ಸರ್ಕಾರವೇ ಇಲ್ಲವಾಗುವಾಗ ಪ್ರತಿಪಕ್ಷ ನಾಯಕ ಏಕೆ ಬೇಕು: ಯತ್ನಾಳ ಪ್ರಶ್ನೆ

Date:

  • ‘ವಿರೋಧ ಪಕ್ಷದ ನಾಯಕ ಆಯ್ಕೆ ಮಾಡುವುದರೊಳಗಾಗಿ  ಸರ್ಕಾರ ಪತನ’
  • ‘ರಾಜಕೀಯ ಭೂಕಂಪ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ’

ರಾಜ್ಯ ಸರ್ಕಾರವೇ ಪತನಗೊಳ್ಳುತ್ತಿರುವಾಗ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಏಕೆ ಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ವಿಜಯಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದರೊಳಗಾಗಿ ಕಾಂಗ್ರೆಸ್ ಸರ್ಕಾರವೇ ಇಲ್ಲದಂತಾಗಬಹುದು” ಎಂದರು.

“ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ದೊಡ್ಡ ಷಡ್ಯಂತ್ರ ನಡೆದಿದೆ. ಅವರದ್ದೇ ಪಕ್ಷದ ಚನ್ನಗಿರಿ ಶಾಸಕ ಡಿ.ಕೆ. ಶಿವಕುಮಾರ್‌ಗೆ 70 ಶಾಸಕರ ಬೆಂಬಲ ಇದೆ ಎಂದಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರ ಕಡೆಗೆ 65 ಅಷ್ಟೇ ಇದೆ ಎಂದಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕ ರಮೇಶ ಜಾರಕಿಹೊಳಿ ಹೇಳಿದ ಹಾಗೆ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಎಲ್ಲೇ ರಾಜಕೀಯ ಭೂಕಂಪನವಾದರೂ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ. ಹಾಗೆಯೇ, ರಮೇಶ ಜಾರಕಿಹೊಳಿಯವರಿಗೆ ಗೊತ್ತಾಗಿದೆ ಎನ್ನಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?

“ರಾಜ್ಯ ಸರ್ಕಾರ ಪೂರ್ಣವಾಗಿ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿಲ್ಲ. ಘೋಷಣೆಯಂತೆ 200 ಯುನಿಟ್ ವಿದ್ಯುತ್ ಉಚಿತ ಕೊಡುತ್ತಿಲ್ಲ. ಗೃಹ ಲಕ್ಷ್ಮಿ ಎಲ್ಲರಿಗೂ ಸಿಕ್ಕಿಲ್ಲ, ಅದಕ್ಕಾಗಿ ಹಣ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಹುಲಿ ಉಗುರು, ಚಿರತೆ ಉಗುರು, ಬಸವನಾಡು ನಾಮಕರಣ ಮಾಡುವುದು ಸೇರಿದಂತೆ ಕೆಲಸಕ್ಕೆ ಬಾರದ ವಿಷಯಗಳ ಮೂಲಕ ಜನರನ್ನು ತಪ್ಪು ದಾರಿಗೆ ಒಯ್ಯುತ್ತಿದ್ದಾರೆ” ಎಂದು ಕಿಡಿ ಕಾರಿದರು.

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಬೆಂಕಿ ಹಚ್ಚುತ್ತಿರುವ ವಿಷಯವಾಗಿ ಪ್ರತಿಕ್ರಿಯಿಸಿದ ಯತ್ನಾಳ, “ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ಕೆರಳಿಸುವ ಪ್ರಯತ್ನ ಮಾಡಬಾರದು. ಪ್ರಚೋದನೆ ಕೊಡುವ ಕೆಲಸ ಖಂಡಿಸುತ್ತೇವೆ. ನಿಮ್ಮ ಸರ್ಕಾರದ ಜಗಳದಿಂದಾಗಿ ಕರ್ನಾಟಕದ ಬಸ್‌ಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...