ವಾಲ್ಮೀಕಿ ನಿಗಮ ಅಕ್ರಮ | ಬಿಜೆಪಿಗೂ ಅಂಟಿದ ಕಳಂಕ? ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಹಿನ್ನೆಲೆ ಸಿಬಿಐ ಅಧಿಕಾರಿಗಳು ಕರ್ನಾಟಕ-ಆಂಧ್ರ ಪ್ರದೇಶ ಸೇರಿದಂತೆ 16 ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗಳ (ಕೆಜಿಟಿಟಿಐ) ಖಾತೆಯಿಂದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಸೋದರಿ ಮತ್ತು ಸಂಬಂಧಿಕರು ಹಾಗೂ ಆಪ್ತರ ಖಾತೆಗೆ ಹಣ ವರ್ಗಾವಣೆಯಾಗಿದೆ ಎನ್ನುವ ಆರೋಪದಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ.

ಕರ್ನಾಟಕದಲ್ಲಿ 12 ಕಡೆ ಮತ್ತು ಆಂಧ್ರ ಪ್ರದೇಶದ 4 ಕಡೆಗಳಲ್ಲಿ ಸಿಬಿಐ ಶೋಧ ನಡೆದಿದೆ. ಬಳ್ಳಾರಿಯ ಗಾಂಧಿನಗರದಲ್ಲಿರುವ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಗೋವಿಂದರಾಜು ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ಏಕಾಏಕಿ ದಾಳಿ ನಡೆಸಿ ಖಾತೆಗಳು, ಬ್ಯಾಂಕ್‌ ದಾಖಲೆಗಳು ಸೇರಿದಂತೆ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಮೊಟ್ಟೆ ವ್ಯಾಪಾರಿಯಾಗಿದ್ದ ಗೋವಿಂದರಾಜು ಹಗರಣದ ಮತ್ತೋರ್ವ ಆರೋಪಿ ನೆಕ್ಕಂಟಿ ನಾಗರಾಜ್‌ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆಂಬ ಆರೋಪವಿದೆ. ಈ ಹಣವನ್ನು ವ್ಯಾಪಾರ ಸೇರಿದಂತೆ ಬೇರೆ ಬೇರೆ ಕಡೆ ಹೂಡಿಕೆ ಮಾಡಿರುವುದನ್ನು ಸಿಬಿಐ ಪತ್ತೆಹಚ್ಚಿದೆ.

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿ ನಾಗೇಂದ್ರ ಅವರ ಸಚಿವ ಸ್ಥಾನದಿಂದ ಕೈಬಿಡಲಾಗಿದೆ. ಇದನ್ನೇ ‌ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ನಾಯಕರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಮಾಡಿದ್ದರು. ಆದರೆ ಇದೀಗ ಇದೇ ಪ್ರಕರಣ ಸಂಬಂಧ ಬಿಜೆಪಿ ಮುಖಂಡನ ಮನೆ ಮೇಲೂ ಸಿಬಿಐ ದಾಳಿ ಮಾಡಿದೆ. ಈ ಹಗರಣದಲ್ಲಿ ಬಿಜೆಪಿಗೂ ನಂಟು ಇದೆಯಾ ಎನ್ನುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ಹಗರಣದಲ್ಲಿ ಹೆಸರು ಕೇಳಿಬಂದಿರುವ ಕುಮಾರಸ್ವಾಮಿ ಜೊತೆ ಗೋವಿಂದರಾಜು ಆತ್ಮೀಯತೆ ಇಟ್ಟುಕೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ನೆಕ್ಕಂಟಿ ನಾಗರಾಜ್‌ ಮತ್ತು ಗೋವಿಂದರಾಜು ಅವರ ಖಾತೆಗಳನ್ನು ಪರಿಶೀಲಿಸಿದಾಗ ಹಣ ವರ್ಗಾವಣೆಯಾಗಿರುವುದು ದೃಢಪಟ್ಟಿದೆ. ಗೋವಿಂದರಾಜು ಅವರು ಮನೆ ಖರೀದಿಗಾಗಿ ಹಗರಣದ ಆರೋಪಿ ಶಾಸಕ ಬಿ.ನಾಗೇಂದ್ರ, ನೆಕ್ಕಂಟಿ ನಾಗರಾಜ್ ಮೂಲಕ ವ್ಯವಹಾರ ನಡೆಸಿದ್ದು, ಅದಕ್ಕೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿರುವ ಆರೋಪವೂ ಇದೆ.

ಹಾಗೆಯೇ ವರ್ಗಾವಣೆಯಾದ ಹಣವನ್ನು ನಾಗೇಂದ್ರ ಅವರು ತೆಲಂಗಾಣ ವಿಧಾನಸಭೆ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಬಿ.ನಾಗೇಂದ್ರ ಅಧಿಕಾರ ದುರುಪಯೋಗಪಡಿಸಿಕೊಂಡು 88 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ಉಲ್ಲಂಘನೆ ಮಾಡಿದ್ದಾರೆಂದು ಜಾರಿನಿರ್ದೇಶನಾಲಯ(ಇಡಿ) ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಸಹೋದರಿ, ಸೋದರ ಮಾವನ ಖಾತೆ ಹಣ

ಬ್ಯಾಂಕ್ ಆಫ್‌ ಬರೋಡಾದ ಸಿದ್ದಯ್ಯ ರಸ್ತೆ ಶಾಖೆಯಲ್ಲಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಖಾತೆಯಿಂದ ಎಸ್‌ಕೆಆರ್ ಇನ್‌ಫ್ರಾಸ್ಟ್ರಕ್ಚರ್‌ ಮತ್ತು ಗೋಲ್ಡನ್ ಎಸ್ಟಾಬ್ಲಿಷ್‌ಮೆಂಟ್‌ ಸಂಸ್ಥೆಗಳಿಗೆ ₹2.17 ಕೋಟಿ ಹಣ ವರ್ಗಾವಣೆಯಾಗಿತ್ತು. ಈ ಸಂಸ್ಥೆಗಳು ಬಿ. ನಾಗೇಂದ್ರ ಅವರ ಆಪ್ತರಾದ ನೆಕ್ಕಂಟಿ ನಾಗರಾಜ್ ಅವರಿಗೆ ಸೇರಿದ್ದಾಗಿವೆ. ಈ ಮೊತ್ತದಲ್ಲಿ ಸುಮಾರು ₹1.20 ಕೋಟಿಯಷ್ಟು ನಾಗೇಂದ್ರ ಅವರ ಸಹೋದರಿ, ಸೋದರ ಮಾವ ಮತ್ತು ಆಪ್ತ ಸಹಾಯಕ ಸೇರಿದಂತೆ ಅವರ ಸಹಚರರು ಹಾಗೂ ಸಂಬಂಧಿಕರ ಖಾತೆಗಳಿಗೆ ವರ್ಗವಾಗಿದೆ.

ಪ್ರಕರಣದ ಹಿನ್ನೆಲೆ

ವಾಲ್ಮೀಕಿ ನಿಗಮದ ಲೆಕ್ಕಪತ್ರ ವಿಭಾಗದ ಚಂದ್ರಶೇಖರ್‌ ಪಿ. ಎಂಬ ಅಧಿಕಾರಿ 2024 ಮೇ 26ರಂದು ಆತ್ಮಹತ್ಯೆ ಮಾಡಿಕೊಳ್ಳುವುದರೊಂದಿಗೆ ಈ ಹಗರಣ ಸ್ಫೋಟವಾಗಿತ್ತು. ಈ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚನೆ ಮಾಡಿತ್ತು. ಈ ನಡುವೆ ಅಕ್ರಮ ಹಣ ವರ್ಗಾವಣೆ ನಡೆದಿರುವ ಕಾರಣ ಇ.ಡಿ. ಕೂಡ ಪ್ರವೇಶಿಸಿ ತನಿಖೆ ತೀವ್ರಗೊಳಿಸಿತ್ತು.

ಇ.ಡಿಯು 2024ರ ಜುಲೈನಲ್ಲಿ ನಾಗೇಂದ್ರ ಅವರ ಮನೆಯ ಮೇಲೆ ದಾಳಿ ನಡೆಸಿ, 2025ರ ಜೂನ್ನಲ್ಲಿ ಬಳ್ಳಾರಿ ಸಂಸದ ಇ. ತುಕಾರಾಂ ಹಾಗೂ ಶಾಸಕರ ಮನೆಗಳ ಮೇಲೆ ದಾಳಿ ನಡೆಸಿತ್ತು. ಬಿಜೆಪಿ ನಾಯಕರು ಈ ದಾಳಿಯನ್ನು ರಾಜಕೀಯ ಪ್ರತೀಕಾರ ಎಂದು ಟೀಕಿಸಿದ್ದರು.

ಹಗರಣದ ಹಿನ್ನೆಲೆಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ 20.19 ಕೋಟಿ ರೂ.ಗಳನ್ನು ಹಣವಾಗಿ ವಿತರಿಸಲಾಗಿದೆ ಎಂದು ಇಡಿ ಆರೋಪಿಸಿದೆ. ನಾಗೇಂದ್ರ ಅವರ ಸಹಾಯಕ ವಿಜಯ್‌ಕುಮಾರ್‌ ಗೌಡಾ ಅವರ ಮೊಬೈಲ್‌ನಲ್ಲಿ ಚುನಾವಣೆ ವೆಚ್ಚದ ನೋಟ್‌ ಸಿಕ್ಕಿದ್ದು, ಇದು ಹಗರಣದೊಂದಿಗೆ ಸಂಬಂಧ ಹೊಂದಿದೆ. ಯೂನಿಯನ್‌ ಬ್ಯಾಂಕ್‌ ಇಂಡಿಯಾ ಆಧಾರದಲ್ಲಿ ತನಿಖೆ ನಡೆಸುತ್ತಿದ್ದು, ಹೈಕೋರ್ಟ್‌ 2025ರ ಜುಲೈನಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಿದೆ.

ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರ ಬಂಧನವಾಗಿತ್ತು. ನಾಗೇಂದ್ರ ಈಗ ಜಾಮೀನಿನ ಮೇಲೆ ಇದ್ದಾರೆ. ಈಗ ಸಿಬಿಐ ಕೂಡ ತನಿಖೆ ತೀವ್ರಗೊಳಿಸಿರುವುದರಿಂದ ಅವರಿಗೆ ಸಂಕಷ್ಟ ಎದುರಾದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...