ಸ್ಟಾರ್‌ಲಿಂಕ್ ಜೊತೆಗಿನ ವ್ಯವಹಾರ ನಿಲ್ಲಿಸಿ; ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹ

Date:

ಭಾರತದಲ್ಲಿ ಉಪಗ್ರಹ ಆಧಾರಿತ ಅತಿ ವೇಗದ (ಹೈ-ಸ್ಪೀಡ್) ಇಂಟರ್ನೆಟ್ ಸೇವೆಗಳನ್ನು ನೀಡಲು ಎಲೋನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಜೊತೆ ಜಿಯೋ ಮತ್ತು ಏರ್‌ಟೆಲ್ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದವು ಸ್ಪೆಕ್ಟ್ರಮ್(ತರಂಗಾಂತರ) ಹಂಚಿಕೆ ಮತ್ತು ರಾಷ್ಟ್ರೀಯ ಭದ್ರತಾ ಕಾಳಜಿಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಈ ವ್ಯವಹಾರವನ್ನು ರದ್ದುಗೊಳಿಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹಿಸಿದೆ.

“ಸ್ಟಾರ್‌ಲಿಂಕ್ ಜೊತೆಗಿನ ವ್ಯವಹಾರ ನಿಲ್ಲಿದಿದ್ದರೆ, ನಮ್ಮ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ಪಣಕ್ಕಿಡುತ್ತದೆ. ಈ ಹಿಂದೆ, ಸುಪ್ರೀಂ ಕೋರ್ಟ್, ‘2ಜಿ ಪ್ರಕರಣದಲ್ಲಿ ಸ್ಪೆಕ್ಟ್ರಮ್ ಒಂದು ವಿರಳ ಸಂಪನ್ಮೂಲವಾಗಿದ್ದು, ಅದನ್ನು ಖಾಸಗಿಯವರಿಗೆ ಮುಕ್ತ, ಪಾರದರ್ಶಕ ಹರಾಜಿನ ಮೂಲಕ ಮಾತ್ರ ಹಂಚಿಕೆ ಮಾಡಬಹುದು’ ಎಂದು ಹೇಳಿತ್ತು. ಸ್ಪೆಕ್ಟ್ರಮ್ ಹಂಚಿಕೆಗಾಗಿ ಯಾವುದೇ ಖಾಸಗಿ ಒಪ್ಪಂದವು ದೇಶದ ಕಾನೂನಿನ ಉಲ್ಲಂಘನೆಯಾಗುತ್ತದೆ. ಉಪಗ್ರಹ ಸ್ಪೆಕ್ಟ್ರಮ್ ಬಳಕೆಯಲ್ಲಿ ಪ್ರಾಬಲ್ಯ ಹೊಂದಲು ಜಿಯೋ, ಏರ್‌ಟೆಲ್ ಮತ್ತು ಸ್ಟಾರ್‌ಲಿಂಕ್ ಒಂದು ಕೂಟ ರಚಿಸಿಕೊಳ್ಳಲು ಒಂದುಗೂಡಿರುವುದಕ್ಕೆ ಭಾರತದಲ್ಲಿ ಕೋಟ್ಯಂತರ ಟೆಲಿಕಾಂ ಚಂದಾದಾರರು ಬೆಲೆ ತೆರಬೇಕಾಗುತ್ತದೆ” ಎಂದು ಹೇಳಿದೆ.

“ಉಪಗ್ರಹ ಸ್ಪೆಕ್ಟ್ರಮ್‌ಅನ್ನು ರಕ್ಷಣಾ ಮತ್ತು ಇಸ್ರೋ ಕಾರ್ಯಾಚರಣೆಗಳಂತಹ ಆಯಕಟ್ಟಿನ ಬಳಕೆಗಳಿಗೆ ಮಾತ್ರ ಹಂಚಿಕೆ ಮಾಡಬೇಕು. ಇದು ಸ್ಪೆಕ್ಟ್ರಮ್ ಹಂಚಿಕೆಯ ಪ್ರಶ್ನೆ ಮಾತ್ರವಲ್ಲ, ಬಾಹ್ಯಾಕಾಶದಲ್ಲಿ ಒಂದು ದೇಶ ಹೊಂದಿರುವ ಕಕ್ಷೆಯ ಕಿಂಡಿ(ಸ್ಲಾಟ್‍)ಗಳ ಸಂಖ್ಯೆಯ ಪ್ರಶ್ನೆಯೂ ಆಗಿದೆ. ಕಕ್ಷೆಗಳಲ್ಲಿನ ಪ್ರಮುಖವಾದ ಸ್ಲಾಟ್‍ಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ನಮ್ಮ ನೈಸರ್ಗಿಕ ಸಂಪನ್ಮೂಲಗಳ ನಕಾಶೆಗಳನ್ನು ತಯಾರಿಸಲು, ಬೆಲೆಬಾಳುವ ವಾಣಿಜ್ಯ ದತ್ತಾಂಶಗಳನ್ನು- ಉದಾಹರಣೆಗೆ ಹವಾಮಾನ, ಬೆಳೆಗಳ ಸ್ಥಿತಿ ಇತ್ಯಾದಿ- ಮತ್ತು ಆಯಕಟ್ಟಿನ ಮಿಲಿಟರಿ/ರಕ್ಷಣಾ ದತ್ತಾಂಶಗಳನ್ನು ಕೂಡ ಸಂಗ್ರಹಿಸಲು, ಅಂತಹ ಉಪಗ್ರಹಗಳು ಅವುಗಳನ್ನು ಬಳಸಲು ಅವಕಾಶ ನೀಡುವುದು, ವಿಶೇಷವಾಗಿ ಇಸ್ರೋ ಮತ್ತು ಇತರ ಭಾರತೀಯ ಸಂಸ್ಥೆಗಳು ಹಾಗೆ ಮಾಡುವ ಸಾಮರ್ಥ್ಯವನ್ನು ಹೊಂದಿರುವಾಗ, ನಮ್ಮ ರಾಷ್ಟ್ರೀಯ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ವಿರುದ್ಧವಾಗಿರುತ್ತದೆ” ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ದೂರಸಂಪರ್ಕ ಸೇವೆಗಳು ದೇಶದ ರಕ್ಷಣೆಗೆ ಸಹ ನಿರ್ಣಾಯಕವಾಗಿವೆ. ಉಕ್ರೇನ್‌ ಮಿಲಿಟರಿಗೆ ಸ್ಟಾರ್‌ಲಿಂಕ್ ಸೇವೆಗಳನ್ನು ನಿಲ್ಲಿಸುವ ಅಮೆರಿಕದ ಬೆದರಿಕೆ ಝೆಲೆನ್ಸ್ಕಿ ಉಕ್ರೇನ್ ತನ್ನ ನೈಸರ್ಗಿಕ ಸಂಪನ್ಮೂಲಗಳನ್ನು ಹಸ್ತಾಂತರಿಸಬೇಕು ಮತ್ತು ಅಮೆರಿಕದ ಆಶ್ರಯದಲ್ಲಿ ರಷ್ಯಾದೊಂದಿಗೆ ಮಾತುಕತೆ ನಡೆಸಬೇಕು ಎಂಬ ಅಮೆರಿಕದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಮಾಡಿತು ಎಂದು ಈಗ ಗೊತ್ತಾಗಿದೆ. ಒಂದು ಯುಎಸ್ ಕಂಪನಿಯು ಅತ್ಯಂತ ಆಯಕಟ್ಟಿನ ಉಪಗ್ರಹ ಸ್ಪೆಕ್ಟ್ರಮ್ ಮತ್ತು ಕಕ್ಷೆಯ ಸ್ಲಾಟ್‍ಗಳನ್ನು ಪಡೆದುಕೊಳ್ಳಲು ಮತ್ತು ಒಂದು ಬಾಹ್ಯಾಕಾಶ ಏಕಸ್ವಾಮ್ಯವನ್ನು ರಚಿಸಿಕೊಳ್ಳಲು ಅವಕಾಶ ನೀಡುವುದು ನಮ್ಮ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ಪಣಕ್ಕಿಡುತ್ತದೆ” ಎಂದು ಎಚ್ಚರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...