ನಾನು ಸಿಎಂ ಆಗಬೇಕು ಎಂದ ರಾಜಣ್ಣಗೆ ಆಭಾರಿ, ಅದೃಷ್ಟ ಬೇಗ ಕೂಡಿ ಬರಲಿ: ಪರಮೇಶ್ವರ್

Date:

  • ‘ಸಿಎಂ ಆಗುವ ಅದೃಷ್ಟ ಕೂಡಿ ಬರಲಿ, ನನಗೂ ಆಸೆಯಿದೆ’
  • ‘ಬಹಳ ಅರ್ಹರು ಇದ್ದು, ಎಲ್ಲರಿಗೂ ಚಾನ್ಸ್ ಸಿಗಲಿ ಬಿಡಿ’

ಪರಮೇಶ್ವರ್ ಸಿಎಂ ಆಗಲಿ ಎಂಬ ರಾಜಣ್ಣನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, “ನಾನು ಅವರಿಗೆ ಆಭಾರಿಯಾಗಿದ್ದು ಆ ಅದೃಷ್ಟ ಬೇಗ ಕೂಡಿ ಬರಲಿ ಅಂತ ನಾನು ಆಸೆಪಡುತ್ತೇನೆ. ಆ ಅದೃಷ್ಟ ಯಾವಾಗ ಕೂಡಿ ಬರುತ್ತೆ ಅಂತ ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

ತಮ್ಮ ಮನೆಯಲ್ಲಿ ಸಿಎಂ ಊಟದ ನೆಪದಲ್ಲಿ ಸಭೆ ನಡೆಸಿದ ವಿಚಾರವಾಗಿ ಮಾತನಾಡಿ, “ನಮ್ಮ ಮನೆಯಲ್ಲಿ ಯಾವುದೇ ತರಹದ ಚರ್ಚೆ ಆಗಿಲ್ಲ. ಬಹಳ ಅರ್ಹರು ಇದ್ದಾರೆ. ಎಲ್ಲರೂ ಒಂದೊಂದು ಚಾನ್ಸ್ ತಗೊಳ್ಳಲಿ ಬಿಡಿ” ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಿಯಾಂಕ ಖರ್ಗೆಗೆ ಹಾಗೂ ಪರಮೇಶ್ವರ್ ಗೆ ನಾಚಿಕೆ ಆಗ್ಬೇಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, “ಸಿಎಂ ಸಿದ್ದರಾಮಯ್ಯ ಅವರು ಹೇಳುವ ಹಾಗೆ, ಈಶ್ವರಪ್ಪಗೆ ಮೆದುಳು ಹಾಗೆ ನಾಲಿಗೆಗೆ ಲಿಂಕ್ ತಪ್ಪಿದೆ. ನಾನು ಅದನ್ನೆ ಹೇಳುವೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಬೇಡ ಎಂದರೆ, ಪರಮೇಶ್ವರ್ ಸಿಎಂ ಆಗಲಿ: ಸಹಕಾರ ಸಚಿವ ಕೆ ಎನ್‌ ರಾಜಣ್ಣ

“ಔರಾದ್ಕರ್ ವರದಿ ವಿಚಾರಕ್ಕೆ ಸಂಬಂಧಿಸಿ, ಔರಾದ್ಕರ್ ವರದಿಯನ್ನ ಸಂಪೂರ್ಣವಾಗಿ ಅನುಷ್ಠಾನ ಮಾಡಿಲ್ಲ. ಮತ್ತೆ ಮರುಪರಿಶೀಲನೆ ಮಾಡಬೇಕು ಅಂತ ಯೋಚನೆ ಮಾಡಿದ್ದೇವೆ. ಇಲ್ಲಿಯವರೆಗೆ ಕೆಲವು ಅಂಶಗಳನ್ನ ಮಾತ್ರ ಪರಿಗಣನೆಗೆ ತೆಗೆದುಕೊಂಡಿದ್ದೇವೆ. ಮುಖ್ಯವಾದ ಕೆಲ ಅಂಶಗಳನ್ನ ಪರಿಗಣನೆಗೆ ತೆಗೆದುಕೊಂಡಿಲ್ಲ‌. ಹಾಗಾಗಿ ಮತ್ತೆ ಪುನರ್ ಪರಿಶೀಲನೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

​​”ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 70% ಸಿಬ್ಬಂದಿಗಳಿಗೆ ವಸತಿ ಒದಗಿಸಲು ತೀರ್ಮಾನ ಮಾಡಿದ್ದೇವೆ. ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರ ಕುಟುಂಬಗಳು ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಿದ್ದೇವೆ. ಹಣಕಾಸಿನ ಸಚಿವರು ಸಿಎಂ ಸಿದ್ದರಾಮಯ್ಯ ಇದಕ್ಕೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...