ವಾಲ್‌ಮಾರ್ಟ್ ವೃದ್ಧಿ ಬೆಂಬಲದಿಂದ ಕರ್ನಾಟಕದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಬಲ

Date:

ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (ಎಸ್‌ಹೆಚ್‌ಜಿ) ಡಿಜಿಟಲ್ ಮಾರ್ಕೆಟಿಂಗ್ ಮತ್ತು ಆನ್‌ಲೈನ್ ಮಾರಾಟ ಕೌಶಲ್ಯಗಳನ್ನು ಬಲಪಡಿಸಲು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮತ್ತು ಬಹುರಾಷ್ಟ್ರೀಯ ಕಂಪನಿ ವಾಲ್‌ಮಾರ್ಟ್ ವೃದ್ಧಿ ನಡುವೆ ಮೂರು ವರ್ಷಗಳ ಸಹಯೋಗ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಈ ಸಹಯೋಗದಡಿ ವಾಲ್‌ಮಾರ್ಟ್ ವೃದ್ಧಿ—ತನ್ನ ಕಾರ್ಯಕ್ರಮ ಪಾಲುದಾರ ಐಡಿಯಾಸ್ ಟು ಇಂಪ್ಯಾಕ್ಟ್ ಫೌಂಡೇಶನ್ ಮೂಲಕ—ಎಸ್‌ಹೆಚ್‌ಜಿ ಗಳಿಗೆ ಉಚಿತ ಡಿಜಿಟಲ್ ತರಬೇತಿ, ವ್ಯಾಪಾರ ಸಾಧನಗಳು ಮತ್ತು ಮಾರ್ಗದರ್ಶನ ಒದಗಿಸಲಿದೆ. ಇದರಿಂದ ರಾಜ್ಯದ 5,000ಕ್ಕೂ ಹೆಚ್ಚು ಎಸ್‌ಹೆಚ್‌ಜಿಗಳು ತಮ್ಮ ಉತ್ಪನ್ನಗಳನ್ನು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಬೆಳವಣಿಗೆ ಸಾಧಿಸಲಿವೆ.

ಇದುವರೆಗೆ ಎಸ್‌ಹೆಚ್‌ಜಿಗಳ ಮಾರಾಟ ಸರ್ಕಾರ ಆಯೋಜಿಸುವ ಮೇಳಗಳಿಗೆ ಮಾತ್ರ ಸೀಮಿತವಾಗಿತ್ತು. ಈಗ ವಾಲ್‌ಮಾರ್ಟ್ ವೃದ್ಧಿ ಸಹಕಾರದಿಂದ ಡಿಜಿಟಲ್ ಸಾಕ್ಷರತೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ತರಬೇತಿ ಪಡೆದು ಫ್ಲಿಪ್‌ಕಾರ್ಟ್ ಮೂಲಕ ನೇರ ಮಾರಾಟ ಮಾಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಂದಾಳತ್ವದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಎನ್‌ಎಲ್‌ಎಂ ನಿರ್ದೇಶಕ ಆರ್. ಸ್ನೇಹಲ್, ವಾಲ್‌ಮಾರ್ಟ್ ವೃದ್ಧಿ ಪರವಾಗಿ ಪರೂಲ್ ಸೋನಿ ಮತ್ತು ಸಂತೋಷ್ ವಾಘ್ ಒಪ್ಪಂದಕ್ಕೆ ಸಹಿ ಹಾಕಿದರು.

“ಈ ಉಪಕ್ರಮ ಎಸ್‌ಹೆಚ್‌ಜಿ ವ್ಯವಸ್ಥೆಯನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಸಾವಿರಾರು ಮಹಿಳೆಯರಿಗೆ ಹೊಸ ಮಾರುಕಟ್ಟೆ ಮತ್ತು ಉತ್ತಮ ಆದಾಯ ಒದಗಿಸಲಿದೆ. ಡಿಜಿಟಲ್ ಮಾರ್ಕೆಟಿಂಗ್ ಕೊರತೆ ದೂರಾಗಲಿದೆ,” ಎಂದು ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು.

“ಕರ್ನಾಟಕದ ಎಸ್‌ಹೆಚ್‌ಜಿ ಉತ್ಪನ್ನಗಳಿಗೆ ಜಾಗತಿಕ ಗೋಚರತೆ ದೊರೆಯಲಿದೆ. ವರ್ಷಕ್ಕೆ ಎರಡು ಬಾರಿ ಮಾತ್ರ ಮಾರಾಟವಾಗುತ್ತಿತ್ತು; ಈಗ ವರ್ಷಪೂರ್ತಿ ಮಾರಾಟ ಸಾಧ್ಯ. ಸ್ಥಳೀಯ ಪ್ರತಿಭೆಗೆ ವಾಲ್‌ಮಾರ್ಟ್ ವೃದ್ಧಿ ತಜ್ಞತೆ ಬೇಕಾಗಿತ್ತು,” ಎಂದು ಡಾ. ಶಾಲಿನಿ ರಜನೀಶ್ ತಿಳಿಸಿದರು.

ಮುಖ್ಯ ಕಾರ್ಯದರ್ಶಿಯವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚು ಜನ ಸಂಚಾರದ ಸ್ಥಳದಲ್ಲಿ ವಿಶೇಷ ಎಸ್‌ಹೆಚ್‌ಜಿ ಉತ್ಪನ್ನ ಕೇಂದ್ರ ಸ್ಥಾಪನೆ ಯೋಜನೆ ಪ್ರಕಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...