ಕಂಡೋರ ಭೂಮಿ, ಬೆಟ್ಟಗುಡ್ಡ ಲೂಟಿ ಮಾಡಿದ್ದು ಯಾರಪ್ಪ ಶಿವಕುಮಾರ್:‌ ಕುಮಾರಸ್ವಾಮಿ ಪ್ರಶ್ನೆ

Date:

  • ‘ಡಿಕೆ ಶಿವಕುಮಾರ್ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ!‌’
  • ‘ಕನಕಪುರ ಬೆಂಗಳೂರಿಗೆ ಸೇರಿಸಿದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ’

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿಕೆ ಶಿವಕುಮಾರ್‌ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

“ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂಬ ಡಿಕೆ ಶಿವಕುಮಾರ್‌ ಮಾತಿಗೆ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ದರ್ಪದ ಮಾತುಗಳನ್ನು ಡಿಸಿಎಂ ಹೇಳಿದ್ದಾರೆ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ! ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ಬುದ್ಧಿವಂತಿಕೆ, ‘ಅಸಾಮಾನ್ಯ’ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ” ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ” ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ. ಎಲ್ಲವೂ ನಿಗೂಢ!” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಗ್ನಿವೀರ’ ಯೋಜನೆ ಟೊಳ್ಳೆಂದು ಸಾರಿದೆ ಇಸ್ರೇಲ್ ಯುದ್ಧ!

“ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಎಚ್‌ ಡಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ, ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ” ಎಂದು ಪ್ರಶ್ನಿಸಿದ್ದಾರೆ.

“ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ನಾಡಪ್ರಭು ಕೆಂಪೇಗೌಡರು, ಕೆಂಗಲ್‌ ಹನುಮಂತಯ್ಯನವರು, ಶಿವಕುಮಾರ ಸ್ವಾಮೀಜಿಗಳು, ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚುತ್ತಾನೆಯೇ?” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...