ಪ್ರಯಾಣ ದರ, ಬೆಲೆ ಏರಿಕೆ ಕಾಂಗ್ರೆಸ್‌ಗೆ ಅಚ್ಚರಿ ವಿಷಯವಲ್ಲ: ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ

Date:

ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ” ಎಂದು ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ. ನಮ್ಮ ರಾಜ್ಯದಲ್ಲಿ ಪ್ರಯಾಣ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ” ಎಂದರು.

ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು. ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ. ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನುದಾನಿತ ಪಿಯು ಕಾಲೇಜು ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವ ನಿರ್ಧಾರ ಸಲ್ಲದು

“ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ. ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ” ಎಂದು ಟೀಕಿಸಿದರು.

ವಿದ್ಯುತ್ ಇಲಾಖೆ ಏನಾಗುತ್ತದೋ?

“ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...