ಜನರಿಂದ ಸುಲಿಗೆ ಮಾಡಿ ‘ಪಂಚ ಗ್ಯಾರಂಟಿ’ ಕೊಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ ಟೀಕೆ

Date:

ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಎಂದು ನೀಡುತ್ತಿದೆ. ಅ ಪಂಚ ಗ್ಯಾರಂಟಿ ಕೊಡುವುದಕ್ಕೆ ಜನರ ಮೇಲೆ ಅಪಾರ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಿದೆ. ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಹೆಬ್ಬಗೋಡಿಯಲ್ಲಿ ಕೆ.ಹೆಚ್. ಶಿಕ್ಷಣ ಟ್ರಸ್ಟ್‌ನ ವಿನಾಯಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, “ಈ ರೀತಿ ತೆರಿಗೆ ಹಾಕುವುದೇ ಆಗಿದ್ದರೆ ನಾನೇ ಅಧಿಕಾರದಲ್ಲಿ ಇದ್ದಿದ್ದರೆ ತಿಂಗಳಿಗೆ ಐದು ಸಾವಿರ ರೂಪಾಯಿ ಕೊಡುತ್ತಿದ್ದೆ. ನಿಮ್ಮ ಹಣ ನಿಮಗೆ ಕೊಡುವುದಕ್ಕೆ ಸರ್ಕಾರ ಸುಲಿಗೆ ಮಾಡುತ್ತಿದೆ. ನಾನು ಇಂತ ಅಗ್ಗದ ಕಾರ್ಯಕ್ರಮ ಬಿಟ್ಟು ಶಾಶ್ವತ ಪರಿಹಾರ ಕೊಡುವ ಯೋಜನೆಗಳನ್ನು ಹಾಕಿಕೊಂಡಿದ್ದೆ. ಅದನ್ನು ಕಳೆದ ಚುನಾವಣೆಯಲ್ಲಿ ಜನರು ಗಂಭೀರವಾಗಿ ಪರಿಗಣನೆ ಮಾಡಲಿಲ್ಲ” ಎಂದರು.

“ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು ನಿರ್ಧರಿಸಿದ್ದೆ. ಆದರೆ, ಜನರು ಪಂಚ ಗ್ಯಾರಂಟಿ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಮಾರು ಹೋದರು. ಇವತ್ತು ಮಕ್ಕಳ ಶಿಕ್ಷಣ ಕಷ್ಟವಾಗಿದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟುಕುವ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಸರ್ಕಾರಿ ಶಾಲೆಗಳು ಬಹಳ ದುಸ್ಥಿತಿಯಲ್ಲಿ ಇವೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ ಕೆಜಿ ಯಿಂದ ಪಿಯುಸಿವರೆಗೆ ಒಂದೇ ಸಮುಚ್ಚಯದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಶಿಕ್ಷಣ ಕೊಡಬೇಕು ಎನ್ನುವುದು ನನ್ನ ಕನಸಾಗಿತ್ತು. ಅದಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿ ಅದರಲ್ಲಿ ಶಿಕ್ಷಣವನ್ನು ಸೇರಿಸಿದ್ದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಉಚಿತವಾಗಿ ಹೈಟೆಕ್ ಶಿಕ್ಷಣ ಕೊಡುವುದು ನನ್ನ ಉದ್ದೇಶವಾಗಿತ್ತು” ಎಂದು ಸಚಿವರು ಹೇಳಿದರು.

“ತಂದೆ ತಾಯಿಗೆ ನೋವು ಕೊಡಬೇಡಿ. ಕಡಿಮೆ ಅಂಕ ಬಂತು ಎಂದು ತಪ್ಪು ನಿರ್ಧರ ಮಾಡಬೇಡಿ. ನಾನು ಕೂಡ ಕೊನೆ ಬೆಂಚಿನ ವಿದ್ಯಾರ್ಥಿ. ಹೆಚ್ಚು ಅಂಕ ಪಡೆಯುತ್ತಿದ್ದ ವಿದ್ಯಾರ್ಥಿ ಆಗಿರಲಿಲ್ಲ. ಆದರೂ ಜೀವನದಲ್ಲಿ ಏನೋ ಒಂದನ್ನು ಸಾಧನೆ ಮಾಡಿದ ಸಂತೋಷ ಇದೆ. ನಾನೆ ಇದ್ದೇನೆ ಅಲ್ಲವೇ? ಕಡಿಮೆ ಅಂಕ ಬಂತು ಧೃತಿಗೆಡಬೇಡಿ” ಎಂದು ಸಚಿವರು ಮಕ್ಕಳಿಗೆ ಕಿವಿಮಾತು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...