ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

Date:

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ ಇದ್ದರೆ ಅದು ಕರ್ನಾಟಕದಲ್ಲಿ ಮಾತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾಗರರು ‘ನಗರ ಪ್ರದಕ್ಷಿಣೆ, ರಸ್ತೆ ಕಾಮಗಾರಿಗಳ ಗುಣಮಟ್ಟ ಹಾಗೂ ಕಾಮಗಾರಿ ನಡೆದ ಸ್ಥಳಗಳಲ್ಲಿ ರಸ್ತೆಗಳು ಮತ್ತೆ ಹಾಳಾಗಿರುವ ಆರೋಪ’ದ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು ಆರೋಪಗಳು. ರಸ್ತೆಗುಂಡಿಗಳ ದುರಸ್ತಿ ಕೆಲಸ ನಿರಂತರ ಪ್ರಕ್ರಿಯೆ. ಗುಣಮಟ್ಟ ಪರಿಶೀಲನೆ ನಡೆಸುವ ಸಲುವಾಗಿ ನಗರ ಪ್ರದಕ್ಷಿಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಜೊತೆ ಚರ್ಚೆ ನಡೆಸುವ ಕಾರ್ಯಕ್ರಮದ ಬಗ್ಗೆಯೂ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು” ಎಂದರು.

“ನಾವು ನಮ್ಮ ಪಾಲಿನ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕೇವಲ ಗುಂಡಿಗಳನ್ನು ಮಾತ್ರ ಮುಚ್ಚದೇ ಅದರ ಸುತ್ತಲೂ ಅಚ್ಚುಕಟ್ಟಾಗಿ ಡಾಂಬರು ಹಾಕಿ ಗಟ್ಟಿ ಮಾಡಲಾಗುತ್ತಿದೆ. ಕೆಲವೊಂದು ಕಡೆ ಸುತ್ತಲಿನ ಮೇಲ್ಪದರವನ್ನೂ ದುರಸ್ತಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದಲ್ಲಿ 1.20 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೊರಗಡೆಯಿಂದ 50 ಲಕ್ಷ ವಾಹನಗಳು ಬರುತ್ತವೆ. ಇಷ್ಟು ಒತ್ತಡವನ್ನು ನಮ್ಮ ರಸ್ತೆಗಳು ತಾಳಿಕೊಳ್ಳುತ್ತಿವೆ. ಹಲವಾರು ಕಡೆ ವೈಟ್ ಟಾಪಿಂಗ್ ಕಾಮಗಾರಿಯೂ ನಡೆಯುತ್ತಿದೆ” ಎಂದರು.

ಕಂಜೆಕ್ಷನ್ ಶುಲ್ಕದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಒಂದಷ್ಟು ಜನರು ಸಲಹೆ ನೀಡಿದ್ದಾರೆ ಹೊರತು ಸರ್ಕಾರದ ಮುಂದೆ ಈ ರೀತಿಯ ಯಾವುದೇ ಪ್ರಸ್ತಾವನೆಯಿಲ್ಲ” ಎಂದು ತಿಳಿಸಿದರು.

ಕಾವೇರಿ ಆರತಿ ಬಗ್ಗೆ ಮಾತನಾಡಿ, “ಕಾವೇರಿ ಆರತಿಯೂ ಅತ್ಯಂತ ಸುಗಮವಾಗಿ ನೆರವೇರಿದೆ. ಈ ಕಾರ್ಯಕ್ರಮ ಮುಂದುವರೆಸುವ ಶಕ್ತಿ ನಮಗೆಲ್ಲರಿಗೂ ದೊರಕಲಿ. ಕಾವೇರಿ ನದಿ 3 ಕೋಟಿಗೂ ಅಧಿಕ ಜನರಿಗೆ ಜೀವನಾಡಿ. ಕರ್ನಾಟಕ, ತಮಿಳುನಾಡು ಜನರಿಗೆ ಇದರಿಂದ ಅನುಕೂಲವಾಗುತ್ತಿದೆ. ಪ್ರತಿವರ್ಷ ಇದೇ ರೀತಿ ತುಂಬಿ ಹರಿಯಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ” ಎಂದರು.

“ಕರ್ನಾಟಕದ ಹಾಗೂ ಈ ದೇಶದ ಸರ್ವರಿಗೆ, ರೈತರಿಗೆ ಆ ದುರ್ಗಾ ದೇವಿ ದಸರಾ ಹಬ್ಬದ ಸಂದರ್ಭದಲ್ಲಿ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...