ತುಂಗಭದ್ರಾ ಜಲಾಶಯ | ಭರದಿಂದ ಸಾಗಿದ ‘ಸ್ಟಾಪ್ ಲಾಗ್ ಗೇಟ್’ ನಿರ್ಮಾಣ ಕಾರ್ಯ

Date:

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಪರಿಣಾಮ ನದಿಗೆ ನೀರು ಬಿಡಲಾಗಿದ್ದು, ಸೋಮವಾರ ಬೆಳಗಿನ ಮಾಹಿತಿ ಪ್ರಕಾರ ಜಲಾಶಯದ ಹೊಳಹರಿವು 25,131 ಕ್ಯುಸೆಕ್‌ ಇದ್ದು, 88,955 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಕ್ರಸ್ಟ್‌ಗೇಟ್‌ ಮರಳಿ ಅಳವಡಿಸಬೇಕಾದ ಹಿನ್ನೆಲೆಯಲ್ಲಿ ಜಲಾಶಯದ 61 ಟಿಎಂಸಿ ಅಡಿ ನೀರು ಖಾಲಿ ಮಾಡಬೇಕಾಗಿದೆ. ಆದ್ದರಿಂದ ಜಲಾಶಯದ ನೀರನ್ನು ಹೊರ ಹರಿಸಲಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಬಳಿ ಇರುವ ಕೃಷ್ಣದೇವರಾಯ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಮುಳುಗುವ ಹಂತ ತಲುಪಿದೆ. ಇತ್ತೀಚೆಗೆ ಜಲಾಶಯಕ್ಕೆ ವ್ಯಾಪಕ ನೀರು ಹರಿದು ಬಂದು ನದಿಗೆ ನೀರು ಹರಿಸಿದ್ದಾಗ ಇದು ಮುಳುಗಡೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಟಾಪ್ ಲಾಗ್ ಗೇಟ್ ನಿರ್ಮಾಣ ಕಾರ್ಯ

ಹೊಸ ಗೇಟ್ ಅಳವಡಿಸಲು ಜಲಾಶಯದ ನೀರನ್ನು ಬಹುತೇಕ ಅರ್ಧದಷ್ಟು ಖಾಲಿ ಮಾಡುವ ಪ್ರಯತ್ನ ನಡೆದಿದೆ. ಕಲಾಶಯದ ನೀರಿನ ಪ್ರಮಾಣ ನೋಡಿದರೆ ಸದ್ಯ ಶಾಶ್ವತ ಗೇಟ್ ಬದಲಿಗೆ ತಾತ್ಕಾಲಿಕ ‘ಸ್ಟಾಪ್ ಲಾಗ್ ಗೇಟ್’ ಮಾತ್ರ ಅಳವಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಶಾಶ್ವತ ಕ್ರಸ್ಟ್‌ಗೇಟ್ ನಿರ್ಮಾಣಕ್ಕೆ ಬಹಳಷ್ಟು ಸಮಯ ಹಿಡಿಯುತ್ತದೆ, ಸದ್ಯ ಜಲಾಶಯದ ನೀರನ್ನು ಹಿಡಿದಿಟ್ಟುಕೊಳ್ಳುವುದೇ ಆದ್ಯತೆಯಾಗಿದ್ದು, ಹೀಗಾಗಿ 19ನೇ ಗೇಟ್ ಅನ್ನು ಸಂಪೂರ್ಣವಾಗಿ ಮುಚ್ಚಿ ಅಲ್ಲಿ ನೀರು ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ‘ಸ್ಟಾಪ್ ಲಾಗ್ ಗೇಟ್’ ಅಳವಡಿಸಲು ನಿರ್ಧರಿಸಲಾಗಿದೆ.

ಗೇಟ್ ತಯಾರಿಸಲು ಸೂಚಿಸಲಾದ ಕಂಪನಿಯ ಕಚೇರಿ ಇರುವುದು ಹೊಸಪೇಟೆಯಲ್ಲಾದರೂ ನಿರ್ಮಾಣ ಶೆಡ್ ಇರುವುದು ಕೊಪ್ಪಳ ಜಿಲ್ಲೆಯ ಹೊಸಹಳ್ಳಿ ಸಮೀಪ. ಅಲ್ಲಿ ಈಗಾಗಲೇ ಗೇಟ್ ತಯಾರಿಗೆ ಸಿದ್ಧತೆ ಆರಂಭವಾಗಿದೆ. ಜಲಾಶಯದ ನೀರು 50 ಟಿಎಂಸಿ ಅಡಿಗೆ ಕುಸಿದಂತೆ ಈ ಗೇಟ್ ಸಹ ಸಿದ್ದವಾಗಲಿದೆ.

ಮಂಟಪ

ಕಂಪ್ಲಿ : ಸೇತುವೆ ಸಂಚಾರ ನಿರ್ಬಂಧ

ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ವಿಜಯನಗರ ಜಿಲ್ಲೆಯ ಕಂಪ್ಲಿ ನಡುವೆ ಸಂಪರ್ಕ ಬೆಸೆಯುವ ಕಂಪ್ಲಿ ಸೇತುವೆ ಮೇಲೆ ವಾಹನಗಳ ಹಾಗೂ ಪಾದಚಾರಿಗಳ ಸಂಚಾರ ನಿರ್ಬಂಧ ವಿಸ್ತರಣೆಯಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೋಮವಾರ ಮಧ್ಯಾಹ್ನ ಅಣೆಕಟ್ಟೆಗೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಬಸವರಾಜ ಬೊಮ್ಮಾಯಿ ಸಹ ಭೇಟಿ ನೀಡುವ‌ ಸಾಧ್ಯತೆ ಇದೆ. ತುಂಗಭದ್ರಾ ಮಂಡಳಿಯ ಅಧ್ಯಕ್ಷರು, ಕೇಂದ್ರೀಯ ಜಲ ಆಯೋಗದ ಸದಸ್ಯರು ಸೋಮವಾರ ಇಲ್ಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...