ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

Date:

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ತನಿಖೆ ಮತ್ತು ತನಿಖೆ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರದ ಅವಹೇಳನ ಮಾಡಬಾರದು. ಅಪಪ್ರಚಾರ ಮಾಡಬಾರದು ಎಂಬುದು ಬಿಜೆಪಿ ನಿಲುವು. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ನಾವು ಹೇಳಿದ್ದು, ಉಪ ಮುಖ್ಯಮಂತ್ರಿಗಳೂ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನಿಲ್‍ಕುಮಾರ್ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, “ಇದರ ಹಿಂದಿನ ಶಕ್ತಿಗಳನ್ನು ಎಸ್‍ಐಟಿ ಪತ್ತೆ ಹಚ್ಚುವ ವಿಶ್ವಾಸ ನಮಗಿದೆ. ಇದರಲ್ಲಿ ಒಬ್ಬ ಮುಸುಕುಧಾರಿಯಲ್ಲ; ಹತ್ತಾರು ಜನರು ಮುಸುಕುಧಾರಿಗಳಾಗಿ ಕೆಲಸ ಮಾಡಿದ್ದಾರೆಂದು ನಾನು ಸದನದಲ್ಲೂ ಹೇಳಿದ್ದೆ. ಸುಳ್ಳು ಸುದ್ದಿ ಹರಡಿಸಿದವರು ಯಾರು? ಪಿತೂರಿ ಮಾಡಿದ್ದು ಯಾರು? ಇವೆಲ್ಲವೂ ತನಿಖೆಯಿಂದ ಗೊತ್ತಾಗಬೇಕಿದೆ. ಆದಷ್ಟು ಬೇಗ, ತನಿಖೆಯಿಂದ ಇವೆಲ್ಲ ಹೊರಬರಲಿ” ಎಂದು ಆಗ್ರಹಿಸಿದರು.

ಬಾನು ಮುಷ್ತಾಕ್ ಬಗ್ಗೆ ತಕರಾರು ಇಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಡಹಬ್ಬ ದಸರಾವನ್ನು ನಾಡಿನ ಜನರು ಅತ್ಯಂತ ಶ್ರದ್ಧಾಭಕ್ತಿಯಿಂದ ಗೌರವಿಸುವ- ಪೂಜಿಸುವ ಒಂದು ಸಂಸ್ಕೃತಿ. ಇದರ ಉದ್ಘಾಟನೆ ಹೇಗಾಗಬೇಕೆಂದು ಒಂದು ಜವಾಬ್ದಾರಿಯುತ ಸರಕಾರ ಇವತ್ತು ತೀರ್ಮಾನ ಮಾಡಬೇಕು. ಇಸ್ಲಾಂನಲ್ಲಿ ವಿಗ್ರಹ ಪೂಜೆಗೆ ಅವಕಾಶ ಇದ್ದರೆ, ಅದನ್ನು ಬಾನು ಮುಷ್ತಾಕ್ ಅವರು ಒಪ್ಪಿಕೊಳ್ಳುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಮತ್ತು ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ 7 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದೆ. ಹಬ್ಬ, ಹರಿದಿನಗಳು ಇರುವ ಕಾರಣ, ಸರಕಾರಿ ರಜೆಗಳು ನಿರಂತರವಾಗಿ ಇರುವ ಕಾರಣಕ್ಕೆ ಈ 7 ದಿನಗಳ ಕಾಲಾವಕಾಶವನ್ನು ಇನ್ನಷ್ಟು ವಿಸ್ತರಿಸಲು ಮನವಿ ಮಾಡಿದ್ದೇವೆ” ಎಂದು ಹೇಳಿದರು.

“ಆಕ್ಷೇಪಣೆ ಸಲ್ಲಿಸಲು ಇನ್ನೂ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೊಡಲು ಬಿಜೆಪಿ ಕಡೆಯಿಂದ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ. ಇಂದು ಪ್ರಮುಖರ ಸಭೆ ನಡೆಸಲಾಗಿದೆ. 1,400 ಜಾತಿ ಪಟ್ಟಿ ಅವಲೋಕಿಸಿದಾಗ ಯಥಾಪ್ರಕಾರ ಮುಸ್ಲಿಮರು ಮತ್ತು ಮುಸ್ಲಿಂ ಉಪ ಜಾತಿಗಳನ್ನು ಪಟ್ಟಿಯಲ್ಲಿ ಕೈಬಿಟ್ಟಿದ್ದಾರೆ. ಹಿಂದೆ ಜಯಪ್ರಕಾಶ್ ಹೆಗ್ಡೆಯವರು 90 ಜಾತಿಗಳು ಮುಸಲ್ಮಾನರಲ್ಲಿ ಇವೆ ಎಂದು ಪ್ರಕಟಿಸಿದ್ದರು. ಆಯೋಗವು 1,400 ಜಾತಿಗಳ ಪಟ್ಟಿ ಮಾಡುವಾಗ ಇದನ್ನು ಯಾಕೆ ಬಿಟ್ಟಿದೆ ಎಂಬುದು ಸ್ಪಷ್ಟವಾಗಿಲ್ಲ” ಎಂದರು.

“ಜಾತಿಯ ಪಟ್ಟಿ, ಮಾನದಂಡ ಬಳಕೆ ಮೊದಲಾದ ಹಲವು ರೀತಿಯ ಗೊಂದಲಗಳಿವೆ. ಅವು ಅಧ್ಯಕ್ಷರ ಪತ್ರಿಕಾ ಹೇಳಿಕೆ ಮೂಲಕ ಗೊತ್ತಾಗಿದೆ. ಮುಂದಿನ ವಾರ ಬಿಜೆಪಿ ನಿಯೋಗವು ಆಯೋಗಕ್ಕೆ ಭೇಟಿ ಕೊಡಲಿದೆ. ನಮಗಿರುವ ಅನುಮಾನಗಳು, ಸಮೀಕ್ಷೆ ಯಾವ ರೀತಿ ನಡೆಯಬೇಕೆಂಬ ಕುರಿತು ವಿವರಗಳನ್ನು ತಿಳಿಸಲು ಇಂದಿನ ಸಭೆಯು ತೀರ್ಮಾನ ಮಾಡಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...