ಸಿದ್ದರಾಮಯ್ಯ ಕುರ್ಚಿ ಅಲ್ಲಾಡಿದಾಗೆಲ್ಲ ಸಾಧನಾ ಸಮಾವೇಶ: ಬಿ ವೈ ವಿಜಯೇಂದ್ರ ಟೀಕೆ

Date:

ಸಿದ್ದರಾಮಯ್ಯನವರ ಕುರ್ಚಿ ಯಾವಾಗ ಬಲ ಕಳಕೊಳ್ಳುತ್ತದೋ, ಯಾವಾಗ ಕುರ್ಚಿ ಅಲ್ಲಾಡುತ್ತಿದೆ ಅನಿಸಿದಾಗ ಸಮಾವೇಶಗಳನ್ನು ಅವರು ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಕಲಬುರಗಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಅಹಿಂದ ಸಮುದಾಯಗಳನ್ನು ಮುಂದೆ ಇಡುತ್ತಾರೆ. ಆ ಸಮುದಾಯಗಳನ್ನು ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಸಮಾವೇಶ ಮಾಡಿ, ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಬೆದರಿಕೆ ಒಡ್ಡುವ ಕುತಂತ್ರಗಳನ್ನು ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ಅವರ ಎರಡೂವರೆ ವರ್ಷದ ಆಡಳಿತದಲ್ಲಿ ಸಾಧನೆ ಶೂನ್ಯ” ಎಂದು ಟೀಕಿಸಿದರು.

“ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಸಾಧನೆ ಮಾಡಿದ್ದರೆ ರಾಜ್ಯದ ಉಸ್ತುವಾರಿ ಸುರ್ಜೇವಾಲಾ ಅವರು ಪದೇ ಪದೆ ಬೆಂಗಳೂರಿಗೆ ಬಂದು ಶಾಸಕರನ್ನು ಮಾತನಾಡಿಸುವ ಮತ್ತು ಅವರ ಅಸಮಾಧಾನ ಹೋಗಲಾಡಿಸುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ. ಶಾಸಕರ ಅಸಮಾಧಾನ ಅರ್ಥ ಮಾಡಿಕೊಳ್ಳಲು ಮತ್ತು ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಯಾರನ್ನು ಮಾಡಬೇಕೆಂದು ಶಾಸಕರ ಅಂತರಾಳದಲ್ಲಿ ಏನಿದೆ ಎಂದು ತಿಳಿಯಲು ಸುರ್ಜೇವಾಲಾ ಅವರು ಪದೇ ಪದೆ ಬರುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭರ್ಜರಿಯಾಗಿ ಪೈಪೋಟಿ ನಡೆಯುತ್ತಿದೆ. ಕುದುರೆ ವ್ಯಾಪಾರವೂ ಆರಂಭವಾಗಿದೆ. ಶಾಸಕರ ಬಲಕ್ಕಾಗಿ ರೇಟ್ ಫಿಕ್ಸಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯನವರು ನಾನೇ 5 ವರ್ಷ ಸಿಎಂ ಎಂದು ದೆಹಲಿಯಲ್ಲಿ ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡಿಗೆ ನೇರವಾಗಿ ಸವಾಲನ್ನು ಹಾಕಿದ್ದಾರೆ” ಎಂದು ಹೇಳಿದರು.

“ದೆಹಲಿಯಲ್ಲಿ ರಾಹುಲ್ ಗಾಂಧಿಯವರು ಸಿದ್ದರಾಮಯ್ಯನವರಿಗೆ ಭೇಟಿಗೆ ಅವಕಾಶವನ್ನೂ ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದು ವಿವರಿಸಿದರು. ಕಾಂಗ್ರೆಸ್ ಶಾಸಕರು ಒಳಗೊಳಗೇ ಕತ್ತಿ ಮಸೆಯುತ್ತಿದ್ದಾರೆ. ಸಿದ್ದರಾಮಯ್ಯರ ಪರ ಕೆಲವರು, ಡಿಕೆಶಿ ಪರ ಇನ್ನೂ ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೀದಿ ವ್ಯಾಪಾರಿಗಳಿಗೆ ನೋಟಿಸ್

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಗೆ ರಾಜ್ಯ ಸರಕಾರದ ನೋಟಿಸ್ ನೀಡಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಒಂದು ಕಡೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ, ಇದನ್ನೇ ನೆಪ ಒಡ್ಡಿ ಬೀದಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಹೆದರಿಸುವ ಕೆಲಸ ಮಾಡುತ್ತಿದೆ” ಎಂದು ಆಕ್ಷೇಪಿಸಿದರು.

ರಾಜಕೀಯವಾಗಿ ಮುಗಿಸುವ ಷಡ್ಯಂತ್ರ

ರೌಡಿ ಶೀಟರ್ ಕೊಲೆ ಕೇಸಿನಲ್ಲಿ ಶಾಸಕ ಬೈರತಿ ಬಸವರಾಜು ಅವರ ಮೇಲೆ ಹೆಸರನ್ನು ಆರೋಪಿಯಾಗಿ ಸೇರಿಸಿದ ಕುರಿತ ಪ್ರಶ್ನೆಗೆ ಉತ್ತರ ನೀಡಿ, “ಕಳೆದ 2 ವರ್ಷದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ಶಾಸಕರನ್ನು ಬೆದರಿಸುವ ಕುತಂತ್ರಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ದಕ್ಷಿಣ ಕನ್ನಡದಲ್ಲಿ ನಮ್ಮ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ನೋಂದಾವಣೆ ಮಾಡಿದ್ದರು. ಅವರನ್ನು ಬಂಧಿಸುವ ಪ್ರಯತ್ನ ಮಾಡಿದ್ದು, ಅದು ಸಫಲವಾಗಲಿಲ್ಲ. ನಂತರ ಭರತ್ ಶೆಟ್ಟಿಯವರ ಮೇಲೆ ಎಫ್‍ಐಆರ್ ದಾಖಲಿಸಿದ್ದರು. ವಿವಿಧ ಶಾಸಕರ ಮೇಲೆ ಎಫ್‍ಐಆರ್ ದಾಖಲಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಹಿಂದುಳಿದ ವರ್ಗಗಳ ನಾಯಕ- ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಇದರ ಹಿಂದಿದೆ ಎಂದು ವಿಜಯೇಂದ್ರ ತಿಳಿಸಿದರು. ಕೊಲೆಯಾದವನ ತಾಯಿ ಕೂಡ ತಾವು ಬೈರತಿ ಬಸವರಾಜು ಅವರ ಹೆಸರು ಹೇಳಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...