ಕೈಗೆ ಸಿಗದ ಪಿಎ, ಫೋನಿಗೆ ಸಿಗದ ಎಂಪಿ; ಸಂಸದ ಅನಂತಕುಮಾರ್​ ಹೆಗಡೆ ವಿರುದ್ಧ ಕಾರ್ಯಕರ್ತರ ಅಸಮಾಧಾನ

Date:

ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ. ಹೀಗಾದ್ರೆ ನಾವು ಹೇಗೆ ಮಾಡಬೇಕು? ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊಂಡಿವೆ ಎಂದು ಬಿಜೆಪಿ ಕಾರ್ಯಕರ್ತರು ಸಂಸದ ಅನಂತಕುಮಾರ್​ ಹೆಗಡೆ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಅನಂತಕುಮಾರ್ ಹೆಗಡೆಗೆ ಕ್ಲಾಸ್ ತೆಗೆದುಕೊಂಡ ಕಾರ್ಯಕರ್ತರು ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ಓಪನ್​ ಮಾಡಿ ಎಂದು ಆಗ್ರಹಿಸಿದ್ದಾರೆ.

ಕ್ಷೇತ್ರದಲ್ಲಿನ ಸಮಸ್ಯೆಗಳ ಪಟ್ಟಿಯನ್ನೇ ಸಂಸದರ ಮುಂದಿಟ್ಟು ಅಸಮಾಧಾನ ಹೊರ ಹಾಕಿದ ಕಾರ್ಯಕರ್ತರು, “ಖಾನಾಪುರ ತಾಲೂಕಿನ ಜನ ಬೆಳಗಾವಿಗೆ ಹೋದರೆ, ಕಾರವಾರಕ್ಕೆ ಹೋಗಿ ಅಂತಾರೆ. ಕಾರವಾರಕ್ಕೆ ಹೋದರೆ ನೀವು ಬೆಳಗಾವಿ ಜಿಲ್ಲೆಯವರು ಅಲ್ಲಿಗೆ ಹೋಗಿ ಅಂತಾರೆ. ಖಾನಾಪುರ ತಾಲೂಕಿನ ಜನ ನಡುವಿನಲ್ಲಿ ಸಿಕ್ಕಿ ಒದ್ದಾಡುತ್ತಿದ್ದಾರೆ. ಆರು ಬಾರಿ ಸಂಸದರಾಗಿದ್ದೀರಿ ಖಾನಾಪುರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುವೂ ಜಾರಿಯಾಗಿಲ್ಲ, ಜನರಿಗೆ ತಲುಪಿಲ್ಲ” ಎಂದು ಬೇಸರ ವ್ಯಕ್ತಪಡಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಕರ್ತರಿಗೆ ನಿಮ್ಮ ಕಡೆಯಿಂದ ಉತ್ತಮ ಸ್ಪಂದನೆ ಸಿಗುತ್ತಿಲ್ಲ. ಅನಂತಕುಮಾರ್ ಹೆಗಡೆ ಎಲ್ಲಿದ್ದಾರೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಯಾರಿಗೆ ಟಿಕೆಟ್​ ಕೊಟ್ಟರೂ ಚುನಾವಣೆಯಲ್ಲಿ ಗೆಲ್ಲಬೇಕು

”ಚುನಾವಣೆ ಬಗ್ಗೆ ಮುಂದೆ ಏನಾಗುತ್ತೆ ಅನ್ನೋದು ನನಗೆ ಗೊತ್ತಿಲ್ಲ. ಸ್ಪರ್ಧಿಸ್ತೇನೆ ಅಂತಾ ಬಂದಿಲ್ಲ, ಬಿಜೆಪಿ ಗೆಲ್ಲಿಸಿ ಅಂತಾ ಹೇಳಲು ಬಂದಿದ್ದೇನೆ. ಪಕ್ಷ ಯಾರಿಗೆ ಟಿಕೆಟ್​ ಕೊಟ್ಟರೂ ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ. ಖಾನಾಪುರದಲ್ಲಿ ಸಂಸದರ ಕಚೇರಿ ತೆರೆಯಲು ಯೋಚನೆ ಮಾಡಿದ್ದೇವೆ” ಎಂದರು.

anant

ರಾಮ ಆಯ್ಕೆ ಮಾಡಿಕೊಂಡಿದ್ದು ಮೋದಿ ಅವರನ್ನು

”ಮೋದಿಯನ್ನು ಮತ್ತೆ ಗೆಲ್ಲಿಸಬೇಕೆಂಬುದು ದೇವರ ನಿರ್ಣಯವಾಗಿದೆ. ಅಡ್ವಾಣಿ, ವಾಜಪೇಯಿ ರಾಮ ಮಂದಿರಕ್ಕಾಗಿ ಯಾತ್ರೆ ಮಾಡಿದ್ರು. ಅಂದು ಯಾತ್ರೆಯಲ್ಲಿ ಕೋಟ್ಯಂತರ ಜನ ಭಾಗಿಯಾಗಿದ್ದರು. ಆದರೆ ರಾಮ ಆಯ್ಕೆ ಮಾಡಿಕೊಂಡಿದ್ದು ಮೋದಿ ಕೈಯಲ್ಲಿ ಪ್ರತಿಷ್ಠಾಪಿಸಲು. ಇದು ದೇವರ ನಿರ್ಣಯ. ಮೋದಿಯನ್ನು ಮತ್ತೆ ಗೆಲ್ಲಿಸಬೇಕು ಇದು ಕೂಡ ದೇವರ ನಿರ್ಣಯ. ಕಳೆದ ಎಂಪಿ ಚುನಾವಣೆಯಲ್ಲಿ ಹೆಚ್ಚಿನ ಲೀಡ್​ನಲ್ಲಿ ನನ್ನನ್ನು ಗೆಲ್ಲಿಸಿದ್ರಿ. ಈ ಬಾರಿಯೂ ನನ್ನನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು” ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...