ಸಂಕಷ್ಟ ಬಂದಾಗ ಕುರುಬ ಸಮುದಾಯ ಸಿದ್ದರಾಮಯ್ಯಗೆ ನೆನಪಾಗಿದೆ: ಎಚ್‌ ವಿಶ್ವನಾಥ್

Date:

ಕುರುಬ ಸಮುದಾಯಕ್ಕೆ ಈವರೆಗೂ ಯಾವುದೇ ಕೊಡುಗೆ ನೀಡದ ಸಿದ್ದರಾಮಯ್ಯ ಈಗ ಎಸ್‌ಟಿ ಸಮುದಾಯಕ್ಕೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಇದು ಕೇವಲ ನಾಟಕ, ಸಿಎಂ ಸ್ಥಾನಕ್ಕೆ ಸಂಕಷ್ಟ ಬಂದಿದೆ. ಈಗ ಕುರುಬರು ನೆನಪಾಗಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಟೀಕಿಸಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗಲೆಲ್ಲಾ ಕುರುಬರ ನೆನಪಾಗುತ್ತದೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ಎಂದೋ ಈ ಕೆಲಸ ಮಾಡಬಹುದಿತ್ತು. ಆದರೆ ಅದನ್ನು ಮಾಡಿಲ್ಲ” ಎಂದು ಹರಿಹಾಯ್ದರು.

“ಕುರುಬ ಸಮುದಾಯದ ನಾಯಕರನ್ನು ವ್ಯವಸ್ಥಿತವಾಗಿ ತುಳಿದಿದ್ದಾರೆ. ನನ್ನನ್ನು ಸಹ ಸಿದ್ದರಾಮಯ್ಯ ತುಳಿದಿದ್ದಾರೆ. ಕುರುಬ ನಾಯಕರು ಬೆಳೆಯಲು ಅವರು ಬಿಟ್ಟಿಲ್ಲ. ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುವ ಸಿದ್ದರಾಮಯ್ಯ ಸಮುದಾಯದ ಪರವಾಗಿ ಏನು ಹೋರಾಟ ಮಾಡಿದ್ದಾರೆ? ಬರೀ ಬೊಗಳೆ ಬಿಟ್ಟುಕೊಂಡು ಓಡಾಡ್ತಿದ್ದಾರೆ. ಇದೇ ಅವರ ಸಾಧನೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುರುಬ ಸಮುದಾಯವನ್ನು ಎಸ್‌ಟಿ ಟ್ಯಾಗ್ ಮಾಡಬೇಕು ಎಂದು ಸಿದ್ದರಾಮಯ್ಯ ಎಂದೂ ಸಚಿವ ಸಂಪುಟದಿಂದ ಪಾಸ್ ಮಾಡಿಲ್ಲ. ಯಾವತ್ತಿಗೂ ವಿರೋಧಿಸಿದವರು. ಆದರೆ ಬಿಜೆಪಿಯವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ನಾವೆಲ್ಲ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳಿಸಿದ್ದೆವು. ಕುಲಶಾಸ್ತ್ರೀಯ ಅಧ್ಯಯನವನ್ನು ಮಾಡಲಾಗಿತ್ತು. ನಂತರ ಬಂದ ಸಿದ್ದರಾಮಯ್ಯ ಸರ್ಕಾರ ಅದನ್ನು ಸುಮ್ಮನೆ ಕೇಂದ್ರ ಸರ್ಕಾರಕ್ಕೆ ಕಳುಹಿಸಿದರು. ಕಾನೂನು ಪ್ರಕಾರ ಅದು ಆಗಲಿಲ್ಲ” ಎಂದರು.

“ಕುರುಬ ಸಮುದಾಯದ ನಾಯಕತ್ವವವನ್ನು ತುಳಿದರು. ಪರಿಶಿಷ್ಠ ಪಂಗಡಕ್ಕೆ ಸೇರಬೇಕೆಂದು ಹೋರಾಟ ಮಾಡಿಕೊಂಡು ಬಂದೆವು. ಆದರೆ ಯಾವತ್ತಾರೂ ಸಿದ್ದರಾಮಯ್ಯ ಸಹಾಯ ಮಾಡಿದ್ದಾರಾ? ನಾಲ್ಕು ಜನರನ್ನು ಎಂಎಲ್ ಸಿ ಮಾಡಿದ್ದೀರಲ್ಲ ಅದರಲ್ಲಿ ಯಾರಾದರೂ ಹಿಂದುಳಿದ ವರ್ಗದವರು ಇದ್ದಾರಾ? ಎಚ್ ಎಂ ರೇವಣ್ಣ ಅವರನ್ನು ಮಾಡಬಹುದಿತ್ತಲ್ವಾ” ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಜಾತಿ ಗಣತಿಗೆ ಆದೇಶಿಸಿರುವ ಬಗ್ಗೆ ಮಾತನಾಡಿ, “ಕಾಂತರಾಜು ಆಯೋಗ ನೀಡಿರುವ ಜಾತಿಗಣತಿ ವರದಿ ನೀಟಾಗಿದೆ. ಆದರೆ, ಅದನ್ನು ಜಾರಿಗೊಳಿಸಲು ಧೈರ್ಯವನ್ನೇ ತೋರಲಿಲ್ಲ. ಕಾಂತರಾಜು ಆಯೋಗ ನೀಡಿದ ಜಾತಿ ಗಣತಿ ವರದಿಯನ್ನು 10 ವರ್ಷ ಕಾಲ ತಲೆಕೆಳಗೆ ಇಟ್ಟುಕೊಂಡು ಮಲಗಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...