ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ಧರಣಿಗೆ ಕರೆ ನೀಡಿದ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ‌

Date:

ಆಗಸ್ಟ್ 24 ರಂದು ಕೇಂದ್ರ ಸರ್ಕಾರ ಘೋಷಿಸಿರುವ ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್)ಯನ್ನು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ‌ ಖಂಡಿಸಿದೆ.

ಭಾನುವಾರ (ಆ.25) ಆನ್ ಲೈನ್ ವೇದಿಕೆಯಲ್ಲಿ ನಡೆದ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸಭೆಯಲ್ಲಿ ಯುಪಿಎಸ್ ಯೋಜನೆ ಕುರಿತ ವಿವರ ಪರಿಶೀಲಿಸಿದ ಬಳಿಕ ಇದು ದೇಶಾದ್ಯಂತ ನೌಕರರು ಮತ್ತು ಶಿಕ್ಷಕರನ್ನು ವಂಚಿಸುವ ಸಂಶಯಾಸ್ಪದ ಪ್ರಯತ್ನವಾಗಿದೆ ಎಂಬ ನಿಲುವಿಗೆ ಒಕ್ಕೂಟ ಬಂದಿದೆ.

ಎನ್‌ಪಿಎಸ್‌ ವಿರುದ್ಧ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿರುವ ನೌಕರರ ಕಣ್ಣೊರೆಸುವ ಪಿತೂರಿ ಅಷ್ಟೇ. ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು ಎಂದು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಪಿಎಸ್ ಅನ್ನು ಬೆಂಬಲಿಸುತ್ತಿರುವ ಇಂತಹ ಅವಕಾಶವಾದಿ ಸಂಘಟನೆಗಳ ಮತ್ತು ನೌಕರರ ಸಮುದಾಯವನ್ನು ವಂಚಿಸುವ ಯಾವುದೇ ನಾಯಕರೊಂದಿಗೆ ಅಖಿಲ ಭಾರತ ಒಕ್ಕೂಟವು ವೇದಿಕೆಯನ್ನು ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಹಳೆಯ ನಿಶ್ಚಿತ ಪಿಂಚಣಿ ಯೋಜನೆಯ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ಮುಂದುವರೆಸಲು ರಾಜ್ಯಾದ್ಯಂತ ಎಲ್ಲಾ ನೌಕರರು ಮತ್ತು ಶಿಕ್ಷಕರಿಗೆ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮನವಿ ಮಾಡುತ್ತದೆ ಎಂದು ತಿಳಿಸಿದೆ.

ಯಾವುದೇ ಕಾರಣಕ್ಕೂ ಎನ್.ಪಿ.ಎಸ್ ರದ್ದು ಮಾಡುವುದಿಲ್ಲ ಎಂದು ಹೇಳುತ್ತಿದ್ದ ಎನ್ಡಿಎ ಸರ್ಕಾರವು ಹಿಂದಿನ ಅವಧಿಯಲ್ಲಿ ನೌಕರರ ನಿರಂತರ ಹೋರಾಟಗಳ ಕಾರಣದಿಂದಾಗಿ ಯು.ಪಿ.ಎಸ್ ಎಂಬ ಎನ್.ಪಿ.ಎಸ್ ನ ಮಾರ್ಪಡಿತ ಯೋಜನೆಯನ್ನು ತರಲು ಹೊರಟಿದೆ. ಹಾಗಾಗಿ, ದೇಶಾದ್ಯಂತ ನೌಕರರ ಒಗ್ಗಟ್ಟಿನ ಹೋರಾಟ ಮುಂದುವರಿದರೆ, ನಾವು PFRDA/NPS ಬದಲಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರಳಿ ತರಲು ಆಗ್ರಹಿಸುತ್ತೇವೆ ಎಂದು ಒಕ್ಕೂಟ ಹೇಳಿಕೊಂಡಿದೆ.

ಸೆಪ್ಟಂಬರ್ 26 ರಂದು ದೇಶಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನಾಗಿ ಆಚರಿಸಲು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ನಿರ್ಧರಿಸಿದೆ. ಹಾಗಾಗಿ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಊಟದ ವಿರಾಮದ ವೇಳೆ ಧರಣಿ ನಡೆಸಲು ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...