ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ಕಾಗಿ ಹೇಳಿದರು.

ವಿಧಾ‌ನಸೌಧದಲ್ಲಿ ಮಾಧ್ಯಮಗಳು ‘ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ’ ಎಂದು ಕೇಳಿದಾಗ ಉತ್ತರಿಸಿದ ಅವರು, “ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು.

ಆರ್ ಎಸ್ ಎಸ್ ನಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಹಣ ಹೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ ಎಸ್‌‌ ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‌ ಎಸ್ ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ” ಎಂದರು.

“ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ” ಎಂದು ಹೇಳಿದರು.

“ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ” ಎಂದು ಹೇಳಿದರು.

ಬಿಜೆಪಿ ಠುಸ್ ಗಿರಾಕಿ

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ” ಎಂದರು.

ಆಧಾರವಿಟ್ಟುಕೊಂಡು ಆರೋಪ ಮಾಡಲಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಆರೋಪ ಮಾಡಿದವನನ್ನು (ಮಹೇಶ್ ಶೆಟ್ಟಿ ತಿಮರೋಡಿ) ಒದ್ದು ಒಳಗೆ ಹಾಕಲಾಗಿದೆ. ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ” ಎಂದು ತಿಳಿಸಿದರು.

“ಇಂದು ಅವರ ಬಗ್ಗೆ ಮಾತನಾಡಿದವರು, ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ಈ ಹಿಂದೆ ಮುಖ್ಯಮಂತ್ರಿಯವರು ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ” ಎಂದರು.

ಧರ್ಮಸ್ಥಳದಲ್ಲಿ ಸಂಗ್ರಹವಾಗುವ ಹುಂಡಿ ಹಣದ ಲೆಕ್ಕ ಕೊಡಬೇಕು ಎನ್ನುವ ಸಮಾನ ಮನಸ್ಕ ವೇದಿಕೆಯ ಆಗ್ರಹದ ಬಗ್ಗೆ ಕೇಳಿದಾಗ, “ಇದನ್ನು ನೋಡಲು ಆದಾಯ ತೆರಿಗೆ ಇಲಾಖೆಯಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...