ಸರೋಜಾ ದೇವಿ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್

Date:

ಬಿ. ಸರೋಜಾ ದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿ ಪ್ರತಿಕ್ರಿಯೆ ನೀಡಿದ ಅವರು, “ನಾವೆಲ್ಲರೂ ಇಂದು ದಕ್ಷಿಣ ಭಾರತದ ಖ್ಯಾತ ನಟಿ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಇವರು ದಕ್ಷಿಣ ಭಾರತದ ಖ್ಯಾತ ನಟರ ಜತೆ ತಲಾ 20 ರಿಂದ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಅಪಾರವಾದ ಕೀರ್ತಿ ಸಂಪಾದಿಸಿದ್ದಾರೆ. ಇಡೀ ಕರ್ನಾಟಕ ಸರ್ಕಾರ, ದಕ್ಷಿಣ ಭಾರತದ ಕಲಾವಿದರು ಅವರಿಗೆ ಗೌರವಪೂರ್ವಕವಾಗಿ ನಮನ ಅರ್ಪಿಸುವ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರೋಜಾದೇವಿ ಅವರು ನನಗೆ ಸಣ್ಣ ವಯಸ್ಸಿನಿಂದಲೂ ಬಹಳ ಪರಿಚಯ. ನಾನು ಆರಂಭದಲ್ಲಿ ಸಚಿವನಾದಾಗ, ನನ್ನನ್ನು ಕರೆದು ನೀನು ಸಿನಿಮಾಗಳಲ್ಲಿ ನಟನೆ ಮಾಡಬೇಕು ಎಂದು ಹೇಳಿದ್ದರು. ಅವರು ನಮ್ಮ ಜಿಲ್ಲೆಯವರು. ಅವರ ಅಂತಿಮ ಸಂಸ್ಕಾರವನ್ನು ಇಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧನೆ ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯುತ್ತವೆ. ಬಹಳ ಚಿಕ್ಕ ವಯಸ್ಸಿಗೆ ಭಾರತ ಸರ್ಕಾರದ ಪದ್ಮ ವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಕಾಲದಲ್ಲಿ ಆ ವಯಸ್ಸಿಗೆ ಯಾರೂ ಆ ಪ್ರಶಸ್ತಿ ಪಡೆದಿರಲಿಲ್ಲ. ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಲು ರಸ್ತೆಗಳಿಗೆ ಅವರ ಹೆಸರಿಡುವ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ನಮ್ಮ ಶಾಸಕರಾದ ಯೋಗೇಶ್ವರ್ ಅವರು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಡಿಎ ಅಥವಾ ಪಾಲಿಕೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಈ ಕೆಲಸ ಮಾಡುತ್ತೇವೆ” ಎಂದರು.

“ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಅವರು ಮಾಡಿರುವ ಅಪಾರವಾದ ಕಲಾ ಸೇವೆ ಅಪ್ರತಿಮವಾದುದ್ದು. ಅವರು ಎಂದಿಗೂ ಒಂದೇ ಒಂದು ವಿವಾದಕ್ಕೆ ಸಿಲುಕಲಿಲ್ಲ. ಎಲ್ಲಾ ವರ್ಗದ ಜನ ಅವರನ್ನು ಬಹಳ ಪ್ರೀತಿ, ಗೌರವದಿಂದ ಕಂಡಿದ್ದಾರೆ. ರಾಜ್ಯಕ್ಕೆ ಸಮಸ್ಯೆ ಎದುರಾದಾಗ ಅವರು ನಮ್ಮ ಜೊತೆ ನಿಂತು ರಾಜ್ಯದ ಹಿತ ಕಾಪಾಡಿದ್ದಾರೆ. ಕಲೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಿರುವುದನ್ನು ನಾವು ಸ್ಮರಿಸಬೇಕು. ಸರ್ಕಾರದ ಪರವಾಗಿ, ಈ ಜಿಲ್ಲೆಯವನಾಗಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದೆ” ಎಂದು ಹೇಳಿದರು.

ಅವರ ಪ್ರತಿಮೆ ನಿರ್ಮಾಣ ಮಾಡಲಾಗುವುದೇ ಎಂದು ಕೇಳಿದಾಗ, “ಪ್ರತಿಮೆ ಮುಖ್ಯವಲ್ಲ. ಅವರ ವಿಚಾರದಲ್ಲಿ ಏನು ಮಾಡಬೇಕು ಎಂಬುದುನ್ನು ನಾವು ಚರ್ಚೆ ಮಾಡಿ ತಿಳಿಸುತ್ತೇವೆ. ಅವರ ಹೆಸರು ಉಳಿದುಕೊಳ್ಳುವಂತೆ ಏನುಬೇಕೋ ಅದನ್ನು ಮಾಡುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...