ಬಳ್ಳಾರಿ | ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ ಉಪನ್ಯಾಸಕ ಹುದ್ದೆ

Date:

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ. ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಡಿ.10ರಂದು ಅವರು ಕರ್ತವ್ಯಕ್ಕೆ ಹಾಜರಾದರು.

ನೇಮಕಾತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ 1ರ ಮೀಸಲಾತಿಯನ್ನು ವಿಶ್ವವಿದ್ಯಾಲಯ ಪಾಲಿಸುತ್ತಿದೆ. ನವೆಂಬರ್ 28ರಂದು ರೇಣುಕಾ ಅವರ ಸಂದರ್ಶನವನ್ನು ಮಾಡಿದ ವಿಶ್ವವಿದ್ಯಾಲಯದ ಕುಲಪತಿ ಮುನಿರಾಜು ಮತ್ತು ಕುಲಸಚಿವ ರುದ್ರೇಶ್ ಅವರು ಹುದ್ದೆ ನೀಡಲು ನಿರ್ಧರಿಸಿದರು.

ಮೀಸಲಾತಿ ಇದ್ದರೂ ರೇಣುಕಾ ತಮ್ಮ ಅರ್ಹತೆ ಆಧಾರದ ಮೇಲೆ ನೌಕರಿ ಪಡೆದಿದ್ದಾರೆ. ಈ ವಿಶ್ವವಿದ್ಯಾಲಯದಲ್ಲೇ 2020–22ರ ಅವಧಿಯಲ್ಲಿ ಕನ್ನಡ ಎಂ.ಎ ಮಾಡಿದ್ದರು. ಅವರ ಶಿಕ್ಷಣಕ್ಕೆ ಇಂಗ್ಲಿಷ್ ವಿಭಾಗದ ರಾಬರ್ಟ್‌ ಜೋಸ್ ಎಂಬುವರು ಆರ್ಥಿಕ ನೆರವು ನೀಡಿದ್ದರು’ ಎಂದು ಕುಲಪತಿ ಮುನಿರಾಜು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೆಹರೂ ನಿಂದಿಸಿದರೆ ಅಲ್ಪರು ಮಹಾನ್ ನಾಯಕರಾಗಲು ಸಾಧ್ಯವೇ?

‘ರೇಣುಕಾ ಅವರ ನಂತರದ ಬ್ಯಾಚ್‌ನಿಂದ ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ಪೌರ ಕಾರ್ಮಿಕರ ಮಕ್ಕಳು, ಅಂಗವಿಲಕರಿಗೆ ಉಚಿತ ಶಿಕ್ಷಣ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಕುಲಸಚಿವ ರುದ್ರೇಶ್ ತಿಳಿಸಿದರು.

‘ನಮ್ಮದು ಬಡ ಕುಟುಂಬ. ತಂದೆ ಪೂಜಾರಿ ಮಲ್ಲಯ್ಯ, ತಾಯಿ ತಿಪ್ಪಮ್ಮ ಇಬ್ಬರೂ ಅನಕ್ಷರಸ್ಥರು. ಸಮಾಜ ಕೊಂಕು ನುಡಿದರೂ ತಂದೆ, ತಾಯಿ ನನ್ನನ್ನು ದೂರ ತಳ್ಳಲಿಲ್ಲ. ಕಷ್ಟಪಟ್ಟು ಈ ಹಂತಕ್ಕೆ ಬಂದಿರುವೆ. ಬಹಳಷ್ಟು ಅವಮಾನ ಎದುರಿಸಿದರೂ, ಹಲವರು ನನಗೆ ನೆರವಾಗಿದ್ದಾರೆ. ಜೋಗತಿ ಸಂಸ್ಕೃತಿ ಮತ್ತು ಚೌಡಿಕೆ ಪದಗಳ ಕುರಿತು ನಾನು ಪಿಎಚ್.ಡಿ ಮಾಡುವ ಗುರಿಹೊಂದಿದ್ದೇನೆ’ ಎಂದು ರೇಣುಕಾ ಪೂಜಾರಿ ತಿಳಿಸಿದ್ದಾರೆ.

ರೇಣುಕಾ ಅವರು ಯಲ್ಲಮ್ಮನ ದೀಕ್ಷೆ ಪಡೆದು ಜೋಗತಿಯಾಗಿದ್ದಾರೆ. ಯಲ್ಲಮ್ಮನ ದೀಕ್ಷೆ ಪಡೆದ ಕಾರಣಕ್ಕೇ ಅವರು ತಮ್ಮ ಹೆಸರನ್ನು ರೇಣುಕಾ ಎಂದು ಬದಲಿಸಿಕೊಂಡಿದ್ದಾರೆ. ಅವರ ಮೊದಲ ಹೆಸರು ಮಲ್ಲೇಶ ಕೆ. ಜೋಗತಿ.

‘ದೀಕ್ಷೆ ಪಡೆದ ಬಳಿಕ ವಾರಕ್ಕೆ ಒಮ್ಮೆಯಾದರೂ ಪಡಲಗಿ ಹಿಡಿದು ಭಿಕ್ಷೆ ಪಡೆಯಬೇಕಾಗುತ್ತದೆ. ಜತೆಗೆ ಜನರ ಕಷ್ಟಗಳಿಗೆ ಸ್ಪಂದಿಸಬೇಕಾಗುತ್ತದೆ. ಬಡವರು ದುರ್ಬಲರಲ್ಲಿ ತಾಯಿ ಯಲ್ಲಮ್ಮಳನ್ನು ಕಾಣಬೇಕಾಗುತ್ತದೆ ಅವರಿಗೆ ಸಹಾಯ ಮಾಡಬೇಕಾಗುತ್ತದೆ. ಹಸಿದವರಿಗೆ ಅನ್ನ ಕೊಡಬೇಕಾಗುತ್ತದೆ’ ಎಂದು ರೇಣುಕಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...