ರೈಲ್ವೆ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದಿಂದ ಸಹಕಾರವೇ ಇಲ್ಲ: ವಿ.ಸೋಮಣ್ಣ

Date:

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಕ್ಷುಲ್ಲಕ ರಾಜಕಾರಣದಲ್ಲಿ ಕಾಂಗ್ರೆಸ್‌ ಸರ್ಕಾರ ಮುಳುಗಿದೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳು ಸಿಗಬೇಕು ಎಂಬುದು ಕೇಂದ್ರದ ಉದ್ದೇಶ. ಆದರೆ ರಾಜ್ಯ ಸರ್ಕಾರವೇ ಸ್ಪಂದಿಸುತ್ತಿಲ್ಲ” ಎಂದರು.

“ಎಲ್ಲ ರಾಜ್ಯಗಳಂತೆ ಕರ್ನಾಟಕದಲ್ಲೂ ರೈಲ್ವೆ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಹಲವು ಬಾರಿ ಮನವಿ ಮಾಡಿದರೂ ಸಿದ್ದರಾಮಯ್ಯ ಸರ್ಕಾರದಿಂದ ಸ್ಪಂದನೆ ಇಲ್ಲವಾಗಿದೆ. ಇಚ್ಛಾಶಕ್ತಿ ಕೊರತೆ ಕಂಡುಬರುತ್ತಿದೆ. ಚಾಮರಾಜನಗರದಿಂದ ತಮಿಳುನಾಡಿನ ಮೆಟ್ಟುಪಾಳ್ಯಂವರೆಗೆ ರೈಲು ಮಾರ್ಗ ವಿಸ್ತರಿಸುವುದು, ಮೈಸೂರು-ಕುಶಾಲನಗರ ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಅಗತ್ಯವಾದ ಭೂಮಿ ಕೊಡುತ್ತಿಲ್ಲ” ಎಂದು ಗಮನ ಸೆಳೆದರು.

“ನವದೆಹಲಿಗೆ ಬಂದಿದ್ದಾಗ ಮುಖ್ಯಮಂತ್ರಿಗೆ, ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಸ್ತುವಾರಿ ಕಾರ್ಯದರ್ಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ತಿಳಿಸಿದ್ದೆ. ಮನವಿಪತ್ರ ಸಲ್ಲಿಸುವಂತೆ ತಿಳಿಸಿದ್ದರೂ ಸಲ್ಲಿಸಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರವು ಜನರ ದಿಕ್ಕು ತಪ್ಪಿಸುವ ಕೆಲಸಗಳನ್ನು ಮಾಡುವ ಬದಲಿಗೆ, ಅಭಿವೃದ್ಧಿಗೆ ಆದ್ಯತೆ ಕೊಡಬೇಕು. ಈ ವಿಷಯದಲ್ಲಿ ರಾಜ್ಯದೊಂದಿಗೆ ಚರ್ಚೆಗೆ ನಾನು ಸಿದ್ದವಿದ್ದೇನೆ. ಲೆವೆಲ್ ಕ್ರಾಸಿಂಗ್ ಇಲ್ಲದಂತೆ ಮಾಡುವುದಕ್ಕಾಗಿ ಮೇಲ್ವೇತುವೆ ಹಾಗೂ ಕೆಳಸೇತುವೆಗಳಿಗೆ ಶೇ 100ರಷ್ಟು ಹಣವನ್ನು ಕೇಂದ್ರದಿಂದಲೇ ಕೊಡುತ್ತಿದ್ದೇವೆ. ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿರುವುದನ್ನು ಮನಗಂಡು ಪ್ರಧಾನಿಯವರೇ ಕೊಡುತ್ತಿದ್ದಾರೆ” ಎಂದು ಹೇಳಿದರು.

“ಬೆಂಗಳೂರು ನಗರದ 100 ಕಿ.ಮೀ. ವ್ಯಾಪ್ತಿಯಲ್ಲಿ 175 ಲೆವೆಲ್ ಕ್ರಾಸಿಂಗ್‌ಗಳಿವೆ. ಇವುಗಳು ಇಲ್ಲದಂತೆ ಮೂರು ವರ್ಷಗಳಲ್ಲಿ ಮಾಡಲಾಗುವುದು. ಒಟ್ಟು ₹ 48ಸಾವಿರ ಮೊತ್ತದ ಹಳೆಯ ಯೋಜನೆಯನ್ನು ಕೈಗೆತ್ತಿಕೊಂಡು ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದೇವೆ” ಎಂದರು.

“ನರೇಂದ್ರಮೋದಿ ಪ್ರಧಾನಿಯಾಗಿ 12 ವರ್ಷ ತುಂಬುತ್ತಿರುವ ವೇಳೆಯಲ್ಲಿ ದೇಶದ ಜನರಿಗೆ ನೀಡಿರುವ ಜಿಎಸ್‌ಟಿ ಗಿಫ್ಟ್ ನೀಡಿದ್ದಾರೆ. ಜನರ ಅನುಕೂಲಕ್ಕಾಗಿ ಜಿಎಸ್‌ಟಿಗೆ ಗಣನೀಯವಾಗಿ ಸುಧಾರಣೆ ತರಲಾಗಿದೆ. ಇದು ಯಾವುದೇ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಿರುವ ಕ್ರಮ ಅಲ್ಲ. ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಜನರ ಅನುಕೂಲಕ್ಕಾಗಿ ಹೊಸ ನೀತಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಚಾಮುಂಡಿ ಬೆಟ್ಟದ ಶಿಷ್ಟಾಚಾರ, ಸಂಪ್ರದಾಯ ಪಾಲಿಸಿ

“ನಂಬಿಕೆಗೆ, ಭಕ್ತಿಗೆ, ಇತಿಹಾಸಕ್ಕೆ ಮತ್ತೊಂದು ಹೆಸರು ಚಾಮುಂಡಿ ಬೆಟ್ಟ. ದಸರಾ ಉದ್ಘಾಟಕರಿಗೆ ತಾಯಿ ಚಾಮುಂಡಿಯ ಇತಿಹಾಸ ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಿ. ಸಂಪ್ರದಾಯ ಅರಿತು ಅವರು ತಮ್ಮ ಕಾರ್ಯ ಮಾಡಲಿ. ದಸರಾ ಉದ್ಘಾಟಕರು ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡಲ್ಲ. ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ಉದ್ಘಾಟಕರು ನಡೆದುಕೊಳ್ಳಲಿ” ಎಂದರು.

ತುಮಕೂರಿನಿಂದ ಸ್ಪರ್ಧಿಸೋದಿಲ್ಲ

“ತುಮಕೂರಿನಲ್ಲಿ ಎಲ್ಲಾ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ ಅಲ್ಲಿ ಮುಂದೆ ಚುನಾವಣೆಗೆ ಸ್ಪರ್ಧಿಸೋದಿಲ್ಲ ಅಂತಾ ಹೇಳಿದ್ದೀನಿ. ಇನ್ನು ಮುಂದೆ ಬೇರೆ ಕಡೆಗೆ ಹೋಗೋಣ ಅಂತಾ. ಎಲ್ಲಿ ಅಂತಾ ನಿರ್ಧಾರ ಆಗಿಲ್ಲ. ದೇವರ ಆಶೀರ್ವಾದ, ದೇವರ ಇಚ್ಚೆ ಏನಿದೆಯೋ ಗೊತ್ತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...