ಆರ್‌ಎಸ್‌ಎಸ್‌ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಸಾಹಿತಿಗಳು, ಚಿಂತಕರು, ಹೋರಾಟಗಾರರ ಬೆಂಬಲ

Date:

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಚಟುವಟಿಕೆಗಳಿಗೆ ಅನುಮತಿ ನೀಡಬಾರದು’ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಬೆಂಬಲ ವ್ಯಕ್ತಪಡಿಸಿರುವ ನಾಡಿನ ಸಾಹಿತಿಗಳು, ಚಿಂತಕರು, ಹೋರಾಟಗಾರರು, ‘ಆರ್‌ಎಸ್‌ಎಸ್‌ ಸಂಘಟನೆ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳಬೇಕು ಮತ್ತು ಅದರ ಎಲ್ಲ ಲೆಕ್ಕಪತ್ರಗಳ ವ್ಯವಹಾರಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮಂಗಳವಾರ ಸಂಬಂಧ ಹಿರಿಯ ಸಾಹಿತಿಗಳಾದ ಡಾ.ಜಿ.ರಾಮಕೃಷ್ಣ, ಪ್ರೊ.ಕೆ.ಮರಳುಸಿದ್ಧಪ್ಪ, ಪ್ರೊ.ಎಸ್. ಜಿ.ಸಿದ್ದರಾಮಯ್ಯ, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್, ಹೋರಾಟಗಾರರಾದ ಮಾವಳ್ಳಿ ಶಂಕರ್, ಕೆ.ಎಸ್.ವಿಮಲಾ, ಡಾ.ಮೀನಾಕ್ಷಿ ಬಾಳಿ, ಟಿ.ಸುರೇಂದ್ರ, ಬಿ.ಶ್ರೀಪಾದ ಭಟ್, ರುದ್ರಪ್ಪ ಹನಗವಾಡಿ ಜಂಟಿ ಪ್ರಕಟಣೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಪ್ರಿಯಾಂಕ್ ಖರ್ಗೆಯವರು ಸರಕಾರ, ಮುಜರಾಯಿ ಸ್ಥಳಗಳಲ್ಲಿ, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎಂದು ಹೇಳಿರುವುದು ಸಂವಿಧಾನದ ಆಶಯಕ್ಕೆ ಪೂರಕವಾಗಿದೆ. ಆದರೆ, ಖರ್ಗೆಯವರ ಹೇಳಿಕೆಯನ್ನು ತಿರುಚಿದ ಬಿಜೆಪಿ ಮುಖಂಡರು ‘ಆರೆಸ್ಸಸ್ ನಿಷೇಧಿಸಬೇಕು ಎಂದು ಹೇಳಿದ್ದಾರೆ’ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ಇಂತಹ ಅಪಪ್ರಚಾರವನ್ನು ಖಂಡಿಸುತ್ತೇವೆ. ಮತ್ತು ಪ್ರಿಯಾಂಕ್ ಖರ್ಗೆಯವರ ನಿಲುವನ್ನು ಬೆಂಬಲಿಸುತ್ತೇವೆ’ ಎಂದು ಅವರುಗಳು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸರಕಾರಕ್ಕೆ ಸೇರಿದ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎನ್ನುವ ಆದೇಶ ಹೊರಡಿಸಬೇಕು. ಜೊತೆಗೆ ಯಾವುದೇ ಸಂಘಟನೆ ದೊಣ್ಣೆಯೂ ಸೇರಿದಂತೆ ಯಾವುದೇ ಆಯುಧ ಹಿಡಿದು ಅಥವಾ ಹಿಂಸೆಗೆ ಪ್ರಚೋದಿಸುವ ಘೋಷಣೆ ಕೂಗುತ್ತಾ ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡಬಾರದು’ ಎಂದು ಅವರುಗಳು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...