ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ನೀಡುವ ‘ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಗುರುವಾರ ಪ್ರಕಟಿಸಿದ್ದು, 31 ಶಿಕ್ಷಕರನ್ನು ಆಯ್ಕೆ ಮಾಡಿದೆ.
ಶಾಲಾ ಶಿಕ್ಷಣ ಮತ್ತು ಸಾಕರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರದಾನಿಸಲಿದ್ದಾರೆ.
ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ‘ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಇದನ್ನು ಓದಿದ್ದೀರಾ? ದ.ಕ. ಜಿಲ್ಲಾಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ: 20 ಶಿಕ್ಷಕರು ಆಯ್ಕೆ
ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ₹25,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಗುತ್ತದೆ.







