ಮತಗಳ್ಳತನ | ರಾಹುಲ್ ಗಾಂಧಿ ಪಲಾಯನವಾದಿ: ಛಲವಾದಿ ನಾರಾಯಣಸ್ವಾಮಿ ಟೀಕೆ

Date:

ರಾಹುಲ್ ಗಾಂಧಿಯವರು ‘ಹಿಟ್ ಅಂಡ್ ರನ್’ ಪ್ರವೃತ್ತಿಯ ಪಲಾಯನವಾದಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಹುಲ್ ಗಾಂಧಿಯವರು ಕರ್ನಾಟಕದ ಚುನಾವಣೆಯಲ್ಲಿ ದೊಡ್ಡಮಟ್ಟದ ಕಳ್ಳತನ ಆಗಿದೆ ಎಂದು ದೆಹಲಿಯಿಂದ ಅತೀ ಉತ್ಸಾಹದಿಂದ ಬಂದರು. ಆದರೆ ದೊಡ್ಡಮಟ್ಟದ ಕಳ್ಳತನ ಆಗಿರುವ ಬಗ್ಗೆ ಸಾಬೀತುಪಡಿಸಲು ಅವರ ಕೈಯಲ್ಲಿ ಆಗಲಿಲ್ಲ. ಕರ್ನಾಟಕ ಕಾಂಗ್ರೆಸ್ ನಾಯಕರು ಹೇಳಿಕೊಟ್ಟ ವಿಚಾರಗಳನ್ನು ಅವರ ಭಾಷಣದ ರೂಪದಲ್ಲಿ ಹೇಳಿ ಬಂದ ದಾರಿಗೆ ಸುಂಕವಿಲ್ಲವೆಂದು ವಾಪಸ್ ತೆರಳಿದರು” ಎಂದು ವ್ಯಂಗ್ಯವಾಡಿದರು.

“ಪ್ರಬುದ್ಧ ನಾಯಕರಾದರೆ ಹೇಳಿದ ಮಾತನ್ನು ಸಾಬೀತುಪಡಿಸುವವರೆಗೆ ಹೋರಾಟ ಮಾಡುತ್ತಾರೆ. ಚುನಾವಣಾ ಆಯೋಗವು ನೀವು ಪ್ರಮಾಣಪತ್ರದ ಮೂಲಕ ಸಹಿ ಮಾಡಿ ದೂರನ್ನು ನೀಡಿ ಎಂದು ಕೇಳಿದ್ದರು. ದೂರು ಸುಳ್ಳಾಗಿದ್ದರೆ ನೀವು ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ಕೊಟ್ಟಿದ್ದರು. ಆದರೆ ಇವರು ಭಾಷಣ ಮಾತ್ರ ಮಾಡಿದ್ದು, ದೂರು ನೀಡುವ ಸಾಹಸ ಮಾಡಲಿಲ್ಲ. ಕಾರಣವೇನೆಂದರೆ ಇದರಲ್ಲಿ ಸತ್ಯವಿಲ್ಲ ಎಂದು ಅವರಿಗೂ ತಿಳಿದಿತ್ತು” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾರರ ಪಟ್ಟಿಯಲ್ಲಿ ಸತ್ತವರೂ ಇದ್ದಾರೆ ಹಾಗೂ ಒಂದೇ ವಿಳಾಸ, ಹೆಸರುಗಳು ಇರುವ ಮತದಾರರ ಗುರುತಿನ ಚೀಟಿ ಇವೆ. ಈ ರೀತಿ ಇರುವ ಮತದಾರರ ಗುರುತಿನ ಚೀಟಿಗಳನ್ನು ಹುಡುಕಿ ತೆಗೆಯಬೇಕೆಂದು ನಾವು ಹೋರಾಟಗಳನ್ನು ಮಾಡಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಕರ್ನಾಟಕದಲ್ಲಿ ಮತಪಟ್ಟಿ ಪರಿಶೀಲನೆ ಆಗಿಲ್ಲವೆಂದು ಹೇಳುತ್ತಿರುವುದು ಸತ್ಯ. ಇದಕ್ಕೆ ಕಾರಣ ಯಾರು” ಎಂದು ಪ್ರಶ್ನಿಸಿದರು.

“ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿಯ ಪರಿಶೀಲಲನೆ ಮಾಡಿಸಬೇಕಾಗಿತ್ತು. ಆದರೆ ಪರಿಶೀಲನೆ ಮಾಡಿರುವುದಿಲ್ಲ. ಇಂದು ಕರ್ನಾಟಕದಲ್ಲಿ ಮತಪಟ್ಟಿ ಪರಿಶೀಲನೆ ಮಾಡಿಲ್ಲದಿರುವ ಬಗ್ಗೆ ಕಾಂಗ್ರೆಸ್ ಹೋರಾಟ ಮಾಡುತ್ತಿದ್ದಾರೆ. ಚುನಾವಣೆ ಆಯೋಗವು ಬಿಹಾರದಲ್ಲಿ ಮತಪಟ್ಟಿ ಪರಿಶೀಲನೆ ಕೆಲಸವನ್ನೇ ಮಾಡುತ್ತಿದೆ” ಎಂದು ವಿವರಿಸಿದರು.

ರಾಹುಲ್ ಗಾಂಧಿಯವರಿಗೆ ಜ್ಞಾನದ ಕೊರತೆ

“ಒಂದು ಕಡೆ ಬಿಹಾರದಲ್ಲಿ ಮತಪಟ್ಟಿಯಿಂದ ಹೆಸರುಗಳನ್ನು ತೆಗೆಯಬಾರದು ಎಂದು ಹೇಳುತ್ತಾರೆ. ಕರ್ನಾಟಕದಲ್ಲಿ ತೆಗೆಯಲಿಲ್ಲ ಎಂದು ಹೇಳುತ್ತಾರೆ. ಇದು ಡಬಲ್ ಸ್ಟ್ಯಾಂಡರ್ಡ್ ರಾಜಕೀಯ ಅಲ್ಲವೇ? ರಾಹುಲ್ ಗಾಂಧಿಯವರಿಗೆ ಜ್ಞಾನದ ಅರಿವಿನ ಕೊರತೆ ಇರುವುದರಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ. ಆದ್ದರಿಂದ ಜನರು ರಾಹುಲ್ ಗಾಂಧಿಯವರಿಗೆ ಆಳವಾದ ಜ್ಞಾನವಿಲ್ಲ” ಎಂದು ಎಂದು ಟೀಕಿಸಿದರು.

ಸಿಎಂ ಮತಗಳ್ಳನೆಂದು ಆಪ್ತನ ಆರೋಪ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ಮತಗಳ್ಳ ಅನ್ನುವ ಮಾತನ್ನು ಸಿ.ಎಂ ಇಬ್ರಾಹಿಂ ಅವರು ಎಂದು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಹೇಗೆ ಪಲಾಯನ ಮಾಡಿ ಬಾದಾಮಿಯಲ್ಲಿ ನಿಂತು ಮತಗಳ್ಳತನ ಮಾಡಿ ಗೆದ್ದಿದ್ದಾರೆ ಎಂದು ಅವರ ಆಪ್ತ ಸ್ನೇಹಿತರಾದ ಇಬ್ರಾಹಿಂ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಕೂಡ ಗೆದ್ದಿರುವುದು ಮತಗಳ್ಳತನದಿಂದ. ಕಾಂಗ್ರೆಸ್ಸಿನ ಚರಿತ್ರೆಯೇ ಹೇಳುತ್ತದೆ. ಮತಗಳ್ಳರು ಯಾರು ಎಂದರೆ ಕಾಂಗ್ರೆಸ್ಸಿನವರೇ ಬೇರೆ ಯಾರೂ ಅಲ್ಲ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...