಪ್ರತಿ ಸಾರಿ ಮುಟ್ಟಾದಾಗ ಅವರು ಹೀಗೇ ಇರಬೇಕಾಗುತ್ತದೆ. ಅನೇಕ ವೇಳೆ ಹಾವು ಕಚ್ಚಿ ಅಥವಾ ಇನ್ಯಾವುದೋ ಕಾರಣಕ್ಕೆ ಅನೇಕರು ಪ್ರಾಣ ಕಳೆದುಕೊಂಡಿರುತ್ತಾರೆ. ಇಂತಹ ಒಂದು ಅನಿಷ್ಟ ಪದ್ಧತಿಯ ವಿರುದ್ಧ ಟೊಂಕ ಕಟ್ಟಿ ನಿಂತಿರುವವರು ಜಿ.ಕೆ.ಪ್ರೇಮ. ಅವರ ಈ ಪ್ರಯತ್ನದಿಂದಾಗಿ ಅವರ ಕಾಡುಗೊಲ್ಲ ಸಮುದಾಯದ ಮಹಿಳೆಯರು ಈ ಪದ್ಧತಿಯಿಂದ ಹೊರಬರಲು ಸಾಧ್ಯವಾಗಿದೆ. ತುಮಕೂರು, ಚಿತ್ರದುರ್ಗ ಚಿಕ್ಕಮಗಳೂರು, ಹಾಸನ, ಬಳ್ಳಾರಿ ಜಿಲ್ಲೆಗಳ ಕನಿಷ್ಠ 10 ಹಳ್ಳಿಗಳಲ್ಲಿ ಈ ಪದ್ಧತಿ ನಿಂತಿದೆ ಮತ್ತು ಇವರ ಶ್ರಮದಿಂದ ಇತರ ಹಳ್ಳಿಗಳವರೂ ಈ ಬಗ್ಗೆ ಯೋಚಿಸುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...