ಕಾಲ್ತುಳಿತ | ನ್ಯಾ. ಕುನ್ಹಾ ಆಯೋಗದ ವರದಿಯ ಮೇಲೆ ಕ್ರಮವಹಿಸಲು ಸಚಿವ ಸಂಪುಟ ನಿರ್ಧಾರ

Date:

ಆರ್.ಸಿ.ಬಿ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯ ಮೇಲೆ ಕ್ರಮವಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಆರ್ ಸಿ ಬಿ ವಿರುದ್ದ , ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ದವೂ ಕ್ರಿಮಿನಲ್ ಮೊಕದ್ದಮೆ ದಾಖಲಿಗೆ ಸರ್ಕಾರ ನಿರ್ಧಾರ ಮಾಡಿದೆ. ಸಂಬಂಧಿಸಿದ ಪೊಲಿಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ವರದಿಯಲ್ಲೂ ಶಿಫಾರಸು ಮಾಡಲಾಗಿದೆ. ಪೊಲಿಸ್ ಅಧಿಕಾರಿಗಳ ವಿರುದ್ದವು ಕ್ರಿಮಿನಲ್ ಮೊಕದ್ದಮೆ ದಾಖಲು ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿ ಮತ್ತೆ ಮುಂದಿನ ಕ್ಯಾಬಿನೆಟ್ ನಲ್ಲಿ ಅಂತಿಮ ತೀರ್ಮಾನ ಪ್ರಕಟವಾಗಲಿದೆ.

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು- ವಿಜಯಪುರ ಒಳಗೊಂಡಂತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಅಭಿವೃದ್ಧಿಪಡಿಸಲು ಅನುಬಂಧದಲ್ಲಿರುವ ಏಳು ಯೋಜನೆಗಳನ್ನು ಇಲಾಖೆಯ ಹೆಸರಿನಲ್ಲಿ ಹೊಂದಿರುವ 78.26 ಎಕರೆ ಜಮೀನಿನಲ್ಲಿ ರೂ.166.22 ಕೋಟಿಗಳ ಅಂದಾಜು ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ನಿರ್ವಹಣೆ ಮತ್ತು ವರ್ಗಾವಣೆ (DBFOR) ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ (ಕೆ.ಟಿ.ಐ.ಎಲ್) ಬೆಂಗಳೂರು ಇವರ ಮೂಲಕ ಕೈಗೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-III- ಭೂಸ್ವಾಧೀನಕ್ಕಾಗಿ ಏಕರೂಪ ದರಗಳನ್ನು ಅಂತಿಮಗೊಳಿಸಲು ಹಾಗೂ ಅಂತಿಮ ಯೋಜನಾ ವೆಚ್ಚವನ್ನು ಪರಿಶೀಲಿಸಲು ಮತ್ತು ಶಿಫಾರಸು ಮತ್ತು ಶಿಫಾರಸು ಮಾಡಲು ಸಚಿವ ಸಂಪುಟ ಉಪ ಸಮಿತಿಗೆ ವಹಿಸಲು ನಿರ್ಧರಿಸಲಾಗಿದೆ.

ಹೇಮಾವತಿ ಯೋಜನೆಯಡಿಯಲ್ಲಿನ ನಾಗಮಂಗಲ ಶಾಖಾ ನಾಲೆಯ ಸರಪಳಿ ಅಭಿವೃದ್ಧಿಪಡಿಸುವ ರೂ.560.00 ಕೋಟಿಗಳ ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ (ಪಟ್ಟಿಯನ್ನು ಅನುಬಂಧ-2 ರಲ್ಲಿ ಒದಗಿಸಲಾಗಿದೆ), ಸಂಬಂಧಪಟ್ಟ ಎಲ್ಲ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ. ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

ಕುನ್ಹಾ ವರದಿ ಕ್ಯಾಬಿನೆಟ್ ಗೆ ಸಲ್ಲಿಕೆಯಾಗಿದ್ದು, ಅದರ ಬಗ್ಗೆ ಅಧ್ಯಯನ ಮಾಡಿ ಚರ್ಚಿಸಲು ಮುಂದಿನ ಕ್ಯಾಬಿನೆಟ್ ಗೆ ತರಲು ನಿರ್ಧಾರ ಮಾಡಲಾಗಿದೆ. ಶಿಫಾರಸುಗಳನ್ನು ಅನುಷ್ಟಾನಕ್ಕೆ ತರುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...