1000 ಮದ್ಯದಂಗಡಿಗಳನ್ನು ನಾವು ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

Date:

  • ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ: ಸಿಎಂ ಸಿದ್ದರಾಮಯ್ಯ
  • ಬಿಜೆಪಿಯವರ ಸತ್ಯ ಶೋಧನೆ ಯಾವುದರ ಬಗ್ಗೆ: ಸಿಎಂ ಪ್ರಶ್ನೆ

ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ನಾವು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಚಿತ್ರದುರ್ಗದಲ್ಲಿ ಶುಕ್ರವಾರ ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ಅವರು, “ಮದ್ಯದಂಗಡಿಗಳನ್ನು ರಾಜ್ಯದಲ್ಲಿ ಹೆಚ್ಚಿಸಬೇಕು ಎಂಬುವ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, “ಆ ಎರಡು ಪಕ್ಷಗಳ ಮೈತ್ರಿಯೇ ಅಪವಿತ್ರ ಮೈತ್ರಿ. ಜನತಾ ದಳ (ಜಾತ್ಯತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರುವ ಬಗ್ಗೆ ಮಾತನಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, “ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹಾಗೂ ಈ ಮೊತ್ತದ ಬದ್ಧತೆ ವೆಚ್ಚ ಇರಲಿಲ್ಲ. ಎಲ್ಲಾ ಹಾಳು ಮಾಡಿ ಈಗ ಹೇಳುತ್ತಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? 4,860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಶಾಸಕರೇ ಈ ಆರೋಪ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಹೆಚ್ಚುವರಿ ಅನುದಾನ ದೊರೆಯುತ್ತಿಲ್ಲ ಎಂದು ಹೇಳಿದ್ದಾರೆ. ನಿಯಮಿತ ಅನುದಾನ ದೊರೆಯುತ್ತಿದೆ. ಭದ್ರಾ ಯೋಜನೆಗೆ 200 ಕೋಟಿ ರೂ.ಗಳನ್ನು ಭೂ ಸ್ವಾಧೀನಕ್ಕೆ ನೀಡಲಾಗಿದೆ. ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇಲ್ಲ ಹಾಗೂ ಗ್ಯಾರಂಟಿ ಯೋಜನೆಗಳಿಗೂ ಅನುದಾನದ ಕೊರತೆ ಇಲ್ಲ” ಎಂದರು.

ಸತ್ಯ ಶೋಧನೆ ಯಾವುದರ ಬಗ್ಗೆ?

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗಕ್ಕೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಸತ್ಯ ಶೋಧನೆ ಮಾಡಲು ಏನಾಗಿದೆ? ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ? ಈದ್-ಮಿಲಾದ್ ಸಂದರ್ಭದಲ್ಲಿ ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ, ಯಾರು ಕಲ್ಲು ಎಸೆದಿದ್ದಾರೋ ಅವರ ಮೇಲೆ ಕ್ರಮ ಜರುಗಿಸಲಾಗಿದೆ. ಅವರು ಯಾವ ಪಕ್ಷದವರೇ ಆಗಿದ್ದರೂ, ಯಾರೇ ಆಗಿದ್ದರೂ ಅವರನ್ನು ಬಿಡಬೇಡಿ, ಕಾನೂನು ಕೈಗೆತ್ತಿಕೊಳ್ಳಲು ಬಿಡಬೇಡಿ ಎಂದು ಪೊಲೀಸರಿಗೆ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...