ಕೋಟಿ ಕೋಟಿ ಖರ್ಚು ಮಾಡಿ, ಕಾಟಾಚಾರಕ್ಕೆ ಯಾಕೆ ಬೆಳಗಾವಿ ಅಧಿವೇಶನ ನಡೆಸುತ್ತೀರಿ: ಯತ್ನಾಳ್‌ ಪ್ರಶ್ನೆ

Date:

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಬಗ್ಗೆ ಗಂಭೀರ ತಕರಾರು ಎತ್ತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುರುವಾರ ಮಾತನಾಡಿದರು.

ಇಂದಿನ ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ವಿಷಯದ ಬಗ್ಗೆ ಯತ್ನಾಳ್‌ ಮಾತನಾಡಿ, “ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣದ ಆಶಯವೇ ಈಡೇರಿಲ್ಲ. ಪ್ರತಿ ವರ್ಷ ಹೀಗೆ ಚರ್ಚೆ ನಡೆಸಿ, ಕೋಟಿ ಕೋಟಿ ಖರ್ಚು ಲೆಕ್ಕ ತೋರಿಸಿ ಹೋಗುತ್ತೇವೆ. ಈ ಕಾಟಾಚಾರಕ್ಕೆ ಈ ಅಧಿವೇಶನ ಬೇಕಾ” ಎಂದು ಸದನದಲ್ಲೇ ಪ್ರಶ್ನಿಸಿದರು.

ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಇಲಾಖೆಗಳ ಸ್ಥಳಾಂತರ ಈವರೆಗೂ ಆಗಿಲ್ಲ. ಅಧಿಕಾರಿಗಳು ಬೆಂಗಳೂರು ಬಿಟ್ಟು ಇಲ್ಲಿಗೆ ಬರುವುದಿಲ್ಲ. ಈ ಭಾಗದ ಬಗ್ಗೆ ಸರ್ಕಾರ ನಿಜಕ್ಕೂ ಕಾಳಜಿ ಹೊಂದಿದ್ದರೆ ಒಂದು ಸಚಿವ ಸಂಪುಟ ಬೆಂಗಳೂರಲ್ಲಿ ನಡೆಸಲಿ, ಮತ್ತೊಂದು ಸಚಿವ ಸಂಪುಟ ಸಭೆ ಬೆಳಗಾವಿಯಲ್ಲಿ ನಡೆಸಲಿ. ಅದು ಬಿಟ್ಟು ಸುಮ್ಮನೇ ಕಾಟಾಚಾರಕ್ಕೆ ಅಧಿವೇಶನ ನಡೆಸುವುದು ಬೇಡ” ಎಂದು ಕಡ್ಡಿಮುರಿದಂತೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆಗಳ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಮೊನ್ನೆ ನಡೆದ ಕಬ್ಬು ಹೋರಾಟಗಾರರ ಹಿಂದೆ ಒಂದು ರಾಜಕೀಯ ಗ್ಯಾಂಗ್‌ ಇದೆ. ತಾಕತ್ತಿನ ಬಗ್ಗೆ ಮಾತನಾಡುವ ಕೆಲವು ಹೋರಾಟಗಾರರು ತಾವೇ ಸಕ್ಕರೆ ಕಾರ್ಖಾನೆ ನಡೆಸಿ ಈ ದರವನ್ನು ಕೊಡಲಿ. ಮಾಧ್ಯಮಗಳಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಯೇ ಗೊತ್ತಿಲ್ಲದೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ಮೆಕ್ಕೆಜೋಳದ ದರ ಕುಸಿತ ಕಂಡಿದೆ. ರಾಜ್ಯ ಸರ್ಕಾರದವರು ಕೇಂದ್ರ ಮೇಲೆ ಆರೋಪ ಮಾಡುತ್ತಾರೆ. ಇಲ್ಲಿ ಎರಡೂ ಸರ್ಕಾರಗಳ ಜವಾಬ್ದಾರಿ ಇದೆ. ಸರಿಯಾದ ಮನವಿ ಮಾಡಿ ಕೇಂದ್ರದಿಂದ ಅನುದಾನ ಪಡೆಯಲಿ. ರೈತರು ಅಮಾಯಕರು. ಅವರ ಕಷ್ಟಪಟ್ಟು ಬೆಳೆದ ಬೆಳೆಯನ್ನು ಹೇಗೆಗೋ ಖರೀದಿಸುವುದು ಸೂಕ್ತವಲ್ಲ” ಎಂದರು.

ಶುಕ್ರವಾರ ಇಲ್ಲವೇ ಸೋಮವಾರ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...