ಕೇರಳ ತನ್ನ ವೈಭವದ ದಿನಗಳಿಗೆ ಮರಳಬೇಕಾದರೆ ಯುಡಿಎಫ್ ಅಧಿಕಾರಕ್ಕೆ ಬರಬೇಕು: ಸಚಿವ ಕೃಷ್ಣಬೈರೇಗೌಡ

Date:

ಕೇರಳದ ಕಲ್ಪೆಟ್ಟ ಕ್ಷೇತ್ರದ ಯುಡಿಎಫ್ ಚುನಾವಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ‘ಕೇರಳ ತನ್ನ ಹಿಂದಿನ ವೈಭವದ ದಿನಗಳಿಗೆ ಮರಳಬೇಕಾದರೆ ಯುಡಿಎಫ್ ಅಧಿಕಾರಕ್ಕೆ ಬರಬೇಕು’ ಎಂದರು.

ಕೇರಳ ದೇಶದ ಅತ್ಯುತ್ತಮ ರಾಜ್ಯಗಳಲ್ಲಿ ಒಂದಾಗಿದ್ದು ಶಿಕ್ಷಣ, ಆರೋಗ್ಯ ಮತ್ತು ಸಾರ್ವಜನಿಕ ಕಲ್ಯಾಣದಂತಹ ಎಲ್ಲಾ ಕ್ಷೇತ್ರಗಳಲ್ಲಿ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ಇದಕ್ಕಾಗಿ ಯುಡಿಎಫ್ ಉತ್ತಮ ಪ್ರಯತ್ನ ಮಾಡಿತು. ಆದರೆ, ಕಳೆದ ಹತ್ತು ವರ್ಷಗಳ ತಪ್ಪು ಕ್ರಮಗಳು ಕೇರಳವನ್ನು ಹಿಂದಕ್ಕೆ ತಳ್ಳಿವೆ. ಅದನ್ನು ಹಳೆಯ ಕೇರಳ ಮಾದರಿಗೆ ಮರಳಿ ತರಬೇಕು. ಅದಕ್ಕಾಗಿ, ಯುಡಿಎಫ್ ನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಅನೇಕ ಮಲಯಾಳಿಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದಾರೆ. ಕೇರಳ ತನ್ನ ಒಳ್ಳೆಯ ಕಾಲಕ್ಕೆ ಮರಳಬೇಕಾದರೆ ಯುಡಿಎಫ್ ಅಧಿಕಾರಕ್ಕೆ ಬರಬೇಕು ಎಂದು ಅವರೆಲ್ಲರೂ ಹೇಳುತ್ತಾರೆ. ಕೇರಳದಲ್ಲಿ ಪ್ರಸ್ತುತ ಬಿಜೆಪಿ-ಸಿಪಿಎಂ ಮೈತ್ರಿಕೂಟ ಪ್ರಬಲವಾಗಿದೆ. ಬಿಜೆಪಿ ಸಿಪಿಎಂನ್ನು ಮಿತ್ರಪಕ್ಷವಾಗಿ ಜೊತೆಗಿರಿಸಿಕೊಂಡು ತಮ್ಮ ಅಸ್ತಿತ್ವ ಕಂಡುಕೊಳ್ಳಲು ಹವಣಿಸುತ್ತಿದೆ. ಕೇರಳದಲ್ಲಿ ಬಿಜೆಪಿ ಮತ್ತು ಸಿಪಿಎಂ ಒಟ್ಟಾಗಿ ಕೆಲಸ ಮಾಡುತ್ತಿವೆ ಇದನ್ನರಿತು ಬದಲಾವಣೆಯತ್ತ ಕಾರ್ಯೋನ್ಮುಖರಾಗಬೇಕು ಎಂದು ಕಿವಿ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬರುವ ದಿನಗಳು ಕಠಿಣ ಪರಿಶ್ರಮದ ದಿನಗಳಾಗಿವೆ. ಈಗ ನಮ್ಮ ಗುರಿ ಕೇರಳದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಧಿಕಾರಕ್ಕೆ ತರುವುದು ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರಕ್ಕೆ ಬರುವುದು ಎಂದು ಹೇಳಿದರು.

ಟಿ. ಸಿದ್ದಿಕ್ ಕೇರಳದ ಅತ್ಯುತ್ತಮ ಶಾಸಕರಲ್ಲಿ ಒಬ್ಬರು. ಈ ಬಾರಿಯೂ ಆಯ್ಕೆಯಾಗುವುದು ನೂರಕ್ಕೆ ನೂರು ಖಚಿತ. ಕರ್ನಾಟಕದಲ್ಲಿ ನಾನು ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ ಸಿದ್ದಿಕ್ ಕೇರಳದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂದಿನಿಂದ ನಾವು ಸ್ನೇಹಿತರಾಗಿದ್ದು, ಅವರನ್ನು ಹೆಚ್ಚಿನ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಯುಡಿಎಫ್ ಕ್ಷೇತ್ರಾಧ್ಯಕ್ಷ ಸಲೀಂ ಮೇಮನಾ, ಯೂತ್ ಲೀಗ್ ರಾಜ್ಯಾಧ್ಯಕ್ಷ ಮುನವರಲಿ ಶಿಹಾಬ್, ಟಿ.ಜೆ ಐಸಾಕ್, ಟಿ. ಮೊಹಮ್ಮದ್, ಪಿ.ಪಿ ಅಲಿ, ಎನ್.ಕೆ ರಶೀದ್, ಎನ್.ಡಿ ಅಪ್ಪಚ್ಚನ್, ಪಿ. ಇಸ್ಮಾಯಿಲ್, ಪಿ.ಕೆ ಅಬೂಬಕರ್, ಟಿ. ಹಂಜಾ, ಕೆ.ವಿ ಪೋಕರ್ ಹಾಜಿ, ಚಂದ್ರಿಕಾ ಕೃಷ್ಣನ್, ರಜಾಕ್ ಕಲ್ಪೆಟ್ಟಾ, ಯಾಹಿಯಾ ಖಾನ್ ತಳಕ್ಕಲ್, ಬಿ. ಸುರೇಶ್ ಬಾಬು, ಕಡವನ್ ಹಮ್ಜಾ, ಓ.ವಿ ಅಪ್ಪಾಚನ್, ಎಂ. ಹರೀಸ್, ಎಂ. ಕಂಡಿಯಾನ್, ಪಿ. ಕೆ ರಾಜನ್, ಕುಂಜು ಮುಹಮ್ಮದ್ ಕೈತಪಲ್ಲಿ, ಸಿ. ಪಿ ಅಶ್ರಫ್, ಪಾಲ್ಸನ್ ಕೂವಕ್ಕಲ್ ಸಮಾವೇಶದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...