ʼಧರ್ಮಸ್ಥಳ ಪ್ರಹಸನ’ ಬಗ್ಗೆ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಲಿ: ಪ್ರಲ್ಹಾದ ಜೋಶಿ

Date:

ಧರ್ಮಸ್ಥಳ ವಿಚಾರದಲ್ಲಿ ರಾಜ್ಯ ಸರ್ಕಾರ ದೊಂಬರಾಟ ನಡೆಸಿದ್ದು, ಈ ಕೂಡಲೇ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಮಾದ್ಯಮದವರೊಂದಿಗೆ ಮಾತನಾಡಿ, “ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳ ಆಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರವೂ ತಾಳ ಹಾಕುತ್ತ ಕುಣಿಯುತ್ತಿದೆ” ಎಂದು ಕಿಡಿ ಕಾರಿದರು.

“ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ಧರ್ಮದ ವಿಚಾರವಾಗಿ ಪದೇ ಪದೇ ಒಂದಿಲ್ಲೊಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಪವಿತ್ರ ಕ್ಷೇತ್ರಗಳ ಹೆಸರು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ಸರ್ಕಾರ ಹಿಂದೂ ಧರ್ಮ ಹಾಗೂ ಧಾರ್ಮಿಕ ಸ್ಥಳಗಳ ಹೆಸರು ಕೆಡುವಂತೆ ಮಾಡುತ್ತಿರುವುದು ನಿಜಕ್ಕೂ ಅಸಹಿಷ್ಣುತೆಯ ಪರಮಾವಧಿ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಾಮಿಕನ ಬಂಧನಕ್ಕೆ ಆಗ್ರಹ: “ಅನಾಮಿಕ ಮುಸುಕುದಾರಿ ಒಂದೆರೆಡಲ್ಲ; ನೂರಾರು ಹೆಣಗಳನ್ನು ಹುಗಿದಿದ್ದೇನೆ ಎನ್ನುತ್ತಾನೆ. ಈತನ ವಿರುದ್ಧ ಕಾನೂನಾತ್ಮಕವಾದ ತನಿಖೆ ನಡೆಸಬೇಕು ಮತ್ತು ಆತನನ್ನು ಮೊದಲು ಬಂಧಿಸಬೇಕು. ಹತ್ತು ವರ್ಷದ ಹಿಂದೆ ನೂರಾರು ಮಹಿಳೆಯರ ಅದರಲ್ಲೂ ಅತ್ಯಾಚಾರಕ್ಕೆ ಒಳಗಾದವರ ಹೆಣ ಹುಗಿದಿದ್ದೇನೆ ಎನ್ನುತ್ತಾನೆ ಈ ಅನಾಮಿಕ. ಇಷ್ಟು ದಿನ ಏನು ಕತ್ತೆ ಕಾಯುತ್ತಿದ್ದನಾ? ಆಗಲೇ ಏಕೆ ದೂರು ಕೊಡಲಿಲ್ಲ? ಈವರೆಗೂ ಸುಮ್ಮನಿದ್ದದ್ದು ಏಕೆ” ಎಂದು ಪ್ರಶ್ನಿಸಿದರು.

ಸದನಕ್ಕೆ ತಕ್ಷಣ ಮಧ್ಯಂತ ವರದಿ ಸಲ್ಲಿಸಲಿ ಸರ್ಕಾರ: ರಾಜ್ಯದಲ್ಲಿ ಕಾನೂನು‌-ಸುವ್ಯವಸ್ಥೆ ಹಾಳು ಮಾಡಿರುವ ಈ ವ್ಯಕ್ತಿಯ ವಿರುದ್ಧ ಸರ್ಕಾರ ಕಾನೂನಾತ್ಮಕವಾಗಿ ತನಿಖೆ ನಡೆಸಬೇಕು. ಅಲ್ಲದೇ, ಇಷ್ಟು ದಿನ ನಡೆದ ಡೊಂಬರಾಟದ ಬಗ್ಗೆ ಈ ಕೂಡಲೇ ವಿಧಾನಸಭೆ ಅಧಿವೇಶನದಲ್ಲಿ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಕೇರಳ ಸರ್ಕಾರಕ್ಕೇನು ಸಂಬಂಧ? “ಧರ್ಮಸ್ಥಳ ಪ್ರಕರಣದಲ್ಲಿ ಕೇರಳದವರೂ ಬರುತ್ತಿದ್ದಾರೆ. ಕೇರಳ ಸರ್ಕಾರಕ್ಕೇನು ಸಂಬಂಧ? ಎಂದು ಪ್ರಶ್ನಿಸಿದ ಸಚಿವರು, ಧರ್ಮಸ್ಥಳದ ಹೆಸರು ಹಾಳು ಮಾಡುವುದು ಮತ್ತು ಹಿಂದೂಗಳ ನಂಬಿಕೆ ಕ್ಷೇತ್ರದ ವಿರುದ್ಧ ಷಡ್ಯಂತರ ನಡೆಸುವುದೇ ಇದರ ಉದ್ದೇಶವಾಗಿದೆ. ಧರ್ಮಸ್ಥಳದ ಬಗ್ಗೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವುದು ಮತ್ತು ಮಂಜುನಾಥನ ಸನ್ನಿಧಿಗೆ ಏಕೆ ಹೋಗುತ್ತೀರಿ? ಧರ್ಮಸ್ಥಳಕ್ಕೆ ಏಕೆ ಹೋಗುತ್ತೀರಿ? ಎಂಬಂತಹ ವಾತಾವರಣ ನಿರ್ಮಿಸುವ ವ್ಯವಸ್ಥಿತ ಷಡ್ಯಂತರ ಇದಾಗಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...