ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ: ಸಿಎಂ ಸಿದ್ದರಾಮಯ್ಯ

Date:

ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...