ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಯ ಕಳೇಬರ ಪತ್ತೆ, ತನಿಖೆಗೆ ಸೂಚನೆ

Date:

ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಗ್ಗೆ ಶೋಕ ವ್ಯಕ್ತಪಡಿಸಿ, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...