ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ | ನ್ಯಾಯಾಧೀಶರ ತನಿಖೆಗೆ ಒಪ್ಪಿಸಿ: ಆರ್ ಅಶೋಕ

Date:

ವಿಪಕ್ಷ ನಾಯಕ ಆರ್. ಅಶೋಕ ಅವರು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳು, ಶಿಕ್ಷಕರು, ಮಕ್ಕಳೊಂದಿಗೆ ಘಟನೆ ಕುರಿತು ಮಾಹಿತಿ ಪಡೆದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, “ಕರ್ತವ್ಯನಿರತ ನ್ಯಾಯಾಧೀಶರಿಂದ ಈ ದುರ್ಘಟನೆಯ ಕುರಿತು ತನಿಖೆ ನಡೆಸಿ” ಎಂದು ಆಗ್ರಹಿಸಿದರು. “ಮಕ್ಕಳ ದೂರುಗಳ ವಿಲೇವಾರಿಗೆ ಸಹಾಯವಾಣಿ ಆರಂಭಿಸಬೇಕು. ನ್ಯಾಯಾಧೀಶರು ರಾಜ್ಯದ ಎಲ್ಲ ಕಡೆ ತೆರಳಿ ವರದಿ ನೀಡಿದರೆ ಸರಕಾರದ ಕಾಮಾಲೆ ಕಣ್ಣು ತೆರೆಯಲು ಸಾಧ್ಯ” ಎಂದರು.

“ಹಾಸ್ಟೆಲ್‍ನಲ್ಲಿ ಅನ್ಯಾಯ, ದೌರ್ಜನ್ಯ ಆಗುತ್ತಿದೆ. ಮ್ಯಾನ್‍ಹೋಲ್‍ಗಳು, ಶೌಚಗುಂಡಿಗೆ ಇಳಿಯುವುದು ಅಪರಾಧ. ಇದು ಆರೋಗ್ಯಕ್ಕೆ ಹಾನಿಕಾರಕ ಅಲ್ಲದೆ ವ್ಯಕ್ತಿಗೆ ಅವಮಾನ ಮಾಡಿದಂತೆ. ಅಷ್ಟಿದ್ದರೂ 1ರಂದು ಘಟನೆ ನಡೆದಿದ್ದು, ಅದನ್ನು ಮುಚ್ಚಿಹಾಕಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿವೇಶನದ ವೇಳೆ ಬಂದರೆ ಸರಕಾರಕ್ಕೆ ಸಮಸ್ಯೆ ಎಂದು ಅದನ್ನು ಮುಚ್ಚಿಹಾಕಿದ್ದಾರೆ. ಪ್ರಿನ್ಸಿಪಾಲ್ ಅವರ ಸೂಚನೆಯಂತೆ ಹಳ್ಳಿಯಿಂದ ಬಿದಿರು ತಂದು ಶೌಚಗುಂಡಿಗೆ ಇಳಿದು ಶುಚಿ ಮಾಡಿದ್ದಾರೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವೇ? ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಘಟನೆ ನಡೆದಿದೆ. ಇಲ್ಲಿ ಈ ತರಹ ಮಕ್ಕಳಿಂದ ಕಮೋಡ್, ಬಾತ್‍ರೂಂ, ಶೌಚಗುಂಡಿ ಶುಚಿಗೊಳಿಸಿದ್ದಾರೆ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುವಂತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಕಾನೂನಿನ ಭಯವೇ ಇಲ್ಲ. ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಮಕ್ಕಳಿಗೆ ಸರಿಯಾಗಿ ಊಟ ಕೊಡುತ್ತಿರಲಿಲ್ಲ. ಚಾರ್ಟ್ ಪ್ರಕಾರ ಇಲ್ಲಿ ಸರಬರಾಜು ಮಾಡುತ್ತಿಲ್ಲ. 240 ಮಕ್ಕಳಿಗೆ 4 ಲೀಟರ್ ಹಾಲು ತರಿಸುತ್ತಿದ್ದರು ಎಂದು ಮಾಹಿತಿ ಇದೆ. ತರಕಾರಿ ಇಲ್ಲವೇ ಇಲ್ಲ; ಕೆಟ್ಟು ಹೋದ ಮೊಟ್ಟೆ ಕೊಡುತ್ತಿದ್ದರು ಎಂದು ಮಕ್ಕಳು ಹೇಳಿದ್ದಾರೆ” ಎಂದರು ಹೇಳಿದರು.

“ನಂಜನಗೂಡಿನಲ್ಲಿ ಹೊಲಕ್ಕೆ ಹೋದ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿದೆ. ಸರಕಾರಕ್ಕೆ ತಾಳ, ಮೇಳ ಇಲ್ಲ. ವರ್ಗಾವಣೆ ದಂಧೆಯಲ್ಲಿ ಅದು ತೊಡಗಿದೆ. ವಸೂಲಿ ವ್ಯವಹಾರ ನಡೆದಿದೆ. ವಿಡಿಯೋ ಮಾಡಿದ ಘಟನೆಯೂ ಇಲ್ಲಿ ಆಗಿರುವ ದೂರು ಇದೆ. ಹೆಣ್ಮಕ್ಕಳನ್ನು ಹಾಸ್ಟೆಲ್‍ಗೆ ಕಳಿಸುವುದು ಹೇಗೆ? ಇಲ್ಲಿ ಪ್ರಾಂಶುಪಾಲರು ಸೇರಿ 13 ಜನರಿಗೂ ಮನೆ ಕೊಟ್ಟಿದ್ದರೂ 3 ಜನ ಮಾತ್ರ ಇಲ್ಲಿ ಇದ್ದಾರೆ. ಉಳಿದವರು ವಿಸಿಟಿಂಗ್ ಥರ ಇದ್ದಾರೆ” ಎಂದು ಆಕ್ಷೇಪಿಸಿದರು.

“ಗುಂಪುಗಾರಿಕೆ, ದುಡ್ಡು ವಸೂಲಿ ನಡೆಯುತ್ತಿತ್ತು. ಗಾಜು ಇದ್ದ ಕಾರಣ ಶೌಚಗುಂಡಿಗೆ ಇಳಿದ ಮಕ್ಕಳಲ್ಲಿ ಒಬ್ಬರ ಕಾಲು ಕಟ್ ಆಗಿದೆ. ಶೌಚಗುಂಡಿಗೆ ಇಳಿದ ಈ ಮಕ್ಕಳ ಬಟ್ಟೆಗಳನ್ನು ಸುಟ್ಟು ಹಾಕಿದ್ದಾರೆ. ಹಲವು ಮಕ್ಕಳ ಸ್ಕಿನ್ ಅಲರ್ಜಿ ಆಗಿದೆ. ಈ ಸರಕಾರಕ್ಕೆ ಕಣ್ಣು ಇಲ್ಲ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ತೇಜಸ್ವಿನಿ ಗೌಡ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಹಾಗೂ ಮತ್ತಿತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...