ಸಂಸದರ ಕೆಲಸ ಕೇಂದ್ರದಿಂದ ದುಡ್ಡು ತರುವುದಲ್ಲ: ಛಲವಾದಿ ನಾರಾಯಣಸ್ವಾಮಿ

Date:

ಸಂಸದರದ್ದು ದುಡ್ಡು ತರುವ ಕೆಲಸವಲ್ಲ, ಅವರೇನು ಏಜೆಂಟರೇ? ಅವರು ರಿಯಲ್ ಎಸ್ಟೇಟ್ ಮಾಡುತ್ತಾರಾ? ನೀವು ಮೊದಲು ರಾಜೀನಾಮೆ ಕೊಡಿ; ಆಮೇಲೆ ಅವರು ಹಣ ತರುತ್ತಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದರು.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕುಣಿಯಲಾರದವರಿಗೆ ನೆಲ ಡೊಂಕು ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯವರು ಅವರಿಗೆ ಸರಿಯಾದ ಉತ್ತರ ಕೊಟ್ಟಿದ್ದಾರೆ” ಎಂದರು.

ಸುರಂಗ ಮಾರ್ಗ ರಚನೆ ಮೂಲಕ ಬೆಂಗಳೂರಿಗೆ ಆಪತ್ತು ಎದುರಾಗಲಿದೆ ಎಂಬ ವರದಿಗಳಿವೆ. ಇಷ್ಟಿದ್ದರೂ ಡಿ.ಕೆ.ಶಿವಕುಮಾರ್ ಅವರು ಇದನ್ನು ಮಾಡಲು ಮುಂದಾಗಿರುವುದು ಸರಿಯಲ್ಲ. ಸುರಂಗ ಯೋಜನೆ ವಿರುದ್ಧ ಈಗಾಗಲೇ ಹಲವು ಸಂಸ್ಥೆಗಳು- ಪರಿಸರವಾದಿಗಳು ಧ್ವನಿ ಎತ್ತಿದ್ದಾರೆ. ಅದೇನು ಜನೋಪಯೋಗಿ ಎಂದು ನನಗೆ ಅನಿಸುತ್ತಿಲ್ಲ. ಟನೆಲ್ ರಸ್ತೆಗೆ 300- 400 ರೂ. ಟೋಲ್ ಕೊಡಬೇಕಾಗುತ್ತದೆ. ಹಣ ಕಟ್ಟಿಸಿಕೊಳ್ಳದೇ ಮಾಡುವ ಕೆಲಸ ಇದ್ದರೆ ಮಾಡಿ. ಭೂಮಿ ಮೇಲೆ ರಸ್ತೆ ಮಾಡುವುದು ಸೂಕ್ತವಿದ್ದು, ಈ ಕುರಿತು ಗಮನಿಸಲಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರು ಬೆಳೆಸುವುದನ್ನು ನಿಲ್ಲಿಸಿ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಬೆಳೆಸಿ ಎಂದು ತಿಳಿಸಿದರು. ಅಲ್ಲಿ ಜನರು ನಿಲ್ಲುವಂತೆ ಮಾಡಿ. ಗುಲ್ಬರ್ಗದ ಸ್ಥಿತಿ ಏನಾಗಿದೆ? ತಲಾದಾಯದ ವಿಷಯದಲ್ಲಿ ಅದು ಅತ್ಯಂತ ಹಿಂದುಳಿದಿದೆ. ಬಿಜಾಪುರದಲ್ಲಿ ಕೈಗಾರಿಕೆ ಸ್ಥಾಪಿಸಿ” ಎಂದು ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.

ವಿವೇಕದ ಪ್ರಶ್ನೆ ಇದ್ದಂತಿಲ್ಲ

“ಪ್ರಿಯಾಂಕ್ ಖರ್ಗೆ ಬಳಿ ವಿವೇಕದ ಪ್ರಶ್ನೆಗಳಿವೆ ಎಂದು ಅನಿಸುತ್ತಿಲ್ಲ; ಆದ್ದರಿಂದ ಅವರ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಆರೆಸ್ಸೆಸ್‍ಗೆ ದೇಣಿಗೆ ಎಲ್ಲಿಂದ ಎಂಬುದನ್ನು ಇಲಾಖೆ ಪ್ರಶ್ನಿಸಲಿ, ಇ.ಡಿ, ಆದಾಯ ತೆರಿಗೆ ಇಲಾಖೆಯವರು ಕೇಳಲಿ, ಎಲ್ಲೋ ಕುಳಿತು ಕೇಳುವವರಿಗೆ ಅವರು ಉತ್ತರ ಕೊಡುತ್ತ ಕೂರುತ್ತಾರಾ? ಆರೆಸ್ಸೆಸ್ ಕಚೇರಿಗೆ ಹೋಗಿ ಪ್ರಶ್ನಿಸುವುದು ಒಳ್ಳೆಯದು” ಎಂದರು.

“ಆರೆಸ್ಸೆಸ್ ನೋಂದಣಿ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನೋಂದಣಿ ಆಗಬೇಕೆಂದು ಕಾನೂನಿನಲ್ಲಿ ಇಲ್ಲ. ಅವರು ಗ್ರಾಮೀಣಾಭಿವೃದ್ಧಿ ಸಚಿವರು ಅಲ್ಲಿ ಕೆಲಸ ಮಾಡಲಾರದೇ ಜನರನ್ನು ದಾರಿ ತಪ್ಪಿಸಲು ಈ ರೀತಿ ಅನ್ಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಟೀಕಿಸಿದರು.

ಬಿಜೆಪಿಯವರು 40-50 ವರ್ಷ ಈ ರಾಜ್ಯ ಆಳಿಲ್ಲ

“ಬಿಜೆಪಿಯವರು 40-50 ವರ್ಷ ಈ ರಾಜ್ಯ ಆಳಿಲ್ಲ; ಅವರೇ 63 ವರ್ಷ ಈ ರಾಜ್ಯವನ್ನು ಆಳಿದ್ದಾರೆ. ಕೆಂಪೇಗೌಡರು 4 ಸ್ತೂಪಗಳನ್ನು ನಿರ್ಮಿಸಿ ಅಲ್ಲಿನವರೆಗೆ ಬೆಂಗಳೂರನ್ನು ವಿಸ್ತರಿಸಲು ಯೋಜಿಸಿದ್ದರು. ಅದಕ್ಕಿಂತ ಹೆಚ್ಚಾದರೆ ಬೆಂಗಳೂರಿಗೆ ಆಪತ್ತಿದೆ ಎಂಬ ಆಶಯ ಅವರಲ್ಲಿತ್ತು. ಈಗ ದೇವನಹಳ್ಳಿ, ಆನೇಕಲ್, ಹೊಸಕೋಟೆ ಬೆಂಗಳೂರೇ ಆಗಿವೆ. ಸ್ವಲ್ಪ ದಿನ ಹೋದರೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಎಲ್ಲ ತಗೊಂಡು ಬಿಡುತ್ತಾರೆ” ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ಸಿನೊಳಗೇ ಭಯೋತ್ಪಾದನೆ

“ಹಲವು ತಿಂಗಳಿಂದ ಮಾತೆತ್ತಿದರೆ ಸಂಪುಟ ಪುನಾರಚನೆ ವಿಷಯ ತರುತ್ತಾರೆ. ಗುಜರಾತ್‍ನವರ ಬಳಿ ಪಾಠ ಹೇಳಿಸಿಕೊಂಡು ಬನ್ನಿ. ಬೆಳಿಗ್ಗೆ ರಾಜೀನಾಮೆ ಕೊಟ್ಟರು. ಮರುದಿನ ಹೊಸ ಸರಕಾರವೇ ಬಂತು ಎಂದು ಗಮನ ಸೆಳೆದರು. ಸಚಿವಸಂಪುಟದ ವಿಷಯ ಮುಂದಿಟ್ಟು ಕಾಂಗ್ರೆಸ್ಸಿನೊಳಗೇ ಭಯೋತ್ಪಾದನೆ ನಡೆದಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...