ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Date:

ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ (Suraj Revanna) ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ‌ ಮುಕ್ತಗೊಳಿಸುವಂತೆ‌ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನ ಸೂರಜ್‌ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರವೆಂಬ ಸ್ನಾನದ ಕೋಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಬೆತ್ತಲೆಯೇ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ಜೂನ್‌ನಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಪ್ರಕರಣ ದಾಖಲಾಗಿತ್ತು.

“ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‌ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನ ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ” ಎಂದು ದೂರುದಾರ ದೂರಿನಲ್ಲಿ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...