ಮುಸ್ಲಿಮರನ್ನು ಗುರುತಿಸಲು ಪಾಕ್‌ ಧ್ವಜದ ಗ್ರಾಫಿಕ್ಸ್ ಬಳಕೆ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

Date:

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್‌ ಕನ್ನಡ ಸುದ್ದಿ ವಾಹಿನಿಯು ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜವನ್ನು ಬಳಿಸಿ, ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ, ತಮ್ಮ ತಪ್ಪಿಗೆ ವಿಷಾಧ ವ್ಯಕ್ತಪಡಿಸಿದೆ.

ಇತ್ತಿಚೆಗೆ ಬಿಡುಗಡೆಯಾದ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಇದನ್ನೇ ದಾಳವಾಗಿಸಿಕೊಂಡಿರುವ ಹಲವಾರು ಮಾಧ್ಯಮಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಪೂರಿತ ಸುದ್ದಿ, ಕಾರ್ಯಕ್ರಮಗಳನ್ನು ನಡೆಸುತ್ತಿವೆ.

ವರದಿ ಬಗ್ಗೆ ಸುವರ್ಣ ನ್ಯೂಸ್‌ನಲ್ಲಿ ಪ್ರಸಾರವಾದಿ ಸುದ್ದಿಯಲ್ಲಿ ಹಿಂದುಗಳನ್ನು ಗುರುತಿಸಲು ಭಾರತ ರಾಷ್ಟ್ರಧ್ವಜವನ್ನೂ, ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜದ ಗ್ರಾಫಿಕ್ಸ್‌ಗಳನ್ನು ಬಳಸಲಾಗಿತ್ತು. ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಬಿಂಬಿಸುವ ಆ ಗ್ರಾಫಿಕ್ ಬಳಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸುದ್ದಿ ವಾಹಿನಿಯು ವಿಷಾಧ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸುವರ್ಣ ನ್ಯೂಸ್ ನಲ್ಲಿ ಶನಿವಾರ ನಿರೂಪಕಿಯೊಬ್ಬರು ಹೇಳಿದ್ದಾರೆ.

 

ಸುವರ್ಣ ನ್ಯೂಸ್‌ ಎಸಗಿದ ಈ ಕೃತ್ಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಅವರು ಟ್ವೀಟರ್‌ನಲ್ಲಿ ಸುವರ್ಣ ನ್ಯೂಸ್ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕುರಿತು ಕಾನೂನು ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...