ಗೌರಿ ಲಂಕೇಶ್ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಕರೆ; ದೂರು ದಾಖಲು

Date:

ಕೋರ್ಟಿಗೆ ವಿಚಾರಣೆಗೆ ಬಂದ ಸಾಕ್ಷಿಯೊಬ್ಬರು ತನಗೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಕರೆ ಬಂದಿತೆಂದು ದೂರು ಕೊಟ್ಟಿದ್ದಾರೆ

ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ಸಾಕ್ಷಿದಾರರೊಬ್ಬರಿಗೆ ಬುಧವಾರದಂದು ಕರೆ ಬಂದಿದ್ದು, ಆರೋಪಿಗಳ ವಿರುದ್ಧ ಹೇಳಿಕೆ ನೀಡದಂತೆ ಭಯಪಡಿಸಲು ಯತ್ನಿಸಲಾಗಿದೆ.

ಕೋರ್ಟಿಗೆ ವಿಚಾರಣೆಗೆ ಬಂದ ಸಾಕ್ಷಿಯೊಬ್ಬರು ತನಗೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಕರೆ ಬಂದಿತೆಂದು ದೂರು ಕೊಟ್ಟಿದ್ದಾರೆ.

ಗೌರಿ ಲಂಕೇಶ್ ಪ್ರಕರಣವನ್ನು ನಿಭಾಯಿಸುತ್ತಿರುವ ಹಿರಿಯ ವಕೀಲ ಎಸ್.ಬಾಲನ್ ಅವರು ಈ ವಿಚಾರವನ್ನು ಕೋರ್ಟಿನ ಗಮನಕ್ಕೆ ತಂದಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಕ್ಷಿದಾರರು ಕೋರ್ಟ್‌ಗೆ ಕೊಟ್ಟ ದೂರಿನಲ್ಲಿ, “ನಿನ್ನೆ ಬಸ್ಸಿನಲ್ಲಿ ಬರುವಾಗ ಒಂದು ಫೋನ್‌ ಬಂದಿದೆ. ನೀನು ಕೋರ್ಟ್‌ಗೆ ಹೋದಾಗ ನಿನ್ನ ಮುಂದೆ ನಾಲ್ಕು ಮಂದಿ ಇರುತ್ತಾರೆ. ಅವರಿಗೆ ನನಗೆ ಗುರುತು ಇಲ್ಲ ಎಂದು ಹೇಳುವಂತೆ ಫೋನ್‌ ಬಂದಿದೆ” ಎಂದು ಉಲ್ಲೇಖಿಸಿದ್ದಾರೆ.

ಮತೀಯವಾದಿಗಳ ದ್ವೇಷ ಅಭಿಯಾನಕ್ಕೆ ಗುರಿಯಾಗಿದ್ದ ಗೌರಿ ಲಂಕೇಶ್ 2017ರ ಸೆ.5ರಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊಲೆಯಾದರು.

ಮೋಟಾರ್ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಗೌರಿ ಲಂಕೇಶ್ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಸುಮಾರು 17 ಆರೋಪಿಗಳನ್ನು ಗುರುತಿಸಲಾಗಿದೆ. ಪ್ರಕರಣ ಸಂಬಂಧ 2024ರ ಅಕ್ಟೋಬರ್ ತಿಂಗಳಲ್ಲಿ ಅಮೂಲ್ ಕಾಳೆ, ರಾಜೇಶ್ ಡಿ ಬಂಗೇರಾ, ವಾಸುದೇವ್ ಸೂರ್ಯವಂಶಿ, ರುಷಿಕೇಶ್ ದೇವ್ಡೇಕರ್, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ರಾಮಚಂದ್ರ ಬುಡ್ಡಿ ಮತ್ತು ಮನೋಹರ್ ದುಂಡೀಪ ಯಡವೆಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿರಿ: Ground Report | ಗೂಂಡಾಗಳಿಂದ ದಲಿತರ ಮನೆ, ದೇವಾಲಯ ಧ್ವಂಸವಾದರೂ ಬೇಗೂರು ಪೊಲೀಸರು ನಿರ್ಲಕ್ಷ್ಯ ತಾಳಿದ್ದೇಕೆ?

ಅಲ್ಲದೆ, ಆರೋಪಿಗಳಾದ ಭರತ್ ಕುರಾನೆ, ಶ್ರೀಕಾಂತ್ ಪಂಗರ್ಕರ್, ಸುಜಿತ್ ಕುಮಾರ್ ಮತ್ತು ಸುಧನ್ವಗೆ 2024ರ ಸೆ.4ರಂದು, 11ನೇ ಆರೋಪಿ ಎನ್.ಮೋಹನ್ ನಾಯಕ್ ಅಲಿಯಾಸ್ ಸಂಪಜೆ ಎಂಬುವರಿಗೆ 2023ರ ಡಿಸೆಂಬರ್ 7ರಂದು, ಅಮಿತ್ ದಿಗ್ವೇಕರ್, ಕೆ.ಟಿ.ನವೀನ್ ಕುಮಾರ್ ಮತ್ತು ಸುರೇಶ್ ಹೆಚ್.ಎಲ್ ಅವರಿಗೆ ಜುಲೈ 16ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. 2025ರ ಜನವರಿ ವೇಳೆಗೆ ಈ ಎಲ್ಲ 17 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಕೊಲೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡುವ ವಿಕೃತಿಯೂ ಜರುಗಿತ್ತು. ಈಗ ಸಾಕ್ಷಿಗಳಿಗೆ ಬೆದರಿಕೆಗಳು ಬರುತ್ತಿರುವುದು ಆಘಾತಕಾರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...