ಎಲ್ಲ ಇಲಾಖೆಗಳಲ್ಲೂ ಕನ್ನಡ ಬಳಸುವಂತೆ ಸರ್ಕಾರದಿಂದ ಆದೇಶ

Date:

ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿರಬೇಕು. ಈ ಮೂಲಕ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ತಾಕೀತು ಮಾಡಿದ್ದಾರೆ.

ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳು ಕನ್ನಡದಲ್ಲಿಲ್ಲದ ಬಗ್ಗೆ ಗಮನಿಸಿದ್ದ ಸಿಎಂ ಗರಂ ಆಗಿದ್ದರು. ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ಸಿಎಂ ನಿರ್ದೇಶನ ಕೊಟ್ಟಿದ್ದರು.

ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲ ಅಧಿಕಾರಿ/ನೌಕರರು ಕಟ್ಟುನಿಟ್ಟಾಗಿ ಕನ್ನಡ ಬಳಕೆ ಜಾರಿಗೊಳಿಸಬೇಕು ಸೂಚನೆ ನೀಡಿದ್ದರು. ಹೀಗಾಗಿ, ಈ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...