ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ: ಆರ್.‌ ಅಶೋಕ್

Date:

  • ವಿಜಯೇಂದ್ರರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ದುಡಿಯುವೆ‌
  • ‘ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ’

ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ. ಕಾಂಗ್ರೆಸ್ ದುರಾಡಳಿತ, ಮೋಸದ ಯೋಜನೆಗಳ ಕುರಿತು ತಿಳಿಸಿ ಜನಜಾಗೃತಿ ಮೂಡಿಸುತ್ತೇವೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಿಜಯೇಂದ್ರ ಅವರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ಮತ್ತು ಪಕ್ಷ ಸಂಘಟನೆಗೆ ಜೋಡೆತ್ತಿನಂತೆ ದುಡಿಯುತ್ತೇವೆ” ಎಂದರು.

“ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ. ಹತ್ತಾರು ತಪ್ಪುಗಳನ್ನು ಕಾಂಗ್ರೆಸ್ ಸರಕಾರ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ನಾವು ಇವುಗಳ ವಿರುದ್ಧ ಹೋರಾಟ ಮಾಡುತ್ತೇವೆ. ಈ ಸಾರಿ ಇನ್ನೂ ಹೆಚ್ಚು ಹೋರಾಟ ಮಾಡಲಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಗಳೂರು- ಉಡುಪಿಯಲ್ಲಿ ಹಿಂದೂ ಕಾರ್ಯಕರ್ತರ ಗಡೀಪಾರು ಮಾಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 30-40 ಹಿಂದೂ ಕಾರ್ಯಕರ್ತರ ಕೊಲೆ ಆಗಿತ್ತು. ಟಿಪ್ಪುವಿನ ವೈಭವೀಕರಣ ನಡೆದಿತ್ತು. ಕಾಂಗ್ರೆಸ್ಸಿನ ಮತಾಂಧನಾದ ಟಿಪ್ಪು ಸಂಸ್ಕೃತಿಯನ್ನು ಪಕ್ಷ ಜನರಿಗೆ ತಿಳಿಸಲಿದೆ” ಎಂದು ತಿಳಿಸಿದರು.

“ಸಂಕಷ್ಟದಲ್ಲಿರುವ ರೈತರಿಗೆ ಅವರ ಪರಿಹಾರ ಕೊಡಬೇಕು. ಈಗಿನ ಸರಕಾರ ನಯಾಪೈಸೆ ಕೊಟ್ಟಿಲ್ಲ. ಈ ಸರಕಾರದ ಕಿವಿ ಹಿಂಡುವ ಕಾರ್ಯ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರ ನೇಮಕಾತಿಯಿಂದ ಕಾಂಗ್ರೆಸ್ಸಿಗರಿಗೆ ನಡುಕ ಉಂಟಾಗಿದೆ. ಇನ್ನು ಮುಂದೆ ಕಾಂಗ್ರೆಸ್ ಆಟ ನಡೆಯುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

“ರಾಜ್ಯದಲ್ಲಿ ಬಿಜೆಪಿ ಹೊಸದಾಗಿ ಯುವ ನಾಯಕತ್ವಕ್ಕೆ ಅವಕಾಶ ಕೊಟ್ಟಿದ್ದು, ಕಾರ್ಯಕರ್ತರಲ್ಲಿ ಹುರುಪು ತುಂಬಿದೆ. ಮತ್ತೆ ಬಿಜೆಪಿಯನ್ನು ಕರ್ನಾಟಕದಲ್ಲಿ ಸಮರ್ಥವಾಗಿ ಕಟ್ಟುವ ದೃಷ್ಟಿಯಿಂದ ಕೇಂದ್ರದ ನಾಯಕರು, ಲೋಕಸಭಾ ಸದಸ್ಯರು, ಶಾಸಕರು, ಕಾರ್ಯಕರ್ತರು ತೀರ್ಮಾನ ಮಾಡಿ ವಿಜಯೇಂದ್ರರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಂಚಲನ ಉಂಟಾಗಿದೆ” ಎಂದು ವಿಶ್ಲೇಷಿಸಿದರು.

“ಉಳಿದ ಶಾಸಕರ ಜೊತೆ ಒಗ್ಗಟ್ಟಾಗಿ ಮುಂದಿನ ಅಧಿವೇಶನದಲ್ಲಿ ಕೆಲಸ ಮಾಡಲಿದ್ದೇನೆ. ಬೆಳಿಗ್ಗೆ ನಾನು ಬಸವರಾಜ ಬೊಮ್ಮಾಯಿ, ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲರೂ ಒಂದಾಗಿ ಸತ್ತು ಹೋದ ಆಡಳಿತಕ್ಕೆ ಚುರುಕು ಮುಟ್ಟಿಸಲಿದ್ದೇವೆ” ಎಂದು ಎಚ್ಚರಿಸಿದರು.

“ಉಪ ಮುಖ್ಯಮಂತ್ರಿಯವರು ನಾನೇ ಶ್ಯಾಡೊ ಸಿಎಂ ಎಂದು ಎಲ್ಲ ಕಾರ್ಯಕ್ಕೆ ಅವರೇ ಮುಂದೆ ಹೋಗುತ್ತಿದ್ದಾರೆ. ಆಂತರಿಕ ಕಲಹ ನಡೆಯುತ್ತಿದೆ. ಮೊನ್ನೆ ದಾಳಿ ಆದಾಗ 100 ಕೋಟಿಗೂ ಹೆಚ್ಚು ಹಣ ಸಿಕ್ಕಿದೆ. ಕೇಳಿದರೆ ನಂದಲ್ಲ, ನಂದಲ್ಲ ಎನ್ನುತ್ತಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...