ಸಂತ್ರಸ್ತೆ ಅಪಹರಣ ಪ್ರಕರಣ: ಎಚ್‌ ಡಿ ರೇವಣ್ಣಗೆ ಹಿನ್ನಡೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

Date:

ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಅವರ ವಿರುದ್ಧ ದೋಷಾರೋಪ ಹೊರಿಸದಂತೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಇಂದು(ಫೆ.5) ತೆರವುಗೊಳಿಸಿದೆ.

​ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಎಚ್‌ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳು ರೇವಣ್ಣ ಅವರಿಗೆ ಕಾನೂನು ಸಂಕಷ್ಟವನ್ನು ಹೆಚ್ಚಿಸುವ ಸೂಚನೆ ನೀಡಿವೆ.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. “ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರಾಗಬೇಕಿರುವುದರಿಂದ ವಿಚಾರಣೆಯನ್ನು ಮುಂದೂಡಬೇಕು,” ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

​ಈ ಮನವಿಯಿಂದ ತೀವ್ರ ಅಸಮಾಧಾನಗೊಂಡ ಹೈಕೋರ್ಟ್‌, ರೇವಣ್ಣ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. “ಇದು ಸಾಂವಿಧಾನಿಕ ನ್ಯಾಯಾಲಯ. ಮ್ಯಾಜಿಸ್ಟ್ರೇಟ್ ಕೋರ್ಟ್ ನೆಪವೊಡ್ಡಿ ಇಲ್ಲಿನ ವಿಚಾರಣೆ ಮುಂದೂಡಲು ಕೋರುವುದು ಸರಿಯಲ್ಲ. ಈ ನ್ಯಾಯಾಲಯದ ಅಧಿಕಾರವನ್ನು ಕುಗ್ಗಿಸಬೇಡಿ. ಇದು ಅಹಂನ ವಿಚಾರವಲ್ಲ, ಆದರೆ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ನಿಮಗೆ ತಿಳಿದಿರಬೇಕು,” ಎಂದು ನ್ಯಾಯಪೀಠ ಕಟುವಾಗಿ ನುಡಿಯಿತು.

ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದ ಹೈಕೋರ್ಟ್‌, ಇದೇ ವೇಳೆ ಮಹತ್ವದ ಆದೇಶವೊಂದನ್ನು ನೀಡಿತು. ರೇವಣ್ಣ ಅವರ ವಿರುದ್ಧ ಕೆಳಹಂತದ ನ್ಯಾಯಾಲಯದಲ್ಲಿ ದೋಷಾರೋಪ ಹೊರಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ತನಿಖಾ ಸಂಸ್ಥೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲು ಹಾದಿ ಸುಗಮವಾದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...