ವಕ್ಫ್‌ ತಿದ್ದುಪಡಿ ಮಸೂದೆ ‘ಉಮೀದ್‌’ ಮುಸ್ಲಿಮರ ವಿರುದ್ಧ ತಂದ ಕಾಯ್ದೆಯಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ವಕ್ಫ್‌ ತಿದ್ದುಪಡಿ ಮಸೂದೆ “ಉಮೀದ್‌” ಮುಸ್ಲಿಮರ ವಿರುದ್ಧ ತಂದಂಥ ಕಾಯ್ದೆಯಲ್ಲ; ವಕ್ಫ್‌ನಲ್ಲಿ ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಗಾಗಿ ಸಂಸತ್‌ನಲ್ಲಿ ಮಂಡಿಸಿ, ಅಂಗೀಕರಿಸಿದ ಮತ್ತು ರಾಷ್ಟ್ರಪತಿ ಅನುಮೋದಿಸಿದ ಕಾಯ್ದೆಯಾಗಿದ್ದು, ಎಲ್ಲರೂ ಗೌರವಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿ, “ಕರ್ನಾಟಕದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಜಾರಿ ತರುವುದಿಲ್ಲ ಎಂಬ ಸಚಿವ ಜಮೀರ್‌ ಅಹಮದ್‌ ಹೇಳಿಕೆಗೆ ಪ್ರತಿಕ್ರಿಯಿಸಿ ಜಮೀರ್‌ ಒಬ್ಬರೇ ಅಲ್ಲ, ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಯಾರೇ ಹೇಳಿದರೂ ಸರಿ ಅನುಷ್ಠಾನಕ್ಕೆ ತರುವ ಅಗತ್ಯತೆಯಿದೆ” ಎಂದು ಹೇಳಿದರು.

“ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಮರ ವಿರುದ್ಧವಾಗಿ ಅಲ್ಲ; ವಕ್ಫ್‌ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಸ್ಪಷ್ಟಪಡಿಸಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲೆಂದೇ ಜಾರಿ ತಂದಿದ್ದಾಗಿದೆ. ಅದರಂತೆ ಇದು ವಕ್ಫ್‌ ಆಡಳಿತದಲ್ಲಿ ಪಾರದರ್ಶಕತೆ ತರುತ್ತದೆ. ವಕ್ಫ್‌ ಆದಾಯವನ್ನು ವೃದ್ಧಿಸುತ್ತದೆ ಮತ್ತು ಬಡ ಮುಸಲ್ಮಾನರ ಸೇವೆಗೇ ಸಲ್ಲುತ್ತದೆ. ಈ ಮೂಲಕ ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ಸೇವೆಗೆ ಬಲ ತುಂಬುವ ಧ್ಯೇಯದಿಂದ ಉಮೀದ್‌ ಜಾರಿ ತರಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಪಿಎ ಸಹ ಸಂಸತ್‌ ಕಾಯ್ದೆ ಜಾರಿ ತಂದಿತ್ತು: ವಕ್ಫ್‌ ತಿದ್ದುಪಡಿ ಕಾಯ್ದೆ 1995ರಲ್ಲೂ ಸಂಸತ್‌ ಕಾಯ್ದೆಯಾಗಿತ್ತು. 2013ರಲ್ಲಿ ಯುಪಿಎ ಸರ್ಕಾರ ತಂದದ್ದೂ ಸಹ ಸಂಸತ್‌ ಕಾಯ್ದೆಯೇ ಆಗಿತ್ತು. ಈಗ 2025ರಲ್ಲಿ NDA ಸರ್ಕಾರ ತಂದಿರುವುದೂ ಸಹ ಸಂಸತ್‌ ಕಾಯ್ದೆಯೇ ಆಗಿದೆ. ಯುಪಿಎಗಿಂತ ಹೆಚ್ಚು ಪಾರದರ್ಶಕವಾಗಿದೆ” ಎಂದರು.

ಸಂಸತ್‌ ಮತ್ತು ರಾಷ್ಟ್ರಪತಿ ಅನುಮೋದಿಸಿದ ಕಾಯ್ದೆ

“NDA ಸರ್ಕಾರ ವಕ್ಫ್‌ ಸಚಿವಾಲಯದಲ್ಲಿ ಸಹ ಹಲವು ಸಭೆ, ಸಮಾಲೋಚನೆ ನಡೆಸಿ, ಸದನದಲ್ಲಿ ಸುದೀರ್ಘ ಅವಧಿ ಚರ್ಚಿಸಿ ಮಂಡಿಸಿ ಅಂಗೀಕರಿಸಿದಂತಹ ತಿದ್ದುಪಡಿ ಕಾಯ್ದೆಯಾಗಿದೆ. ಮಾತ್ರವಲ್ಲ ರಾಷ್ಟ್ರಪತಿ ಅವರೂ ಸಹ ಅನುಮೋದಿಸಿ ಜಾರಿಗೊಳಿಸಿದಂತಹ ಕಾಯ್ದೆಯಾಗಿದೆ. ಹಾಗಾಗಿ ಹಿಂದಿನಂತೆ ಈಗಲೂ ಅನುಷ್ಠಾನಕ್ಕೆ ತರಲೇಬೇಕಾಗುತ್ತದೆ” ಎಂದು ಹೇಳಿದರು.

ವೋಟ್‌ ಬ್ಯಾಂಕ್‌ಗಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ

“ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ವೋಟ್‌ ಬ್ಯಾಂಕ್‌ಗಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಜನರೇನು ಮೂರ್ಖರಲ್ಲ ಪ್ರಜ್ಞಾವಂತರಿದ್ದಾರೆ” ಎಂದು ಜೋಶಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...