2030ಕ್ಕೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

Date:

ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಭಾರತದ ಉಕ್ಕು ವಲಯದ ಒಟ್ಟು ಉತ್ಪಾದನೆಯ ಶೇ.50ರಷ್ಟನ್ನು ಉತ್ಪಾದಿಸುತ್ತಿರುವ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದ ಅವರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಈ ವಲಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ. ಸಣ್ಣ ಗಾತ್ರದ ಉಕ್ಕು ವಲಯವು ಕೇವಲ ಒಂದು ಉದ್ಯಮವಲ್ಲ. ಇದು ದೇಶಿಯ ಕೈಗಾರಿಕೀಕರಣದ ಬೆನ್ನೆಲು. ಇದು ಸ್ಥಳೀಯ ಆರ್ಥಿಕತೆಗೆ ಶಕ್ತಿ ನೀಡುತ್ತಿದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ. ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುತ್ತಿರುವುದು ಮಾತ್ರವಲ್ಲದೆ, ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಭಾರತವನ್ನು ಶೂನ್ಯ ಇಂಗಾಲ ಬಿಡುಗಡೆ ಹಾಗೂ ಉಕ್ಕು ವಲಯದಲ್ಲಿ ಜಾಗತಿಕ ಸುಸ್ಥಿರ ರಾಷ್ಟ್ರವನ್ನಾಗಿ ಹೊರಹೊಮ್ಮಿಸಲು ನಾವು ದೃಢನಿಶ್ಚಯ ಮಾಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್‌ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವುದು ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಹೆಗ್ಗುರಿ ಆಗಿದೆ. ಈ ಮೈಲಿಗಲ್ಲುಗಳನ್ನು ಸಾಧಿಸುವಲ್ಲಿ ಸಣ್ಣ ಗಾತ್ರದ ಉಕ್ಕು ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ವಿಶೇಷ ಉಕ್ಕಿಗಾಗಿ PLI ಯೋಜನೆ, ಹಸಿರು ಉಕ್ಕು ಪ್ರಮಾಣೀಕರಣ ರೇಟಿಂಗ್ ವ್ಯವಸ್ಥೆ, ಹೈಡ್ರೋಜನ್ ಆಧರಿತ ಉಕ್ಕು ತಯಾರಿಕೆ ಯೋಜನೆಗಳು ಮತ್ತು ಉಕ್ಕಿನ ಸ್ಕ್ರ್ಯಾಪ್ ಮರುಬಳಕೆ ನೀತಿ ಸೇರಿದಂತೆ ಪ್ರಮುಖ ಉಪಕ್ರಮಗಳನ್ನು ಸರಕಾರವು ಕೈಗೊಂಡಿದೆ” ಎಂದು ಅವರು ವಿವರಿಸಿದರು.

ಸರಕಾರದ ಪೂರ್ವಭಾವಿ ಕ್ರಮಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು,”ಇಂಧನ ದಕ್ಷತೆಯು ಇನ್ನು ಮುಂದೆ ಐಚ್ಛಿಕವಲ್ಲ. ತ್ಯಾಜ್ಯ ಶಾಖ ಹೆಚ್ಚಳ, ಆತ್ಯಾಧುನಿಕ ಮಾಲಿನ್ಯ ನಿಯಂತ್ರಣ ವ್ಯವಸ್ಥೆ ಮತ್ತು ನವೀಕರಿಸಬಹುದಾದ ಇಂಧನ ಏಕೀಕರಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಲ್ಲಿ ನಾವು ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು (MSME) ಉತ್ತೇಜಿಸುತ್ತೇವೆ ಎಂದು ಸಚಿವರು ನುಡಿದರು.

“ಮನೆ, ಬೃಹತ್‌ ಕಟ್ಟಡ, ಹೆದ್ದಾರಿ, ಸೇತುವೆ, ರೇಲ್ವೆ, ವಿಮಾನ, ರಾಕೆಟ್‌ ಸೇರಿದಂತೆ ರಾಷ್ಟ್ರದ ಭವ್ಯ ಇತಿಹಾಸವನ್ನು ನಿರ್ಮಿಸುವ ಉಕ್ಕು ಕ್ಷೇತ್ರವನ್ನು ನಾವು ಮತ್ತಷ್ಟು ಸಶಕ್ತಗೊಳಿಸಬೇಕಿದೆ. ನೀತಿ, ಉದ್ದೇಶ ಮತ್ತು ನಮ್ಮ ಜನರ ಉತ್ಸಾಹದೊಂದಿಗೆ ನಾವು ಭಾರತವನ್ನು ಜಾಗತಿಕ ಉಕ್ಕಿನ ಶಕ್ತಿ ಕೇಂದ್ರವನ್ನಾಗಿ ಮಾಡುತ್ತೇವೆ” ಎಂದು ಸಚಿವರು ತಿಳಿಸಿದರು.

ಇದೇ ವೇಳೆ ಜಾಗತಿಕವಾಗಿ ಭಾರತದ ಉಕ್ಕು ಉದ್ಯಮಕ್ಕೆ ಏಕೀಕೃತ ಗುರುತನ್ನು ಸಂಕೇತಿಸುವ ಭಾರತ್‌ ಸ್ಟೀಲ್ ಲೋಗೋ ಮತ್ತು ಭಾರತ್ ಸ್ಟೀಲ್ ಅಂತರ್ಜಾಲ ತಾಣವನ್ನು ಅನಾವರಣಗೊಳಿಸಿದ ಸಚಿವರು; ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸೂವಿಕೆಯನ್ನು ಕನಿಷ್ಠ ಮಟ್ಟಕ್ಕೆ ತಂದಿರುವ ಹಾಗೂ ಉಕ್ಕು ಉತ್ಪಾದನಾ ಮಾನದಂಡಗಳ ಗುರಿಯನ್ನು ಸಾಧಿಸಿದ ಉದ್ಯಮದ ನಾಯಕರಿಗೆ ಗೌರವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...