ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕಾರ್ಯಗಳಿಗೆ ಒತ್ತು ನೀಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಇಲ್ಲಿಯವರೆಗೆ 1,21 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ” ಎಂದು ತಿಳಿಸಿದ್ದಾರೆ.
2026-27ರ ಆರ್ಥಿಕ ವರ್ಷದಲ್ಲಿ ಗೃಹ ಲಕ್ಷ್ಮಿ ಯೋಜನೆಗಾಗಿ 28,608 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದು ಹೇಳಿದ್ದಾರೆ.
2 ಲಕ್ಷ ರೈತರಿಗೆ ಹನಿ ನೀರಾವರಿ, 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣ ವಿತರಣೆ ಮಾಡುವ ಗುರಿ ಸರ್ಕಾರಕ್ಕೆ ಇದೆ ಎಂದು ತಿಳಿಸಿದ್ದಾರೆ. 83 ಲಕ್ಷ ರೈತರಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ ಮತ್ತು 51 ಲಕ್ಷ ರೈತರಿಗೆ 6,213 ಬೆಳೆ ವಿಮೆ ಪರಿಹಾರ.
ಇನ್ನು, ಕಾನೂನು ಮತ್ತು ಸುವ್ಯವಸ್ಥೆಗಾಗಿ ರಾಜ್ಯದಲ್ಲಿರುವ ಪೊಲೀಸ್ ಠಾಣೆಗಳ ಜೊತೆಗೆ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆಗಳ ವೈಟ್ ಟಾಪಿಂಗ್ಗೆ 1,700 ಕೋಟಿ ಅನುದಾನ ನೀಡಲಾಗಿದೆ. 158 ಕಿ.ಮೀ. ರಸ್ರೆಗಳನ್ನು ವೈಟ್ ಟಾಪಿಂಗ್ ಮಾಡಲಾಗುತ್ತದೆ. ಇದರಿಂದ, ವಾಹನ ಸವಾರರಿಗೆ ಅನುಕೂಲವಾಗಲಿದೆ. ಜೊತೆಗೆ ಗುಂಡಿ ರಸ್ತೆಗಳಿಂದ ಮುಕ್ತಿ ಸಿಗಲಿದೆ ಎಂದು ಹೇಳಿದ್ದಾರೆ.




