ಜಿಪಂ ಸದಸ್ಯನ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ

Date:

ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ.

ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ

ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಆದರೆ, ಈ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದು, ಸಾಕ್ಷಿಗಳಿಗೆ 1 ಲಕ್ಷ ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದಿಗೆ ಮನವಿ ಮಾಡಿತ್ತು. ಇದೀಗ ಸಿಬಿಐ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್​, ವಿನಯ್​ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ತಮ್ಮ ಒಡೆತನದ ಜಿಮ್​ನಲ್ಲಿಯೇ ಜೂನ್ 15, 2016ರಲ್ಲಿ ಯೋಗೇಶ್​ ಗೌಡ ಅವರ ಕೊಲೆ ನಡೆದಿತ್ತು. ಆಗ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಪ್ರಕರಣ ಸಂಬಂಧ ನವೆಂಬರ್ 5, 2020ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಕೊಲೆ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಬಂಧನದ ಬಳಿಕ ಹಲವು ಬಾರಿ ವಿನಯ್ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಧಾರವಾಡ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಬಳಿಕ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸುವಂತೆ ವಿನಯ್ ಮನವಿ ಮಾಡಿದ್ದರು.

ಅಲ್ಲಿಯೂ ಜಾಮೀನು ಅರ್ಜಿ ವಜಾ ಅಗಿತ್ತು. ಕೊನೆಗೆ ಸುಪ್ರೀಂಕೋರ್ಟ್​ನಿಂದ ಆಗಸ್ಟ್​ 11ರಂದು ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಧಾರವಾಡಕ್ಕೆ ಬರಬಾರದು ಎಂದು ಷರತ್ತು ವಿಧಿಸಿ ಸುಪ್ರೀಂ ಕೋರ್ಟ್​ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...